ಪೆದ್ದು ಮಲ್ಲಿಯ ಅದ್ಭುತ ಕಂಠಸಿರಿಗೆ ಮನಸೋತ ಫ್ಯಾನ್ಸ್‌: ನಟನೆಯಷ್ಟೇ ಮುದ್ದಾಗಿದೆ ದನಿ ಅಂತಿದ್ದಾರೆ...

Published : May 29, 2024, 08:28 PM IST
ಪೆದ್ದು ಮಲ್ಲಿಯ ಅದ್ಭುತ ಕಂಠಸಿರಿಗೆ ಮನಸೋತ ಫ್ಯಾನ್ಸ್‌: ನಟನೆಯಷ್ಟೇ ಮುದ್ದಾಗಿದೆ ದನಿ ಅಂತಿದ್ದಾರೆ...

ಸಾರಾಂಶ

ಅಮೃತಧಾರೆ ಸೀರಿಯಲ್‌ನ ಮಲ್ಲಿ ಅಲಿಯಾಸ್‌ ರಾಧಾ ಭಗವತಿ ಹಾಡೊಂದನ್ನು ಶೇರ್‌ ಮಾಡಿಕೊಂಡಿದ್ದು, ಇದಕ್ಕೆ ಥಹರೇವಾರಿ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.   

ಮಲ್ಲಿ ಎಂದರೆ ಸಾಕು ಸೀರಿಯಲ್‌ ಪ್ರಿಯರ ಲಕ್ಷ್ಯ ಹೋಗುವುದು ಅಮೃತಧಾರೆಯ ಪೆದ್ದು ಪೆದ್ದು ಕೆಲಸಗಾರ್ತಿ ಮಲ್ಲಿ. ಕೆಲಸಗಾರಳಾಗಿ ಸೇರಿಕೊಂಡು ಮನೆಯ ಮಾಲೀಕನ ಪುತ್ರನ ಮೋಸದ ಜಾಲಕ್ಕೆ ಬಿದ್ದು ಗರ್ಭಿಣಿಯಾಗಿದ್ದಾಳೆ ಈ ಮಲ್ಲಿ. ಆದರೆ, ನಾಯಕಿ ಭೂಮಿಕಾಳ ಸಮಯ ಪ್ರಜ್ಞೆಯಿಂದಾಗಿ ಈಗ ಮನೆಯ ಯಜಮಾನಿಯಾಗಿದ್ದಾಳೆ. ಆದರೆ ಆಕೆಯನ್ನು  ಕೊಲ್ಲಲು ಪ್ರತಿಹಂತವೂ ಗಂಡ ಮತ್ತು ಅತ್ತೆ ಸಂಚು ರೂಪಿಸುತ್ತಲೇ ಇದ್ದಾರೆ. ಮಲ್ಲಿಗೆ ಆಧಾರವಾಗಿ ನಿಂತಿದ್ದಾಳೆ ಭೂಮಿಕಾ. ಈ ರೀತಿ ಪೆದ್ದು ಪೆದ್ದು ಪಾತ್ರದಲ್ಲಿ ಸೈ ಎನಿಸಿಕೊಂಡಿರುವ ಮಲ್ಲಿಯ ನಿಜವಾದ ಹೆಸರು ರಾಧಾ ಭಗವತಿ. ಸೋಷಿಯಲ್‌ ಮೀಡಿಯಾದಲ್ಲಿ ಸಕತ್‌ ಆಕ್ಟೀವ್‌ ಆಗಿರುವ ಮಲ್ಲಿ ಕ್ಯೂಟ್‌ ಫೋಟೋಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಸುಂದರವಾಗಿ ಹಾಡಿರುವ ವಿಡಿಯೋ ಶೇರ್‍ ಮಾಡಿಕೊಂಡಿದ್ದಾರೆ. ಇವರ ಅದ್ಭುತ ಕಂಠಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ನಿಮ್ಮ ನಟನೆಯಷ್ಟೇ ಕ್ಯೂಟ್‌ ಆಗಿದೆ ನಿಮ್ಮ ದನಿ, ಮತ್ತೆ ಮತ್ತೆ ಕೇಳಬೇಕು ಎನ್ನಿಸುತ್ತದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಅದೇ ರೀತಿ ಕೆಲವರು ನಿಮ್ಮ ಗಂಡ (ಜೈದೇವ) ಒಳ್ಳೆಯವನಲ್ಲ, ಸ್ವಲ್ಪ ಎಚ್ಚರಿಕೆಯಿಂದ ಇರಿ ಎಂದೂ ಹೇಳುತ್ತಿದ್ದಾರೆ. 

ಅಂದಹಾಗೆ, ರಾಮ್​ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಧಾ ಅವರು ಇದೀಗ ಮಲ್ಲಿಯ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್​ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ  ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸುತ್ತಿದ್ದಾರೆ. ಮಾಡೆಲ್ ಕೂಡ ಆಗಿರುವ ಇವರಿಗೆ  ಚಿತ್ರರಂಗದಲ್ಲಿ   ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ. 

ಸಿನಿಮಾದಲ್ಲಿ ಹೀರೋ ಆಗಲು ಇಷ್ಟವಿಲ್ಲ... ಆದ್ರೆ... ಬಿಗ್​ಬಾಸ್​ ವಿನಯ್​ ಗೌಡ್​ ಓಪನ್​ ಮಾತು...
 
 ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ.  ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ.
 
ಅಂದಹಾಗೆ ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ  ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ  ಜನಪದ ಗೀತೆಗಳಿಗೆ ದನಿಯಾದವರು.  ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ. ಕಿರುತೆರೆ, ಹಿರಿತೆರೆ, ಮ್ಯೂಸಿಕ್ ಆಲ್ಬಂ ಮಾತ್ರವಲ್ಲದೇ ರಾಧಾ ಅವರು, ಹಿನ್ನೆಲೆ ಗಾಯಕಿಯೂ ಹೌದು. ಈಗಾಗಲೇ ಎರಡು ಸಿನಿಮಾಗಳಲ್ಲಿ ಹಾಡಿರುವ ಈಕೆ ಕಂಠದಾನಕ್ಕೂ ಸೈ. 'ಮದುಮಗಳು' ಧಾರಾವಾಹಿಯಲ್ಲಿನ ನಾಯಕಿಯ ಪಾತ್ರಕ್ಕೆ ಕಂಠದಾನ ಮಾಡುತ್ತಿರುವ ರಾಧಾ ಅವರಿಗೆ ಕಲೆ ಎಂಬುದು ರಕ್ತಗತವಾಗಿಯೇ ಒಲಿದು ಬಂದಿದೆ.

ಸೀತಾ-ರಾಮ ಅದ್ಧೂರಿ ಎಂಗೇಜ್‌ಮೆಂಟ್‌: ರಿಯಲ್ಲೋ ರೀಲೊ? ನಿಜವಾಗ್ಲೂ ಮದ್ವೆ ಆಗ್ತಿದ್ದಾರಾ?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ
Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?