ಬಿಗ್​ಬಾಸ್​ನಿಂದ ಸಿಕ್ಕಿರೋ ಸಂಭಾವನೆ ಎಷ್ಟು ಎಂದು ಪ್ರಶ್ನಿಸಿದ್ರೆ ಲಾಯರ್​ ಜಗದೀಶ್​ ಏನೆಲ್ಲಾ ಹೇಳಿದ್ರು ಕೇಳಿ...

Published : Nov 01, 2024, 05:14 PM IST
ಬಿಗ್​ಬಾಸ್​ನಿಂದ ಸಿಕ್ಕಿರೋ ಸಂಭಾವನೆ ಎಷ್ಟು ಎಂದು ಪ್ರಶ್ನಿಸಿದ್ರೆ ಲಾಯರ್​ ಜಗದೀಶ್​ ಏನೆಲ್ಲಾ ಹೇಳಿದ್ರು ಕೇಳಿ...

ಸಾರಾಂಶ

ಬಿಗ್​ಬಾಸ್​ನಲ್ಲಿ ಸಾಕಷ್ಟು ಹವಾ ಸೃಷ್ಟಿಸಿದ್ದ ಲಾಯರ್​ ಜಗದೀಶ್​ ಅವರಿಗೆ  ಸಂಭಾವನೆ ಬಗ್ಗೆ ಪ್ರಶ್ನೆ ಕೇಳಿದ್ರೆ, ಅವರು ಹೇಳಿದ್ದೇನು ಕೇಳಿ...  

 ಈ ಸಾರಿ ಬಿಗ್ ಬಾಸ್​ನಲ್ಲಿ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡಿದ್ದು   ಲಾಯರ್ ಜಗದೀಶ್. ಬಿಗ್​ಬಾಸ್​ಗೆ ಹೇಳಿ ಮಾಡಿಸಿದಂಥ ಕಿರುಚಾಟ, ಗಲಾಟೆ ಜೊತೆಗೆ ತಮಾಷೆ ಮಾಡುತ್ತ ಹಲವು ವೀಕ್ಷಕರಿಗೆ ಬೇಕಾಗಿದ್ದವರು ಜಗದೀಶ್​.  ಈ ಸೀಸನ್​ನಲ್ಲಿ ಹೈಲೈಟ್ ಅಂತ ಇದ್ದಿದ್ದೇ ಜಗದೀಶ್. ಕಂಡಕಂಡವರ ಜೊತೆಗೆ ಕಾಲು ಕೆರೆದುಕೊಡು ಜಗಳ ಆಡ್ತಾ, ಲಾಯರ್ ಪಾಯಿಂಟ್​​ಗಳನ್ನ ಹಾಕ್ತಾ ಇದ್ದ ಜಗ್ಗಿ ಜನರಿಗೆ ಹೇರಳ ಮನರಂಜನೆ ಕೊಟ್ಟಿದ್ರು. ಬರೀ ಮನೆಮಂದಿಗೆ ಮಾತ್ರ ಅಲ್ಲ  , ಸಾಕ್ಷಾತ್ ಬಿಗ್ ಬಾಸ್​​ಗೇನೇ ಚಾಲೆಂಜ್ ಹಾಕಿದ್ರು   ಜಗದೀಶ್. ಬೇರೆ ಸ್ಪರ್ಧಿಗಳಿಗೆ  ಮಾತ್ರ ಅಲ್ಲ ಖುದ್ದು ಬಿಗ್ ಬಾಸ್​​ಗೇನೇ ತಿರುಗೇಟು ಕೊಟ್ಟವರು. ಆದ್ರೆ ಈಗ ದೊಡ್ಮನೆಯಿಂದ ಜಗದೀಶ್​ರನ್ನೇ ಹೊರಹಾಕಲಾಗಿದೆ.  

