ಮುದ್ದು ಸಿಹಿಯ ಆ್ಯಕ್ಟಿಂಗ್​ಗೆ ಮನಸೋತವರೇ ಈಗ ಉಲ್ಟಾ ಹೊಡೀತಿದ್ದಾರೆ! ಇವಳನ್ನು ಹೀಗೆ ಬಿಟ್ರೆ...

Published : Jun 01, 2024, 10:48 AM IST
ಮುದ್ದು ಸಿಹಿಯ ಆ್ಯಕ್ಟಿಂಗ್​ಗೆ ಮನಸೋತವರೇ ಈಗ ಉಲ್ಟಾ ಹೊಡೀತಿದ್ದಾರೆ! ಇವಳನ್ನು ಹೀಗೆ ಬಿಟ್ರೆ...

ಸಾರಾಂಶ

ಸೀತಾರಾಮ ಸಿಹಿಯ ಆ್ಯಕ್ಟಿಂಗ್​ ಕಂಡು ಭೇಷ್​ ಭೇಷ್​ ಅಂತಿದ್ದೋರು ಯಾಕೋ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ನೆಟ್ಟಿಗರು ಹೇಳ್ತಿರೋದೇನು?  

ಸೀತಾರಾಮ ಸೀರಿಯಲ್​ ಜನರಿಗೆ ಇಷ್ಟವಾಗಲು ನಾನು ಕಾರಣಗಳು ಇರಬಹುದು. ಆದರೆ ಬಹುತೇಕ ಮಂದಿಗೆ ಈ ಧಾರಾವಾಹಿ ಇಷ್ಟವಾಗಲು ಕಾರಣ ಪುಟಾಣಿ ಸಿಹಿ. ಮೊದಲಿನಿಂದಲೂ ಈಕೆಯ ಆ್ಯಕ್ಟಿಂಗ್​ಗೆ ಮನಸೋಲದವರೇ ಇಲ್ಲ. ಸೋಷಿಯಲ್​ ಮೀಡಿಯಾಗಳಲ್ಲಿ ಈಕೆಯನ್ನು ಹಾಡಿ ಕೊಂಡಾಡುವವರೇ ಹೆಚ್ಚು.   ಐದು ವರ್ಷದ ಹೊಸ್ತಿಲಿನಲ್ಲಿಯೇ  ತನ್ನ  ಪಾತ್ರವನ್ನು ಅರಿತು ಅದರಂತೆ ನಡೆದುಕೊಂಡ ಸಿಹಿಯನ್ನು ಕಂಡು ಅಭಿಮಾನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದ್ದಾಳೆ ಈ ಪುಟಾಣಿ. ಅದರಲ್ಲಿಯೂ ರಾಮ್​ನನ್ನು ಆಸ್ಪತ್ರೆಗೆ ಸೇರಿಸಿದ ಸನ್ನಿವೇಶದಲ್ಲಿ ಸಿಹಿ ಪಟ್ಟ ಪರಿಪಾಟಲು ನೋಡಿ ಕಣ್ಣೀರು ಹಾಕಿದವರೇ ಹೆಚ್ಚು. ಈಕೆಯ ಅಭಿನಯವನ್ನು ಕಂಡು ಭೇಷ್​ ಭೇಷ್​ ಎಂದವರೇ ಹೆಚ್ಚು.

ಆದರೆ ಅತಿಯಾದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತಾಗಿದೆ ಸಿಹಿಯ ಪಾತ್ರ ಎನ್ನುವುದು ಈಗ ಸೀರಿಯಲ್​ ಫ್ಯಾನ್ಸ್​ ಗಂಭೀರ ಆರೋಪ. ಇಂದಿನ ಹಲವು ಮಕ್ಕಳಿಗೆ ವಯಸ್ಸಿಗಿಂತಲೂ ಹೆಚ್ಚು ಮೆಚ್ಯುರಿಟಿ ಇರುತ್ತದೆ ಎನ್ನುವುದು ನಿಜವಾದರೂ ಸೀತಾರಾಮ ಸೀರಿಯಲ್​ನಲ್ಲಿ ಸಿಹಿಯನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಳಸಿಕೊಳ್ಳಲಾಗಿದೆ. ಮಕ್ಕಳಲ್ಲಿನ ಮುಗ್ಧತೆಯನ್ನು ಕಸಿದುಕೊಳ್ಳುವ ರೀತಿಯಲ್ಲಿ ತೋರಿಸಲಾಗುತ್ತಿದೆ, ಮಕ್ಕಳಿಗೆ ಸಾಮಾನ್ಯವಾಗಿ ಅರ್ಥವೇ ಆಗದಿರುವ ವಿಷಯಗಳಲ್ಲಿಯೂ ಸಿಹಿ ಪಾತ್ರವನ್ನು ಉದ್ದೇಶಪೂರ್ವಕವಾಗಿ ಟಿಆರ್​ಪಿಗೋಸ್ಕರ್​ ತೂರಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಿಹಿ ಎಲ್ಲದ್ದಕ್ಕೂ ಮೂಗು ತೂರಿಸುವಂತೆಯೇ ನಿರ್ದೇಶಕರು ತೋರಿಸುತ್ತಿದ್ದು, ಇದ್ಯಾಕೋ ಅತಿಯಾಗುತ್ತಿದೆ ಎಂದು ಬಹುದೊಡ್ಡ ವರ್ಗದ ನೆಟ್ಟಿಗರು ಸೋಷಿಯಲ್​ ಮೀಡಿಯಾಗಳಲ್ಲಿ ಕಮೆಂಟ್​ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ.

