ಎರಡೇ ವಾರಕ್ಕೆ ಕಳಿಸಿ ಎಂದ್ರೂ ರನ್ನರ್​ ಅಪ್​ ಮಾಡಿದ್ರು: ನನ್ನ ಉದ್ದೇಶವೇ ಬೇರೆಯಿತ್ತು ಎಂದ ಡ್ರೋನ್​ ಪ್ರತಾಪ್

Published : Feb 06, 2024, 04:29 PM IST
ಎರಡೇ ವಾರಕ್ಕೆ ಕಳಿಸಿ ಎಂದ್ರೂ ರನ್ನರ್​ ಅಪ್​ ಮಾಡಿದ್ರು: ನನ್ನ ಉದ್ದೇಶವೇ ಬೇರೆಯಿತ್ತು ಎಂದ ಡ್ರೋನ್​ ಪ್ರತಾಪ್

ಸಾರಾಂಶ

ಬಿಗ್​ಬಾಸ್​ನಲ್ಲಿ ಮೊದಲ ರನ್ನರ್​ ಅಪ್​ ಆಗಿರುವ ಡ್ರೋನ್​ ಪ್ರತಾಪ್​ ಬಿಗ್​ಬಾಸ್​ ಜರ್ನಿ ಕುರಿತು ಹೇಳಿದ್ದೇನು?  

ಕೊನೆಯವರೆಗೂ ಬಿಗ್​ಬಾಸ್​ನಲ್ಲಿ ಇರುತ್ತೇನೆ. ಫಿನಾಲೆಯಲ್ಲಿ ಸುದೀಪ್​ ಅವರು ಎತ್ತಲು ಹಿಡಿಯುವ ಕೈಯಲ್ಲಿ ನನ್ನದೂ ಒಂದಾಗಿರುತ್ತದೆ ಎಂದು ಅಂದುಕೊಂಡಿರಲೇ ಇಲ್ಲ. ಮೊದಲ ವಾರದಲ್ಲಿಯೇ ಅಲ್ಲಿ ನಡೆದ ಕೆಲವು ಘಟನೆಗಳನ್ನು ನೋಡಿ ಶೀಘ್ರವೇ ಬಿಗ್​ಬಾಸ್​ನಿಂದ ಹೊರಕ್ಕೆ ಹೋಗುತ್ತೇನೆ ಅಂದುಕೊಂಡಿದ್ದೆ ಎನ್ನುತ್ತಲೇ ಬಿಗ್​ಬಾಸ್​ ರನ್ನರ್​ ಅಪ್​ ಡ್ರೋನ್​ ಪ್ರತಾಪ್​ ಕಲರ್ಸ್​ ಕನ್ನಡ ವಾಹಿನಿಗೆ ಸಂದರ್ಶನ ನೀಡಿದ್ದಾರೆ. ಬಿಗ್​ಬಾಸ್​ನಲ್ಲಿ ಫಿನಾಲೆಯವರೆಗಿನ ತಮ್ಮ ಜರ್ನಿಯ ಕುರಿತು ಅವರು ಕೆಲವೊಂದು ಮಾಹಿತಿಗಳನ್ನು ಶೇರ್​ ಮಾಡಿಕೊಂಡರು.

ನಾನು ಬಿಗ್​ಬಾಸ್ ಮನೆಗೆ ಹೋಗುವಾಗಲೇ ಒಂದು ಅಥವಾ ಎರಡು ವಾರ ಎಂದುಕೊಂಡಿದ್ದೆ. ಎರಡು ವಾರಗಳಲ್ಲಿಯೇ ನನ್ನನ್ನು ಕಳುಹಿಸಿ ಎಂದೂ ಹೇಳಿದ್ದೆ. ಏನೋ ಒಂದು ಉದ್ದೇಶ ಇಟ್ಟುಕೊಂಡು ಬಂದಿದ್ದೆ. ಆ ಉದ್ದೇಶವೇ ಬೇರೆಯಾಗಿತ್ತು. ಅದಕ್ಕೇ ಬೇಗ ಕಳುಹಿಸಿ ಎಂದಿದ್ದೆ. ನಾನು ನನ್ನ ಸಂಸ್ಥೆಯ ಜೊತೆ ಕೆಲವೊಂದು ಮಾತುಕತೆ ಮಾಡಬೇಕಿತ್ತು. ಆದ್ದರಿಂದ ಎರಡೇ ವಾರದಲ್ಲಿ ಹೋಗುವ ಪ್ಲ್ಯಾನ್​ ಮಾಡಿದ್ದೆ. ಈ ಬಗ್ಗೆ ಮುಂಚೆನೇ ಹೇಳಿದ್ದೆ ಕೂಡ. ಆದರೆ ಜನರ ವೋಟ್​ ಹೆಚ್ಚು ಬಂದರೆ ನೀವು ಇರಲೇಬೇಕಾಗುತ್ತದೆ, ನಾವೇನೂ ಮಾಡಲು ಆಗುವುದಿಲ್ಲ ಎಂದಿದ್ದರು. ಅದರಂತೆಯೇ ಆಯಿತು. ನನ್ನನ್ನು ಜನರು ತುಂಬಾ  ಇಷ್ಟಪಟ್ಟು, ಪ್ರೀತಿ ಕೊಟ್ಟರು. ಹೆಚ್ಚು ವೋಟ್​ ಮಾಡಿದರು. ಈ ಹಿನ್ನೆಲೆಯಲ್ಲಿ ನಾನು ಫಿನಾಲೆಯವರೆಗೂ ಉಳಿದುಕೊಂಡೆ ಎಂದಿದ್ದಾರೆ. ಈ ಹಿಂದೆ ನೀಡಿದ್ದ ಸಂದರ್ಶನದಲ್ಲಿ ಡ್ರೋನ್​ ಪ್ರತಾಪ್​, ತಾವು ಏನು ಎಂದು ತೋರಿಸುವ ಉದ್ದೇಶದಿಂದ ಬಿಗ್​ಬಾಸ್​ಗೆ ಹೋಗಿದ್ದೆ. ಇದೇ ನನ್ನ ಉದ್ದೇಶವಾಗಿತ್ತು ಎಂದಿದ್ದರು. 
 

