ಹನಿಮೂನೋ, ಆಫೀಸ್​ ಟೂರೋ? ಮಧುಚಂದ್ರಕ್ಕೂ ಸೂಟು ಬೂಟು ಬೇಕಾ? ಗೌತಮ್​ ಕಾಲೆಳೆದ ಫ್ಯಾನ್ಸ್​

Published : May 17, 2024, 12:05 PM IST
 ಹನಿಮೂನೋ, ಆಫೀಸ್​ ಟೂರೋ? ಮಧುಚಂದ್ರಕ್ಕೂ ಸೂಟು ಬೂಟು ಬೇಕಾ? ಗೌತಮ್​ ಕಾಲೆಳೆದ ಫ್ಯಾನ್ಸ್​

ಸಾರಾಂಶ

ಹನಿಮೂನ್​ಗೆ ಹೋಗುವ ಸಮಯದಲ್ಲಿ ಗೌತಮ್​ ಸಿಂಪಲ್​ ಡ್ರೆಸ್​ ಬದಲು ಸೂಟು-ಬೂಟು ಧರಿಸಿದ್ದರಿಂದ ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.  

ಗೌತಮ್​ ಮತ್ತು ಭೂಮಿಕಾ ಹನಿಮೂನ್​ ಮೂಡ್​ನಲ್ಲಿ ಇದ್ದಾರೆ. ಚಿಕ್ಕಮಗಳೂರಿನ ಮಲೆನಾಡಿನ ಸೌಂದರ್ಯವನ್ನು ಅವರು ಸವಿಯುತ್ತಿದ್ದಾರೆ. ಸದಾ ಜಗಳವಾಡುತ್ತಲೇ ಮದುವೆಯಾಗಿ, ಇದೀಗ ಒಬ್ಬರನ್ನೊಬ್ಬರು ಸಕತ್​ ಲವ್​ ಮಾಡ್ತಿರೋ ಜೋಡಿ ಇದು.  ಸದಾ ಕಿತ್ತಾಡುತ್ತಲೇ ಇದ್ದ ಈ ದಂಪತಿ ಈಗ ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅನ್ಯೋನ್ಯವಾಗಿದ್ದಾರೆ. ಇದುವರೆಗೂ ಪರಸ್ಪರ ಪ್ರೀತಿಯ ವಿಷಯವನ್ನು ಹಂಚಿಕೊಳ್ಳದಿದ್ದರೂ, ನೇರವಾಗಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳದಿದ್ದರೂ, ಇವರ ಪ್ರೀತಿಗೆ ಇವರೇ ಸಾಟಿ. ಇದೀಗ ಈ ಜೋಡಿ ಹನಿಮೂನ್​ಗೆ ಹೋಗಲು ರೆಡಿಯಾಗಿದೆ. ನಾಚಿಕೊಳ್ಳುತ್ತಲೇ ಮಧುಚಂದ್ರಕ್ಕೆ ಹೋಗಲು ರೆಡಿಯಾಗಿದ್ದಾರೆ. ಇದೇ ವೇಳೆ ಮದುವೆಯಾಗಿ ಇಷ್ಟು ದಿನವಾದರೂ, ಭೂಮಿಕಾರಿಗೆ ತಾನು ಏನೂ ಗಿಫ್ಟ್​ ಕೊಟ್ಟಿಲ್ಲ ಎಂದು ಅಜ್ಜಿಯ ಬಳಿ ಹೇಳಿಕೊಂಡ ಗೌತಮ್​, ಚಿಕ್ಕಮಗಳೂರಿನಲ್ಲಿರುವ ಎಸ್ಟೇಟ್​ ಅನ್ನು ಭೂಮಿಕಾ ಹೆಸರಿಗೆ ಬರೆದು ಕೊಡುವುದಾಗಿ ಹೇಳಿದ್ದಾನೆ.  

