Breaking: ಮಚ್ಚು ಹಿಡಿದು ರೀಲ್ಸ್‌, ಪರಪ್ಪನ ಅಗ್ರಹಾರಕ್ಕೆ ಬಿಗ್‌ಬಾಸ್‌ ಬ್ಯಾಡ್‌ ಬಾಯ್ಸ್‌!

Published : Mar 25, 2025, 11:52 PM ISTUpdated : Mar 25, 2025, 11:57 PM IST
Breaking: ಮಚ್ಚು ಹಿಡಿದು ರೀಲ್ಸ್‌, ಪರಪ್ಪನ ಅಗ್ರಹಾರಕ್ಕೆ ಬಿಗ್‌ಬಾಸ್‌ ಬ್ಯಾಡ್‌ ಬಾಯ್ಸ್‌!

ಸಾರಾಂಶ

ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್‌ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ಬುಧವಾರ ನಡೆಯಲಿದೆ.

ಬೆಂಗಳೂರು (ಮಾ.25): ಸೋಶಿಯಲ್‌ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಕ್ಕೆ ಸಂಬಂಧಪಟ್ಟಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಹಾಗೂ ರಜತ್‌ ಕಿಶನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲಿಂದಲೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದ ಸ್ಥಳ ಮಹಜರು ನಡೆಸಿದ ಬಳಿಕ ಇಬ್ಬರನ್ನೂ ಕೆಸಿ ಜನರಲ್‌ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಇಬ್ಬರನ್ನೂ ಕೋರಮಂಗಲದ ಬಳಿ ಇರುವ ಜಡ್ಜ್‌ ನಿವಾಸದ ಎದುರು ಪ್ರಸ್ತುತ ಪಡಿಸಲಾಯಿತು. ಈ ವೇಳೆ 24ನೇ ಎಜಿಸಿಎಂ ನ್ಯಾಯಾಧೀಶರು ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬೆಳಗ್ಗೆ ಕೋರ್ಟ್‌ ಎದುರು ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.

'ಏಯ್‌ ಮೊದಲು ಶರ್ಟ್‌ ಬಟನ್‌ ಹಾಕೋ, ತಗಡು ಮಚ್ಚನ್ನು ಎಲ್ಲಿ ಇಟ್ಟಿದ್ಯಾ ಹೇಳು..' ಪೊಲೀಸ್‌ ಗ್ರಿಲ್‌ಗೆ ಬೆವರಿದ ರಜತ್‌, ವಿನಯ್‌!

ಇಬ್ಬರೂ ಕೂಡ ಜಾಮೀನು ಅರ್ಜಿಯನ್ನೂ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ಕೂಡ ಬುಧವಾರ ಕೋರ್ಟ್‌ನಲ್ಲಿ ನಡೆಯಲಿದೆ. ಜಡ್ಜ್‌ ಆದೇಶದ ಬೆನ್ನಲ್ಲಿಯೇ ಇಬ್ಬರೂ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಯಿತು. ರಜತ್‌ ಕಿಶನ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ಮಾಡಲು ಕಾರು ಏರುತ್ತಿದ್ದಂತೆ ಅವರ ಪತ್ನಿ ಅಕ್ಷಿತಾ ಕಣ್ಣೀರಿಟ್ಟಿದ್ದಾರೆ.

ಡೆವಿಲ್ ಸಿನಿಮಾದ ನಾಯಕ ದರ್ಶನ್, ಖಳನಾಯಕ ವಿನಯ್ ಗೌಡಗೆ ರಿಯಲ್ ಡೆವಿಲ್ ಆದ ಎಸಿಪಿ ಚಂದನ್!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?