ಲಾಯರ್ ಜಗದೀಶ್​ಗೆ ಗೇಟ್ ಪಾಸ್ ಕೊಟ್ಟಿದ್ದನ್ನ ನೋಡಿ ಈ ಸಾರಿಯ ಬಿಗ್ ಬಾಸ್ ಫಿನಿಶ್ ಅಂತಿದ್ದಾರೆ ಜನ. ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್​​ನ ಆಚೆ ಹಾಕಲಾಗಿದೆ. ಮನೆಯ ಮೂಲಭೂತ ನಿಯಮ ಉಲ್ಲಂಘಿಸಿರೋದು, ಮತ್ತೊಂದು ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದ ಬಳಸಿದ್ದಕ್ಕೆ  ಲಾಯರ್ ಜಗದೀಶ್​​ನ ಮನೆಯಿಂದ ಹೊರಹೋಗುವಂತೆ ಬಿಗ್ ಬಾಸ್ ಆದೇಶ ಬಂತು.  ಹೊರಗೆ ಬಂದ ತಕ್ಷಣ ಅವರನ್ನು ಹಲವರು ಸಂದರ್ಶನ ಮಾಡಿದ್ದಾರೆ. ಇದೀಗ ನ್ಯೂಸ್​ ಗುರು ಕನ್ನಡ ಚಾನೆಲ್​ಗೆ ನೀಡಿರುವ ಸಂದರ್ಶನದಲ್ಲಿ ಬಿಗ್​ಬಾಸ್​ ಕುರಿತು ಕೆಲವೊಂದು ವಿಷಯಗಳನ್ನು ಜಗದೀಶ್​ ಮಾತನಾಡಿದ್ದಾರೆ. ಆದರೆ ಅವರಿಗೆ ಇಲ್ಲಿ ಕೇಳಿದ್ದ ಪ್ರಶ್ನೆ, ಬಿಗ್​ಬಾಸ್​ನಿಂದ ಸಿಕ್ಕ ಸಂಭಾವನೆ ಎಷ್ಟು ಎನ್ನುವುದು. ಆದರೆ ಜಾಣ್ಮೆಯಿಂದ ಉತ್ತರಿಸಿದ ಜಗದೀಶ್​ ಅವರು ಸಂಭಾವನೆಯ ಗುಟ್ಟನ್ನು ಕೊನೆಯವರೆಗೂ ಬಿಟ್ಟು ಕೊಡಲಿಲ್ಲ.    ಬೇರೆ ಮಾತನಾಡಿ, ಸಂಭಾವನೆಯ ವಿಷಯದಿಂದ ನುಣುಚಿಕೊಂಡಿದ್ದಾರೆ. 

ಬಿಗ್​ಬಾಸ್​​ಗೆ ಪುನಃ ಹೋಗ್ತಾರಾ ಜಗದೀಶ್? ನೇರ ಪ್ರಸಾರದಲ್ಲಿ ದೊಡ್ಮನೆಯ ಗುಟ್ಟು ಬಿಚ್ಚಿಟ್ಟ ಲಾಯರ್​ ಹೇಳಿದ್ದೇನು?

ಜಗದೀಶ್​ ಅವರು ಹೇಳಿದ್ದು ಏನೆಂದರೆ, 'ನನಗೆ ಸಿಕ್ಕಿರುವುದು ಪ್ರೈಸ್​ಲೆಸ್​ ಪ್ರೀತಿ ಸಿಕ್ಕಿದೆ. ಹಣದಲ್ಲಿ ಅದನ್ನು ಅಳೆಯಲು ಹೋಗುವುದಿಲ್ಲ. ಸಾಮಾನ್ಯ ಹೋರಾಟಗಾರ ಲಾಯರ್​ ಜಗದೀಶ್​ಗೆ ಕರ್ನಾಟಕದ ಜನತೆ ಒಬ್ಬ ಹೀರೋ ಮಾಡಿಬಿಟ್ಟಿದ್ದಾರೆ. ಇದಕ್ಕಿಂತ ದೊಡ್ಡ ಪ್ರೈಜ್​ ನನಗೆ ಏನು ಬೇಕಾಗಿದೆ? ಸಾವಿರ ಕೋಟಿ ಕೊಟ್ಟರು ಕೂಡ ಆ ಬೆಲೆ ಸಿಗುವುದಿಲ್ಲ. ಹಾಗಾಗಿ ತುಂಬಾ ದೊಡ್ಡ ಸಂಪಾದನೆಯನ್ನು ನಾನು ಮಾಡಿದ್ದೇನೆ. ತುಂಬಾ ದೊಡ್ಡ ಕಲೆಯನ್ನು ನಾನು ಕಲಿತಿದ್ದೇನೆ. ಸಣ್ಣ ಪುಟ್ಟ ಬೇಸರ ಇರಬಹುದು. ಆದರೆ ಆ ಮನೆ ಬಿಟ್ಟು ಬರುವಾಗ ನನಗೆ ತುಂಬಾ ಬೇಸರವಾಯಿತು. ಅವತ್ತು ನೈಟ್​ ಮಲಗಿಕೊಂಡಿದ್ದೆ. ಬೆಳಿಗ್ಗೆ ಎದ್ದಾಗ ಕ್ಯಾಮೆರಾ ಎಲ್ಲಿ ಇದೆ ಎಂದು ಹುಡುಕುತ್ತಾ ಇದ್ದೆ. ಅಷ್ಟು ಬಿಗ್​ಬಾಸ್​ ಅನ್ನು ಮಿಸ್​ ಮಾಡಿಕೊಳ್ತಿದ್ದೇನೆ. ನನಗೆ ಬಿಗ್​ಬಾಸ್​ ತುಂಬಾ ದೊಡ್ಡ ಉಡುಗೊರೆಯನ್ನು ಕೊಟ್ಟಿದೆ. ನಾನು ಯಾವತ್ತು ಕೂಡ ಅದನ್ನು ಕಳೆದುಕೊಳ್ಳಲು ಆಗುವುದಿಲ್ಲ. I thank Bigg Boss' ಎಂದು ಹೇಳಿ, ಸಂಭಾವನೆಯ ವಿಷಯವನ್ನು ಗೋಪ್ಯವಾಗಿಟ್ಟಿದ್ದಾರೆ. 