 ಜೀಪ್​ನಲ್ಲಿ ಜೋಡಿ ಚಿಕ್ಕಮಗಳೂರಿಗೆ ಹೊರಟಿದೆ. ಈ ಜೋಡಿಯನ್ನು ನೋಡಿ ನೆಟ್ಟಿಗರು ಸೂಪರ್​ ಎಂದು ಹೇಳುತ್ತಿದ್ದರೂ ಹನಿಮೂನ್​ಗೆ ಹೋಗುವಾಗ್ಲೂ ಗೌತಮ್​ ಸಿಂಪಲ್ಲಾಗಿ ಹೋಗೋದನ್ನು ಬಿಟ್ಟು ಒಳ್ಳೆ ಆಫೀಸ್​ ಟೂರ್​ಗೆ ಹೋದ ರೀತಿಯಲ್ಲಿ ಸೂಟು ಬೂಟು ಹಾಕಿಕೊಂಡಿರೋದು ಯಾಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಹನಿಮೂನ್​ಗೆ ಹೋಗುವಾಗ ಮೂಡು ಬೇರೆಯದ್ದೇ ರೀತಿ ಇರುತ್ತದೆ. ಅಂಥ ಸಂದರ್ಭದಲ್ಲಿಯೂ ಸೂಟು ಬೂಟು ಧರಿಸಿ ಹೋಗಿರುವುದಕ್ಕೆ ನೆಟ್ಟಿಗರು ಗೌತಮ್​ ಬಗ್ಗೆ ಮುನಿಸು ತೋರಿಸುತ್ತಿದ್ದಾರೆ. ಅದೇ ಇನ್ನೊಂದೆಡೆ,  ಗೌತಮ್​ ಚಿಕ್ಕಮ್ಮ ಈ ಜೋಡಿಯ ಕೊಲೆ ಮಾಡಿಸುವ ಪ್ಲ್ಯಾನ್​ ಮಾಡಿದ್ದರಿಂದ ಇನ್ನೇನು ಆಗಬಹುದು ಎನ್ನುವ ಆತಂಕವೂ ಅಮೃತಧಾರೆ ಅಭಿಮಾನಿಗಳನ್ನು ಕಾಡುತ್ತಿದೆ.  ಮಗ ಗೌತಮ್​ ಮತ್ತು ಸೊಸೆ ಭೂಮಿಕಾ ಎಂದಿಗೂ ಒಂದಾಗಬಾರದು ಎಂದು ಬಯಸ್ತಿರೋ, ಸದಾ ಕುತಂತ್ರ ರೂಪಿಸುತ್ತಿರುವ ಅತ್ತೆ ಶಕುಂತಲಾ ದೇವಿ ಈಗ ಇಬ್ಬರನ್ನೂ ಹನಿಮೂನ್​ಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ.   ಜಮೀನೊಂದರ ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಬಂದು ಧಮ್ಕಿ ಹಾಕಿ ಹೋಗಿದ್ದಾರೆ. ಆ ಜಮೀನು ಇರುವುದು ಚಿಕ್ಕಮಗಳೂರಿನಲ್ಲಿ. ಆ ಜಮೀನಿನ ವಿವಾದದ ಬಗ್ಗೆ ಗೌತಮ್​ಗೆ ಯಾವುದೇ ಮಾಹಿತಿ ಇಲ್ಲ. ಇದನ್ನು ತಿಳಿಸದಂತೆ ಭೂಮಿಕಾಗೂ ಮನೆಯವರು ಹೇಳಿದ್ದಾರೆ. ಇದನ್ನೇ ದಾಳವಾಗಿಸಿಕೊಂಡ ಶಕುಂತಲಾ ಇಬ್ಬರನ್ನೂ ಹನಿಮೂನ್​ ನೆಪದಲ್ಲಿ ಚಿಕ್ಕಮಗಳೂರಿಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ. ಅಲ್ಲಿ ಹೋದರೆ ಇಬ್ಬರ ಸಾವು ಖಂಡಿತ ಎನ್ನುವುದು ಆಕೆಯ ಪ್ಲ್ಯಾನ್​. 