ಡ್ರೋನ್​ ಪ್ರತಾಪ್​ಗೆ ಕೊನೆಗೂ ಅಮ್ಮನ ಕೈತುತ್ತು: ದೃಷ್ಟಿ ತೆಗೆದು ಬರಮಾಡಿಕೊಂಡ ವಿಡಿಯೋಗೆ ನೆಟ್ಟಿಗರು ಏನಂದ್ರು?

ಇದೇ ವೇಳೆ, ಫಿನಾಲೆವರೆಗೆ ಹೋಗಲು ನಿಮಗೆ ಬೂಸ್ಟ್​ ಕೊಟ್ಟಿದ್ದು ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಡ್ರೋನ್​ ಪ್ರತಾಪ್​,  ಕೆಲವರು ಆಡಿದಂಥ ಕೆಲವು ಮಾತುಗಳು, ನೀಡಿದಂಥ ಕೆಲವು ಪ್ರತಿಕ್ರಿಯೆಗಳು ನನಗೆ ಬೂಸ್ಟ್​ ಕೊಟ್ಟವು ಎಂದರು. ಬಿಗ್​ಬಾಸ್​​ ಮನೆಯಲ್ಲಿ ರಕ್ಷಕ್​, ವಿನಯ್​, ಈಶಾನಿ, ಮೈಕೆಲ್​ ಸೇರಿದಂತೆ ಕೆಲವರು ಆಡಿದ  ಮಾತುಗಳಿಂದ ನನಗೆ ತುಂಬಾ ನೋವಾಯಿತು. ನಮ್ರತಾ ದೀದೀ ಅವರೂ ಅಪ್ಪ-ಅಮ್ಮನ ಕುರಿತು ಹೇಳಿದರು. ಇದರಿಂದ ನನ್ನ ಮನಸ್ಸಿಗೆ ತುಂಬಾ ಬೇಸರವಾಯಿತು. ಆದರೆ ನನಗೆ ಗೊತ್ತು. ಎಲ್ಲರೂ  ಆಟಕ್ಕೋಸ್ಕರ ಮಾಡಿದ್ದಾರೆ. ಕೊನೆಗೆ ನಮ್ರತಾ ದೀದೀ, ವಿನಯ್​ ಎಲ್ಲರೂ ಸಾರಿ ಕೇಳಿದ್ರು. ಅಲ್ಲಿಗೇ ಎಲ್ಲವೂ ಮುಗಿಯಿತು. ಆದರೂ ಕೆಲವು ಮಾತುಗಳನ್ನು ನೆನಪಿಸಿಕೊಂಡಾಗ ನೋವಾಗುತ್ತದೆ. ಆದರೆ ಬಿಗ್​ಬಾಸ್​ ಮನೆಯಲ್ಲಿಯೇ ಎಲ್ಲ ಗಲಾಟೆ ಮುಗಿದಿದೆ. ಅಲ್ಲಿ ನಡೆದಿದ್ದನ್ನು ಮರೆತಿದ್ದೇನೆ ಎಂದರು. 

