ವ್ಯಾಕ್ಸಿನ್ ಪಡೆಯುವ ಮುನ್ನ ರಕ್ತ ದಾನ ಮಾಡಿ: ನಟಿ ರಕ್ಷಾ ಹೊಳ್ಳ ಮನವಿ!

Suvarna News   | Asianet News
Published : May 02, 2021, 11:13 AM ISTUpdated : May 02, 2021, 11:23 AM IST
ವ್ಯಾಕ್ಸಿನ್ ಪಡೆಯುವ ಮುನ್ನ ರಕ್ತ ದಾನ ಮಾಡಿ: ನಟಿ ರಕ್ಷಾ ಹೊಳ್ಳ ಮನವಿ!

ಸಾರಾಂಶ

18 ವಯಸ್ಸಿಗಿಂತ ಮೇಲ್ಪಟ್ಟವರು ವ್ಯಾಕ್ಸಿನ್ ಪಡೆಯುವ ಮುನ್ನ ರಕ್ತ ದಾನ ಮಾಡಿ ಎಂದು ಕಿರುತೆರೆ ನಟಿ ರಕ್ಷಾ ಮನವಿ ಮಾಡಿಕೊಂಡಿದ್ದಾರೆ.   

'ಬಯಸದೆ ಬಳಿ ಬಂದೆ' ಧಾರಾವಾಹಿಯ ಪ್ರಮುಖ ಪಾತ್ರಧಾರಿಯಾಗಿ ಮಿಂಚುತ್ತಿದ್ದ ನಟಿ ರಕ್ಷಾ ಹೊಳ್ಳೆ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಬಣ್ಣದ ಪರದೆ ಮೇಲೆ ಹೆಚ್ಚಾಗಿ ಕಾಣಿಸಿಕೊಂಡಿಲ್ಲವಾದರೂ, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿದ್ದಾರೆ.

ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಲು ಮರೆಯದಿರಿ! 

ಎಲ್ಲೆಡೆ ಕೊರೋನಾ ವೈರಸ್‌ನ ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿರುವುದರಿಂದ, ಕೊವಿಡ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ. ಇನ್ನೂ ವ್ಯಾಕ್ಸಿನ್ ಪಡೆದರೆ ಸೋಂಕು ತಗಲುವುದರಿಂದ ಅಥವಾ ತಗುಲಿದರೂ ವೈರಸ್‌ನ ಗೆದ್ದು ಬರುವ ಶಕ್ತಿ ನೀಡುತ್ತದೆ. ಕೆಲವು ದಿನಗಳಿಂದ ಆಕ್ಸಿಜನ್ ಕೊರತೆ, ಬೆಡ್ ಕೊರತೆ ಎದ್ದು ಕಾಣುತ್ತಿದೆ. ಮುಂಬರುವ ದಿನಗಳಲ್ಲಿ ಬ್ಲಡ್ ಬ್ಯಾಂಕ್‌ಗಳಲ್ಲೂ ಸಿಗದಂತೆ ರಕ್ತದ ಕೊರತೆ ಶುರುವಾಗುವ ಮುನ್ನ ಎಲ್ಲರೂ ರಕ್ತ ದಾನ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದು 60 ದಿನಗಳ ಕಾಲ ಯಾರೂ ರಕ್ತ ದಾನ ಮಾಡುವಂತಿಲ್ಲ. ಹೀಗಾಗಿ ವ್ಯಾಕ್ಸಿನ್ ಪಡೆಯುವ ಮುನ್ನವೇ ದಾನ ಮಾಡಿಬೇಕಾಗಿ ವಿನಂತಿಸಿಕೊಂಡಿದ್ದಾರೆ.

ರಕ್ಷಾ ಮಾತು: 
'ಕೊರೋನಾದಿಂದ ಇದೀಗ ಮತ್ತೊಂದು ಬಿಕ್ಕಟ್ಟಿಗೆ ಸಿಲುಕಿದ್ದೀವಿ. ಯಾವ ಬ್ಲಾಡ್ ಬ್ಯಾಂಕ್‌ಗಳಲ್ಲೂ ಬ್ಲಡ್ ಸಿಗದಂತೆ ಆಗುವ ಪರಿಸ್ಥಿತಿ ಎದುರಿದೆ.  18 ವರ್ಷಕ್ಕೂ ಮೇಲ್ಪಟ್ಟವರು ಮೊದಲ ಡೋಸ್ ವ್ಯಾಕ್ಸಿನ್ ಪಡೆಯುವ ಮುನ್ನ ದಯವಿಟ್ಟು ರಕ್ತ ದಾನ ಮಾಡಿ. ವ್ಯಾಕ್ಸಿನ್ ಪಡೆದು 60 ದಿನಗಳ ಕಾಲ ರಕ್ತ ದಾನ ಮಾಡುವಂತಿಲ್ಲ' ಎಂದಿದ್ದಾರೆ ರಕ್ಷಾ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Karna Serial ನಿಧಿ ಅರೆಸ್ಟ್​: ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದೇಕೆ? ಅಷ್ಟಕ್ಕೂ ಆಗಿದ್ದೇನು?
ಅಬ್ಬಬ್ಬಾ! ಟ್ವಿಸ್ಟ್‌ ಅಂದ್ರೆ ಇದಪ್ಪಾ- ಎದ್ದು ಬಂದ ಸತ್ತ ಸಂಧ್ಯಾ: ಲಾಯರ್‌ ಭಾರ್ಗವಿನೇ ಜೈಲಿಗೆ ಹೋಗ್ತಾಳಾ?