ಈ ಹಿಂದೆ ಅವರು,  ನೇರ ಪ್ರಸಾರದಲ್ಲಿ ಬಂದು ವಾಪಸ್​ ಹೋಗಲು ತಮಗೆ ಅವಕಾಶ ಇಲ್ಲ ಎಂದು ನೋವು ತೋಡಿಕೊಂಡಿದ್ದರು.  ಒಂದು ಚಿಕ್ಕ ಪದದಿಂದ ಬಿಗ್​ಬಾಸ್​ನಿಂದ ಹೊರಕ್ಕೆ ಕಳುಹಿಸಲಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದ ಅವರು, ಇನ್ನೂ ನನಗೆ ಅರ್ಥವಾಗದ ವಿಷಯ ಏನೆಂದರೆ,  ಚೈತ್ರಾ ಕುಂದಾಪುರ, ತುಕಾಲಿ ಮಾನಸ, ಮಂಜಣ್ಣ ಇವರೆಲ್ಲರೂ ನನ್ನ ಹಾಗೆಯೇ ಕೆಲವು ಸಲ ಕೆಟ್ಟ ಪದ ಪ್ರಯೋಗ ಮಾಡಿದ್ದಾರೆ. ಆದರೆ ನನ್ನೊಬ್ಬನನ್ನೇ ಯಾಕೆ ಹೊರಗೆ ಕಳುಹಿಸಿದ್ದೋ ಗೊತ್ತಾಗುತ್ತಿಲ್ಲ ಎಂದು ಬೇಸರಿಸಿದ್ದಾರೆ. ಇದೇ ವೇಳೆ ನೀವು ಮತ್ತೆ ಹೋಗ್ತೀರಾ ಎಂದು ಹಲವರು ಪ್ರಶ್ನಿಸುತ್ತಾರೆ. ಆದರೆ ಇದು ಸಾಧ್ಯವಿಲ್ಲ. ಏಕೆಂದ್ರೆ ಇದಾಗಲೇ ಸುದೀಪ್​ ಅವರು, ಬಿಗ್​ಬಾಸ್​ಗೆ ಜಗದೀಶ್​ ಮುಗಿದು ಹೋಗಿರೋ ಅಧ್ಯಾಯ ಎಂದಿದ್ದಾರೆ. ಆದ್ದರಿಂದ ಮತ್ತೆ ವಾಪಸ್​ ಹೋಗುವ ಯಾವುದೇ ಚಾನ್ಸ್​ ಇಲ್ಲ ಎನ್ನುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದರು. 

ಅವ್ರು ಕೂಡ ಕೆಟ್ಟ ಪದ ಬಳಸಿದ್ರು... ಆದ್ರೆ ನಾನೊಬ್ಬನೇ ಟಾರ್ಗೆಟ್​ ಆಗಿದ್ಯಾಕೊ? ನೋವು ತೋಡಿಕೊಂಡ ಲಾಯರ್​ ಜಗದೀಶ್​

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?