'ಮಗಳು ಜಾನಕಿ' ಖ್ಯಾತಿಯ ನಟ ರವಿ ಸ್ಥಿತಿ ಗಂಭೀರ; ಮಗನ ಆರೋಗ್ಯಕ್ಕೆ ಪ್ರಾರ್ಥಿಸಿ ಎಂದು ಕಣ್ಣೀರಿಟ್ಟ ತಂದೆ

Published : Sep 14, 2022, 05:25 PM ISTUpdated : Sep 14, 2022, 05:32 PM IST
'ಮಗಳು ಜಾನಕಿ' ಖ್ಯಾತಿಯ ನಟ ರವಿ ಸ್ಥಿತಿ ಗಂಭೀರ; ಮಗನ ಆರೋಗ್ಯಕ್ಕೆ ಪ್ರಾರ್ಥಿಸಿ ಎಂದು ಕಣ್ಣೀರಿಟ್ಟ ತಂದೆ

ಸಾರಾಂಶ

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರವಾಗಿ ಎನ್ನುವ ಮಾಹಿತಿ ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರವಾಗಿ ಎನ್ನುವ ಮಾಹಿತಿ ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಬಿಜೆಎಸ್ ನಲ್ಲಿರುವ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಣಿಸಿಕೊಂಡಿದ್ದರು. 43 ವರ್ಷದ ನಟ ರವಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ನಿರ್ದೇಶಕ ಸೀತರಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಜಾಂಡಿಸ್ ಎಂದು ಆಸ್ಪತ್ರೆ ದಾಖಲಾಗಿದ ರವಿ ಇಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಬಗ್ಗೆ ರವಿ ಅವರ ತಂದೆ ಮುದ್ದೇಗೌಡ ಸುವರ್ಣ ನ್ಯೂಸ್ ಜೊತೆ ಮಾತನಾಡಿ ಮಗನ ಸ್ಥಿತಿ ಗಂಭೀರವಾಗಿದೆ, ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಎಂದು ಕಣ್ಣೀರಿಟ್ಟರು. ' ಮಗನ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಡಿಶ್ಚಾರ್ಚ್ ಮಾಡಿ ಮಂಡ್ಯಕ್ಕೆ ಕರೆದುಕೊಂಡು ಹೋಗುತ್ತಿದ್ದೇವೆ. ದಯವಿಟ್ಟು ಎಲ್ಲರೂ ಮಗನ ಆರೋಗ್ಯಕ್ಕಾಗಿ ಪ್ರಾರ್ಥಿಸಿ' ಎಂದು ಮನವಿ ಮಾಡಿದರು.  

ಉತ್ತರ ಕನ್ನಡದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಹೆಚ್ಚಿದ ಕೂಗು..!

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ರವಿ ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ  ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.

ನಟ ರವಿ ಅನೇಕ ಧಾರಾವಾಹಿಗಳಲ್ಲಿ ಮಿಂಚಿದ್ದಾರೆ. ಚಿತ್ರಲೇಖ, ಮಿಂಚು, ಮುಕ್ತ ಮುಕ್ತ, ವರಲಕ್ಷ್ಮೀ ಸ್ಟೋರ್ಸ್ ಮುಂತಾದ ಧಾರಾವಾಹಿಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕ್ರೈಂ ಫೈಲ್ ಕಾರ್ಯಕ್ರಮವನ್ನು ರವಿಪ್ರಸಾದ್ ನಿರೂಪಣೆ ಮಾಡಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?