ಕರ್ಮ​ ರಿಟರ್ನ್ಸ್​ ಎನ್ನೋದು ಇದಕ್ಕೇ ಅಲ್ವಾ? ಶಾರ್ವರಿ ಬಂಡವಾಳ ತುಳಸಿ ಮುಂದೆ ಬಯಲಾಗುತ್ತಾ?

Published : Apr 09, 2024, 06:05 PM ISTUpdated : Apr 09, 2024, 06:09 PM IST
ಕರ್ಮ​ ರಿಟರ್ನ್ಸ್​ ಎನ್ನೋದು ಇದಕ್ಕೇ ಅಲ್ವಾ? ಶಾರ್ವರಿ ಬಂಡವಾಳ ತುಳಸಿ ಮುಂದೆ ಬಯಲಾಗುತ್ತಾ?

ಸಾರಾಂಶ

ಶಾರ್ವರಿಗೆ ಈಗ ಗಂಡನೇ ಬಿಸಿತುಪ್ಪವಾಗಿದ್ದಾನೆ. ಆಗಾಗ್ಗೆ ಹಿಂದಿನದ್ದನ್ನು ಕೆದಕುತ್ತಾ ಈಕೆಯ ನೆಮ್ಮದಿ ಹಾಳು ಮಾಡುತ್ತಿದ್ದಾನೆ. ಕರ್ಮ ರಿಟರ್ನ್ಸ್​ ಎನ್ನೋದು ಇದಕ್ಕೇ ಅಲ್ವಾ?  

ಮಾಧವ್​ ತನ್ನ ಮೊದಲ ಪತ್ನಿಯ ಅಪಘಾತಕ್ಕೆ ತಾನೇ ಕಾರಣ ಎಂದುಕೊಂಡಿದ್ದಾನೆ. ಆದರೆ ಅಸಲಿಗೆ ಅದನ್ನು ಮಾಡಿಸಿದ್ದು, ಶಾರ್ವರಿ ಎನ್ನುವ ಸತ್ಯ ಶಾರ್ವರಿಗೆ ಬಿಟ್ಟರೆ ಗೊತ್ತಿರುವುದು ಮಹೇಶ್​ಗೆ ಮಾತ್ರ. ಅದೇ ಅಪಘಾತದಲ್ಲಿ ಮಹೇಶ್​ ನೆನಪು ಕಳೆದುಕೊಂಡು ಹಾಸಿಗೆ ಹಿಡಿದಿದ್ದ. ಆತ ಹುಷಾರಾಗಿ ಬಿಟ್ಟರೆ ತನ್ನ ಗುಟ್ಟೆಲ್ಲಿ ಬಯಲಾಗುವುದೋ ಎಂದುಕೊಂಡಿದ್ದ ಶಾರ್ವರಿ, ಆತನಿಗೆ ಹುಷಾರು ಆಗದ ರೀತಿಯಲ್ಲಿ ಏನೇನೋ ಮಾತ್ರೆಗಳನ್ನು ನೀಡುತ್ತಿದ್ದಳು. ಆದರೆ ತುಳಸಿ ಯಾವಾಗ ಆ ಮನೆಗೆ ಕಾಲಿಟ್ಟಳೋ ಎಲ್ಲವೂ ಬದಲಾಯಿತು. ಶಾರ್ವರಿಯ ತಂತ್ರ, ಕುತಂತ್ರ ಏನೂ ಅರಿಯದ ಮುಗ್ಧ ತುಳಸಿ ಮಹೇಶ್​ನ ಸೇವೆ ಮಾಡುತ್ತಲೇ, ಆತ ಹುಷಾರಾಗಿದ್ದಾನೆ. ಆತ ಹಾಸಿಗೆ ಮೇಲೆ ಇರುವಾಗಲೂ ಸದಾ ಖರ್ಜೂರ ಖರ್ಜೂರ ಎನ್ನುತ್ತ ಏನೋ ನೆನಪು ಮಾಡಿಕೊಳ್ಳುತ್ತಿದ್ದ. ಈ ಶಬ್ದ ಕೇಳುತ್ತಿದ್ದಂತೆಯೇ ಶಾರ್ವರಿ ಗರ ಬಡಿದವಳಂತೆ ಆಗುತ್ತಿದ್ದಳು. ಅಪಘಾತಕ್ಕೂ ಮುನ್ನ ಖರ್ಜೂರ ತಿಂದದ್ದಕ್ಕೂ, ಪೂರ್ಣಿಯ ಗರ್ಭಪಾತವಾಗುವುದಕ್ಕೂ ಎಲ್ಲದಕ್ಕೂ ಲಿಂಕ್​ ಇದೆ ಎನ್ನುವುದು ಅವನ ಮಾತಿನಿಂದ ತಿಳಿದು ಬರುತ್ತಿತ್ತು. ಆದರೆ ಅರೆಬರೆ ನೆನಪಿನಲ್ಲಿದ್ದ ಮಹೇಶ್​

