ಲಾಕ್‌ಡೌನ್‌ನಲ್ಲಿ ಕೋತಿಗಳ ಕಾಳಜಿ ವಹಿಸಿದ ನಿರೂಪಕಿ ಚೈತ್ರಾ ವಾಸುದೇವನ್!

Suvarna News   | Asianet News
Published : May 30, 2021, 03:56 PM IST
ಲಾಕ್‌ಡೌನ್‌ನಲ್ಲಿ ಕೋತಿಗಳ ಕಾಳಜಿ ವಹಿಸಿದ ನಿರೂಪಕಿ ಚೈತ್ರಾ ವಾಸುದೇವನ್!

ಸಾರಾಂಶ

ಆಹಾರವಿಲ್ಲದೇ ಪರದಾಡುತ್ತಿರುವ ಕೋತಿಗಳಿಗೆ ಬಾಳೆಹಣ್ಣು, ತರಕಾರಿ ಮತ್ತು ನೀರು ಒದಗಿಸಿದ ಬಿಗ್ ಬಾಸ್ ಚೈತ್ರಾ ವಾಸುದೇವನ್.  

ಕನ್ನಡ ಜನಪ್ರಿಯ ನಿರೂಪಕಿ ಚೈತ್ರಾ ವಾಸುದೇವನ್ ಲಾಕ್‌ಡೌನ್‌ ಸಮಯದಲ್ಲಿ ಜನ ಸಾಮಾನ್ಯರ ಪರ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಪ್ರಾಣಿಗಳ ಬಗ್ಗೆಯೂ ಕಾಳಜಿ ವಹಿಸಿದ್ದಾರೆ. ಅದಕ್ಕೆ ಸಾಕ್ಷಿ ಸ್ವತಃ ಚೈತ್ರಾ ಶೇರ್ ಮಾಡಿಕೊಂಡಿರುವ ವಿಡಿಯೋ.

ಕಾರಿನ ಹಿಂಬದಿಯಲ್ಲಿ ಬಾಳೆ ಹಣ್ಣು, ನೀರು, ಟೋಮ್ಯಾಟೋ  ಮತ್ತು ಬಿಸ್ಕೆಟ್ ಇರಿಸಿಕೊಂಡಿದ್ದು, ಕಾರಿನ ಬಳಿ ಬರುತ್ತಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡಿದ್ದಾರೆ. 'ಈ ಸಮಯದಲ್ಲಿ ನಮ್ಮ ಕೈಲಾದ ಸೇವೆಯನ್ನು ನಾವು ಮಾಡೋಣ,' ಎಂದು ಬರೆದುಕೊಂಡಿದ್ದಾರೆ. ಕೋತಿ ಬಾಳೆ ಹಣ್ಣು ತಿಂದ ನಂತರ ಅಲ್ಲೇ ಬಿಟ್ಟ ಸಿಪ್ಪೆಗಳನ್ನು ಅಲ್ಲಿಯೇ ಕಸವಾಗದಂತೆ ತಡೆಯಲು ಚೈತ್ರಾ ಒಂದು ಕವರಿನಲ್ಲಿ ತುಂಬಿಸಿಕೊಳ್ಳುತ್ತಾರೆ. 

ಇನ್ನೂ ಒಂದು ವರ್ಷ ಸಂಭಾವನೆ ಕಡಿತ ಒಪ್ಪಬೇಕು, ಅಡ್ವಾನ್ಸ್ ಹಿಂತಿರುಗಿಸಿರುವೆ: ಬಿಗ್ ಬಾಸ್ ಚೈತ್ರಾ ವಾಸುದೇವನ್‌ 

ಚೈತ್ರಾ ನಿರೂಪಣೆ ಜೊತೆಗೆ ತಮ್ಮದೇಯಾದ ಈವೆಂಟ್ ಕಂಪನಿ ಹೊಂದಿದ್ದಾರೆ. ತಮ್ಮ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಕುಟುಂಬಕ್ಕೆ ತಿಂಗಳ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ಸದ್ಯ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿರುವ ಚೈತ್ರಾ, ಆಗಾಗ ಇನ್‌ಸ್ಟಾಗ್ರಾಂ ರಿಲೀಸ್ ಮಾಡುವ ಮೂಲಕ ಫಾಲೋವರ್ಸ್‌ಗಳನ್ನು ಮನೋರಂಜಿಸುತ್ತಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮಗಳ 2ನೇ ವರ್ಷದ Birthday Celebrationಗಾಗಿ ಮಾಲ್ಡೀವ್ಸ್’ಗೆ ಹಾರಿದ ನಟಿ Kavya Gowda
Karna Serialನಲ್ಲಿ ಇಬ್ರನ್ನು ನಿಭಾಯಿಸ್ತಿರೋ ನಟನ ರಿಯಲ್​ ಲೈಫ್​ ಚೆಲುವೆ ಯಾರು? ಮದ್ವೆ ಯಾವಾಗ?