ಅಷ್ಟಕ್ಕೂ ಡ್ರೋನ್​ ಪ್ರತಾಪ್​ ಎಂದಾಕ್ಷಣ ಈಗ ಎಲ್ಲರಿಗೂ ನೆನಪಾಗುವುದು ಬಿಗ್​ಬಾಸ್​. ಬಿಗ್​ಬಾಸ್​ ಮನೆಯಲ್ಲಿ ಎಲ್ಲರ ಪ್ರೀತಿ ಗಳಿಸಲು ಸಾಕಷ್ಟು ಶ್ರಮವಹಿಸಿದ್ದಾರೆ ಡ್ರೋನ್​. ಇದೇ ಕಾರಣಕ್ಕೆ ಫಿನಾಲೆವರೆಗೂ ಎಂಟ್ರಿ ಕೊಟ್ಟು, ಮೊದಲ ರನ್ನರ್​ ಅಪ್​ ಕೂಡ ಆದರು. ಆದ್ರೆ  ಕೆಲ ವರ್ಷಗಳ ಹಿಂದೆ ಈ ಯುವಕನ ಹೆಸರು ಹೇಳಿಕೊಂಡು ತಮ್ಮ ಮನೆಯ ಮಕ್ಕಳನ್ನು ಬೈದವರು ಅದೆಷ್ಟೋ ಮಂದಿ. ಇವನನ್ನು ನೋಡಿ ಸ್ವಲ್ಪನಾದರೂ ಬುದ್ಧಿ ಕಲಿ ಎಂದು ಹೇಳಿಸಿಕೊಂಡ ಮಕ್ಕಳು ಇನ್ನೆಷ್ಟೋ. ಹೋದಲ್ಲಿ, ಬಂದಲ್ಲಿ ಈ ಯುವಕನ ಮಾತೇ ಮಾತು. ಪ್ರತಾಪ್​ ಅವರ ಮಾತಿನ ಪ್ರತಾಪಕ್ಕೆ ಮೋಡಿಯಾಗದವೇ ಇಲ್ಲ. ವಿಭಿನ್ನ ಕ್ಷೇತ್ರಗಳ ನುರಿತರು, ಮೇಧಾವಿಗಳು ಎನಿಸಿಕೊಂಡವರೂ ಪ್ರತಾಪ್​ ಮಾತಿಗೆ ತಲೆದೂಗಿದರು. ಎಷ್ಟೋ ವೇದಿಕೆಗಳಲ್ಲಿ ಇವರು ಮಾಡುತ್ತಿದ್ದ ಪ್ರೇರಣಾತ್ಮಕ ಭಾಷಣಕ್ಕೆ ತಲೆದೂಗಿದರು. ಕೇಳುವ ಪ್ರಶ್ನೆಗಳಿಗೆ ಅಷ್ಟೇ ಚೆನ್ನಾಗಿ ಉತ್ತರಿಸುವ ಮೇಧಾವಿ ಎನಿಸಿಕೊಂಡವರು ಡ್ರೋಣ್​. ಡ್ರೋನ್​ ತಯಾರಿಸಲು ತಾನು ಪಟ್ಟಿರುವ ಕಷ್ಟಗಳನ್ನು, ಬೀದಿ ಬದಿಯಲ್ಲಿ ಮಲಗಿ ತುತ್ತು ಅನ್ನಕ್ಕಾಗಿ ಪರದಾಡಿದ ದಿನಗಳನ್ನು ಕಣ್ಣಿಗೆ ಕಟ್ಟುವಂತೆ ಹೇಳುತ್ತಾ ಕೇಳುಗರ ಕಣ್ಣಲ್ಲಿ ನೀರು ತರಿಸಿದ್ದ ಪ್ರತಾಪ್​ ನಿಜ ಬಣ್ಣ ಬದಲಾಗಲು ಹಲವಾರು ವರ್ಷಗಳೇ ಬೇಕಾದವು. ಕೊನೆಗೂ ಇಷ್ಟು ವರ್ಷ ಹೇಳಿದ್ದು, ಮಾತನಾಡಿದ್ದು, ತಮ್ಮ ಬಗ್ಗೆ ಹೇಳಿಕೊಂಡಿದ್ದು, ಡ್ರೋನ್​ ತಯಾರಿಕೆ ಕುರಿತು ವಿವರಣೆ ನೀಡಿದ್ದು ಎಲ್ಲವೂ ಹಸಿಹಸಿ ಸುಳ್ಳು ಎಂದು ತಿಳಿದು ಹಲವು ಕೇಸ್​ಗಳು ದಾಖಲಾದವು. ಸ್ವಲ್ಪ ಸಮಯ ತಲೆ ಮರೆಸಿಕೊಂಡಿದ್ದ ಪ್ರತಾಪ್‌ ಬಿಗ್‌ಬಾಸ್‌ನಲ್ಲಿ ಪ್ರತ್ಯಕ್ಷ ಆಗಿ ಭಾರಿ ಅಭಿಮಾನಿಗಳನ್ನೂ ಗಳಿಸಿದರು. ಜೊತೆಗೆ ಅಚ್ಚರಿ ಎನ್ನುವಂತೆ ರನ್ನರ್‌ ಅಪ್‌ ಕೂಡ ಆದರು.

ಬಿಗ್​ಬಾಸ್​ ಅಂದ್ರೆ ಪ್ರತಾಪ್​ಗೆ ಹೀಗಂತೆ! ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಡ್ರೋನ್​ ಹೇಳಿದ್ದೇನು?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?
Naa Ninna Bidalaare: ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!