ತುಳಸಿ, ಪೂರ್ಣಿ ಮತ್ತು ಮಾಧವ್​ ಮೇಲೆ ಸದಾ ಕಿಡಿ ಕಾರುತ್ತಾ, ಅವರನ್ನು ತುಳಿಯಲು ನೋಡುತ್ತಾ, ಇನ್ನಿಲ್ಲದ ಮಸಲತ್ತು ಮಾಡುತ್ತಿರುವ ಶಾರ್ವರಿಗೆ ಈಗ ಸಂಕಟ ಎದುರಾಗಿದೆ. ಅದೂ ಖುದ್ದು ಪತಿ ಮಹೇಶ್​ನಿಂದಲೇ. ಮಹೇಶ್​ನಿಗೆ ಶಾರ್ವರಿಯ ಎಲ್ಲಾ ಮಸಲತ್ತುಗಳ ಪರಿಚಯ ಚೆನ್ನಾಗಿಯೇ ಇದೆ. ಇದೀಗ ಸಂಪೂರ್ಣವಾಗಿ ಹುಷಾರಾದ ಮೇಲೂ ಆ ವಿಷಯವನ್ನು ಕೆದಕಿರಲಿಲ್ಲ. ಆದರೆ ಪತ್ನಿ ಶಾರ್ವರಿಯ ಕುತಂತ್ರ ಆತನಿಗೆ ಚೆನ್ನಾಗಿ ಗೊತ್ತು. ಇದೀಗ ಪತ್ನಿಯನ್ನು ಹೊಗಳುವಂತೆ ಮಾಡಿ, ಮತ್ತೆ ಖರ್ಜೂರದ ವಿಷಯ ತೆಗೆದಿದ್ದ.  ತುಳಸಿ, ಪೂರ್ಣಿಯನ್ನು ಯಾಕೆ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಮಹೇಶ್​ ಕೇಳಿದಾಗ, ಅವರಿಬ್ಬರೂ ಹೊರಗಿನವರಲ್ವಾ, ಅದಕ್ಕೆ ಹಾಗೆ ಅಂದಿದ್ದಾಳೆ ಶಾರ್ವರಿ. ಹಾಗಿದ್ದರೆ ದೀಪಿಕಾ ಕೂಡ ಹೊರಗಿನವಳಲ್ವಾ ಎಂದಿದ್ದ ಮಹೇಶ್​. ಅದಕ್ಕೆ ಶಾರ್ವರಿ, ಹಾಗೇನು ಇಲ್ಲ, ಎಲ್ಲರೂ ಒಗ್ಗಟ್ಟಾಗಿ ಇರಬೇಕು ಎನ್ನುವುದೇ ನನ್ನ ಆಸೆ ಎಂದಿದ್ದಳು.

ಜಯಾ ಬಚ್ಚನ್​@76: ಪತಿ ಅಮಿತಾಭ್ ಬಚ್ಚನ್​​-ರೇಖಾ ಸಂಬಂಧದ ಕುರಿತು ನಟಿ ಹೇಳಿದ್ದೇನು?