ಶಾರುಖ್​ ಖಾನ್​ ಸಾಯಲ್ಲ... ನಾವು ಮಾತ್ರ ಸಾಯ್ತೇವಾ ಎಂದ ಮಕ್ಕಳು! ಶಾಕಿಂಗ್​ ವಿಡಿಯೋ ವೈರಲ್​

ಅದೇ ಇನ್ನೊಂದೆಡೆ, ಗೌತಮ್​ ಮತ್ತು ಭೂಮಿಕಾ ಇಲ್ಲದ ವೇಳೆ ಏನೋ ಪ್ಲ್ಯಾನ್​ ಮಾಡಿದ್ದಾನೆ. ತನ್ನನ್ನು ಅಪಹರಿಸಿರುವಂತೆ ನಾಟಕವಾಡಿ, ಅದನ್ನು ಪತ್ನಿಯ ಮೊಬೈಲ್​ಗೆ ವಿಡಿಯೋ ಕಳಿಸಿದ್ದಾನೆ. ಇದನ್ನು ನೋಡಿ ಮಲ್ಲಿ ಗಾಬರಿಯಾಗಿದ್ದಾಳೆ. ಕೊನೆಗೆ ಜೈದೇವ್​ ಕಪಾಟಿನಲ್ಲಿ ಇಟ್ಟಿರೋ ಫೈಲ್​ ಒಂದನ್ನು ತಂದುಕೊಡುವಂತೆ  ಮಲ್ಲಿಗೆ ಹೇಳಿದ್ದಾರೆ. ಇದು ಮೋಸದಾಟ ಎಂದು ಅರಿಯದ ಮಲ್ಲಿ ಫೈಲ್​ ತೆಗೆದಿದ್ದಾಳೆ. ಅದೇ ವೇಳೆ ಭೂಮಿಕಾ ಹೇಳಿದಮಾತು ಅವಳಿಗೆ ನೆನಪಾಗಿದೆ. ಹನಿಮೂನ್​ಗೆ ಹೋಗುವ ಸಂದರ್ಭದಲ್ಲಿ ಭೂಮಿಕಾ ಮಲ್ಲಿಗೆ, ನೀನು ತುಂಬಾ ಎಚ್ಚರದಿಂದ ಇರು. ಏನೇ ಒಂದು ನಿರ್ಧಾರ ತೆಗೆದುಕೊಳ್ಳುವುದಿದ್ದರೂ ನನ್ನನ್ನು ಒಂದು ಮಾತು ಕೇಳು ಎಂದಿರುತ್ತಾಳೆ. ಅದು ನೆನಪಾಗಿದೆ.

ಆದರೆ ಮಲ್ಲಿ ಏನು ಮಾಡುತ್ತಾಳೋ ಗೊತ್ತಿಲ್ಲ. ಮಲ್ಲಿ ಭೂಮಿಕಾಗೆ ಫೋನ್​ ಮಾಡಿದ್ದರೂ ಅಲ್ಲಿ ನೆಟ್​ವರ್ಕ್​ ಸಿಗದೇ ಇರಬಹುದು, ಆದ್ದರಿಂದ ಮಲ್ಲಿ ಫೈಲ್​ ಕೊಟ್ಟು ಮೋಸದ ಬಲೆಗೆ ಬೀಳಬಹುದು ಎಂದು ನೆಟ್ಟಿಗರು ತಾವೇ ಕಥೆ ನಿರ್ದೇಶನ ಮಾಡುತ್ತಿದ್ದಾರೆ. ಅದೇ ಇನ್ನೊಂದೆಡೆ, ಭೂಮಿಕಾ ಮತ್ತು ಗೌತಮ್​ ಅವರನ್ನು ಒಂದು ಮಾಡಲು ಗೌತಮ್​ಗೆ ಆನಂದ್​ ದಂಪತಿ ಸೋಮರಸ ಕುಡಿಸಿದ್ದಾರೆ. ಇದನ್ನು ಕುಡಿದ ಗೌತಮ್​ ರೊಮ್ಯಾಂಟಿಕ್​ ಆಗಿ ಹಾಡು ಹೇಳಿದ್ದಾನೆ. ಮುಂದೇನಾಗುತ್ತದೆಯೋ ಕಾದು ನೋಡಬೇಕಿದೆ. 

ನಟಿ ಜಾಹ್ನವಿ ಕಪೂರ್​ ಕೈಯಲ್ಲಿ ಬಾಲ್​: ಮೈಮೇಲಿದ್ದದ್ದು ಕೈಯಲ್ಯಾಕೆ ಬಂತು ಪ್ರಶ್ನಿಸ್ತಿದ್ದಾರೆ ನೆಟ್ಟಿಗರು!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Prema Kavya Serial ವೀಕ್ಷಕರ ನಿಗಿ ನಿಗಿ ಕೋಪಕ್ಕೆ ಗುರಿಯಾಗಿರೋ ಸ್ನೇಹಾ ಯಾರು? ಹಿನ್ನಲೆ ಏನು?
Naa Ninna Bidalaare: ಮಗಳ ರಕ್ಷಣೆಗೆ ಕಾಳಿ ಅವತಾರವೆತ್ತಿದ ಶರತ್​- ಮೈ ಝುಂ ಎನ್ನುವ ರೋಚಕ ಸಂಚಿಕೆ