ಉದಯ ಟಿವಿಯಲ್ಲಿ 2 ಹೊಸ ಧಾರಾವಾಹಿ

Published : Aug 25, 2021, 10:54 AM IST
ಉದಯ ಟಿವಿಯಲ್ಲಿ 2 ಹೊಸ ಧಾರಾವಾಹಿ

ಸಾರಾಂಶ

ಉದಯ ಟಿವಿಯಲ್ಲಿ 2 ಹೊಸ ಧಾರಾವಾಹಿ ಆ.23ರಿಂದ ಕಾದಂಬರಿ, ನಿನ್ನಿಂದಲೇ ಪ್ರಸಾರ ಆರಂಭ

ಉದಯ ಟಿವಿಯಲ್ಲಿ ಆ.23 ಸೋಮವಾರದಿಂದ ‘ಕಾದಂಬರಿ’ ಹಾಗೂ ‘ನಿನ್ನಿಂದಲೇ’ ಎಂಬ ಎರಡು ಹೊಸ ಧಾರಾವಾಹಿಗಳು ಪ್ರಸಾರ ಆರಂಭಿಸಿವೆ. ಮನೆಯ ಜವಾಬ್ದಾರಿ ಹೊತ್ತ ಹುಡುಗಿ ಗೃಹಿಣಿಯಾಗುವ ಕನಸಿನ ಕತೆ ಕಾದಂಬರಿ ಧಾರಾವಾಹಿಯದು. ಸೋಮವಾರದಿಂದ ಶನಿವಾರವರೆಗೆ ಮಧ್ಯಾಹ್ನ 2 ಗಂಟೆಗೆ ಪ್ರಸಾರವಾಗುವ ‘ಕಾದಂಬರಿ’ ಸೀರಿಯಲ್‌ಗೆ ದರ್ಶಿತ್‌ ಭಟ್‌ ನಿರ್ದೇಶನ, ಗಣಪತಿ ಭಟ್‌ ನಿರ್ಮಾಣವಿದೆ. ಪವಿತ್ರಾ ನಾಯಕ್‌, ರಕ್ಷಿತ್‌ ಮುಖ್ಯಪಾತ್ರದಲ್ಲಿದ್ದಾರೆ.

ನಿರ್ಮಾಪಕರು ನೀಡಿದ ಬೆಳ್ಳಿ ಪೆನ್ನು ನಿರ್ದೇಶಕರಿಗೆ ನೀಡಿದ ಕಿಚ್ಚ

ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನ 2.30ಕ್ಕೆ ಪ್ರಸಾರವಾಗುವ ‘ನಿನ್ನಿಂದಲೇ’ ಸೀರಿಯಲ್‌ನ ನಿರ್ಮಾಪಕ ರಾಜೇಶ್‌ ನಟರಂಗ. ದಿಲೀಪ್‌ ನಿರ್ದೇಶಕರು. ಎರಡು ಕುಟುಂಬಗಳ ಪ್ರೀತಿ-ವೈಷಮ್ಯದ ಕಥೆ ಈ ಸೀರಿಯಲ್‌ನದು. ಚಿತ್ರಶ್ರೀ, ದೀಪಕ್‌ ನಾಯಕ ನಾಯಕಿಯರು. ಜಯಂತ ಕಾಯ್ಕಿಣಿ ಅವರ ಸಾಹಿತ್ಯ ಈ ಸೀರಿಯಲ್‌ ಹಾಡಿಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಪತ್ನಿ, ಮಗಳ ಜೊತೆ ಹೋಗಿ ಮನೆಗೆ ಹೊಸ ಕಾರ್‌ ತಂದ Amruthadhaare Serial ನಟ ರಾಜೇಶ್‌ ನಟರಂಗ!
BBK 12: ಟೈಮ್‌ ಬಂದೇಬಿಡ್ತು, ಅಂದು ಹೊಟ್ಟೆ ಉರಿಸಿದ್ದ ರಘು; ಚಕ್ರಬಡ್ಡಿ ಸಮೇತ ವಾಪಸ್‌ ಕೊಟ್ಟ ಗಿಲ್ಲಿ ನಟ