ಇದೀಗ ಮತ್ತೆ ಮಹೇಶ್​ ಪತ್ನಿಗೆ ಶಾಕ್​ ಕೊಟ್ಟಿದ್ದಾನೆ. ಅಪಘಾತಕ್ಕೂ ಮುನ್ನ ಕೆಲವೊಬ್ಬರಿಂದ ಸಾಲ ಮಾಡಿದ್ದೆ. ಇನ್ನೂ ಕೆಲವು ಕೆಲಸ ಬಾಕಿ ಇದೆ. ಯಾವ ಕೆಲಸವನ್ನೂ ಉಳಿಸಿಕೊಳ್ಳಬಾರದು. ಎಲ್ಲವನ್ನೂ ವಸೂಲು ಮಾಡಬೇಕು ಎಂದು ದ್ವಂದ್ವಾರ್ಥದಲ್ಲಿ ಮಹೇಶ್​ ಹೇಳಿದ್ದಾನೆ. ಎಲ್ಲರೂ ಇದೇನು ಹೇಳುತ್ತಿದ್ದೀರಿ ಎಂದು ಗೊತ್ತಾಗುತ್ತಿಲ್ಲ ಎಂದಾಗ, ಶಾರ್ವರಿಗೆ ಎಲ್ಲವೂ ಅರ್ಥವಾಗಿದೆ. ಇದಕ್ಕೆ ಸುಮ್ಮನಾಗದ ಮಹೇಶ್​, ನಿಮಗೆ ಅರ್ಥವಾಗಲ್ಲ... ಶಾರ್ವರಿಗೆ ಅರ್ಥವಾಗತ್ತೆ ಎಂದು ಶಾಕ್​ ಕೊಟ್ಟಿದ್ದಾನೆ. ಸದಾ ಕುತಂತ್ರ ಮಾಡುತ್ತಿರುವ ಶಾರ್ವರಿಗೆ ಈಗ ಪತಿಯಿಂದಲೇ ಶಾಕ್​ ಮೇಲೆ ಶಾಕ್​ ಎದುರಾಗಿದೆ. ಇಷ್ಟಕ್ಕೆ ಸುಮ್ಮನಾಗದ ಮಹೇಶ್​ ಎಲ್ಲವೂ ವಾಪಸ್​ ಬರಲೇಬೇಕು. ಅದಕ್ಕೇ ಕರ್ಮ ರಿಟರ್ನ್ಸ್​ ಎನ್ನೋದು ಅಲ್ವಾ ಶಾರ್ವರಿ ಎಂದು ಪ್ರಶ್ನಿಸಿದ್ದಾನೆ. ಇದನ್ನು ಕೇಳಿ ಎಲ್ಲರಿಗೂ ಅಚ್ಚರಿಯಾದರೂ ತುಳಸಿಗೆ ಏನೋ ಅನುಮಾನ ಶುರುವಾಗಿದೆ.

ಮಹೇಶ್​ ಹಿಂದೆ ಹುಷಾರಿಲ್ಲದ ಸಂದರ್ಭದಲ್ಲಿ ಮಾತನಾಡುತ್ತಿದ್ದ ಸಂದರ್ಭಗಳಲ್ಲಿ ಅಪಘಾತದ ಬಗ್ಗೆ ಆತನಿಗೆ ಏನೋ ರಹಸ್ಯ ತಿಳಿದಿದೆ ಎನ್ನುವ ಅನುಮಾನ ತುಳಸಿಗೆ ಮೊದಲಿನಿಂದಲೂ ಇತ್ತು. ಇದೀಗ ಮತ್ತೆ ಅನುಮಾನ ಶುರುವಾಗಿದೆ. ಶಾರ್ವರಿಯ ಮಾತಿಗೂ, ಮಹೇಶ್​ಗೂ ಏನೋ ಸಂಬಂಧವಿದೆ, ಇದರಲ್ಲಿ ಏನೋ ರಹಸ್ಯವಿದೆ ಎಂದುಕೊಂಡಿರುವ ತುಳಸಿ, ಇದನ್ನು ಹೇಗಾದರೂ ಮಾಡಿ ತಿಳಿದುಕೊಳ್ಳಲೇಬೇಕು ಎಂದು ಪಣ ತೊಟ್ಟಿದ್ದಾಳೆ. ತುಳಸಿಗೆ ರಹಸ್ಯ ಗೊತ್ತಾಗಿಬಿಡುತ್ತಾ? ರಹಸ್ಯ ಗೊತ್ತಾದರೆ ಸೀರಿಯಲ್​ ಅರ್ಧ ಮುಗಿದಂತೆಯೇ, ಅದು ಇಷ್ಟು ಬೇಗ ಗೊತ್ತಾಗಲ್ಲ ಅಂತಿದ್ದಾರೆ ಶ್ರೀರಸ್ತು, ಶುಭಮಸ್ತು ಫ್ಯಾನ್ಸ್​. ಹಾಗಿದ್ದರೆ ಮುಂದೇನು? ಎಲ್ಲರನ್ನೂ ಮನಸೋ ಇಚ್ಛೆ ಆಡಿಸುತ್ತಿರುವ ಶಾರ್ವರಿಗೆ ಈಗ ಇಂಗು ತಿಂದ ಮಂಗನ ಸ್ಥಿತಿ, ಅದೂ ಖುದ್ದು ಪತಿಯಿಂದಲೇ. ತುಂಬಾ ಚೆನ್ನಾಗಿದೆ ಎನ್ನುತ್ತಿದ್ದಾರೆ ಸೀರಿಯಲ್​ ಅಭಿಮಾನಿಗಳು.

ಯುಗಾದಿಯಂದೇ ಭಾಗ್ಯ- ತಾಂಡವ್​ ಭರ್ಜರಿ ಪ್ರತಿಜ್ಞೆ: ಗೆಲುವು ಯಾರಿಗೆ, ಹೇಗೆ?


PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?
BBK 12: ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