ಪತಿಗೆ ಈ ಪರಿ ಟಾರ್ಚರ್​ ಕೊಡ್ತಾರಾ ಶುಭಾ ಪೂಂಜಾ? ಬಿಗ್​ಬಾಸ್​ಗೆ ಮತ್ತೆ ಆಫರ್​ ಬಂದ್ರೆ ಹೀಗಾಗತ್ತಂತೆ!

ಇದೀಗ ಸೀತಾಳನ್ನು ರಾಮ್​ ಚಿಕ್ಕಮ್ಮ ಇನ್​ಸಲ್ಟ್​ ಮಾಡಿದ್ದನ್ನು ಸಿಹಿ ಕೇಳಿಸಿಕೊಂಡಿದ್ದಾಳೆ. ಆದರೆ ರಾಮ್​  ಏನೂ ಹೇಳಿಲ್ಲ ಎನ್ನುವುದಕ್ಕೆ ಸಿಹಿಗೆ ಕೋಪ ಬಂದಿದೆ. ರಾಮ್​ನ ಕಾಲ್​ ತೆಗೆದುಕೊಳ್ಳುತ್ತಿಲ್ಲ. ಅಮ್ಮನಿಗೆ ಯಾರಾದರೂ ಬೈದರೆ ಮಕ್ಕಳಿಗೆ ಕೋಪ ಬರುವುದು ಸಹಜವೇ. ಆದ್ದರಿಂದ ಇಲ್ಲಿ ಸಿಹಿ ರಾಮ್​ ಮೇಲೆ ಕೋಪ ಮಾಡಿಕೊಳ್ಳುತ್ತಿರುವುದೂ ಸಹಜವೇ. ಈ ಪಾತ್ರವನ್ನೂ ಸಿಹಿ ಚೆನ್ನಾಗಿಯೇ ನಿಭಾಯಿಸಿದ್ದಾಳೆ. ಮಕ್ಕಳಿಗೆ ಕೋಪ ಬಂದರೆ ಹೇಗೆ ರಿಯಾಕ್ಟ್​  ಮಾಡುತ್ತಾರೋ ಅದೇ ರೀತಿ ಆ್ಯಕ್ಟಿಂಗ್​ ಮಾಡಿದ್ದಾಳೆ. ಆದರೆ ಇತ್ತೀಚಿನ ಕೆಲವು ಎಪಿಸೋಡ್​ಗಳನ್ನು ಉಲ್ಲೇಖಿಸಿರುವ ನೆಟ್ಟಿಗರು ಸಿಹಿಯ ಪಾತ್ರವನ್ನು ಅತಿಯಾಗಿ ತೋರಿಸಲಾಗುತ್ತಿದೆ. ಮಕ್ಕಳು ಈಕೆಯನ್ನು ನೋಡಿ ಅದೇ ರೀತಿ ವರ್ತಿಸುವಂತಾಗಿದೆ. ಹೀಗೆಯೇ ಬಿಟ್ಟರೆ ಈಕೆ ಸೀತಾ-ರಾಮ್​ ಇಬ್ಬರನ್ನೂ ಒಟ್ಟಿಗೆ ಇರಲು ಬಿಡುವುದಿಲ್ಲ, ಡಿವೋರ್ಸ್​ ಕೊಡಿಸಿಯೇ ಬಿಡುತ್ತಾಳೆ ಎಂದೆಲ್ಲಾ ಹೇಳುತ್ತಿದ್ದಾರೆ.

ಈಕೆಯ ನಿಜವಾದ ಹೆಸರು ರಿತು ಸಿಂಗ್​. ಡ್ರಾಮಾ ಜ್ಯೂನಿಯರ್ಸ್ ಸೀಸನ್ 4 ಶೋ ಮೂಲಕ ಕಿರುತೆರೆ ಜನರಿಗೆ ಪರಿಚಿತರಾದ ರಿತು ಸಿಂಗ್ ಕ್ರೇಜಿಸ್ಟಾರ್​  ರವಿಚಂದ್ರನ್ ಅವರ ಫೇವರೆಟ್​ ನಟಿ. ಡ್ರಾಮಾ ಜ್ಯೂನಿಯರ್ಸ್ ಶೋನಲ್ಲಿ ಮುದ್ದು ಮುದ್ದಾಗಿ ಮಾತನಾಡುತ್ತ, ಸದಾ ರವಿಚಂದ್ರನ್ ಗರ್ಲ್‌ಫ್ರೆಂಡ್ ನಾನು ಎಂದು ಹೇಳುತ್ತಿದ್ದ ಈ ಪುಟ್ಟ ಪೋರಿ ಈಗ ಸೀರಿಯಲ್‌ನ ಕೇಂದ್ರ ಬಿಂದು ಆಗಿದ್ದಾಳೆ. ಐದು ವರ್ಷದ ಪೋರಿ ನಟನೆಗೆ, ಮುದ್ದು ಮುದ್ದಾದ ಮಾತಿಗೆ ವೀಕ್ಷಕರು ಮನ ಸೋತಿದ್ದಾರೆ. ಅಂದಹಾಗೆ, ರೀತು ನೇಪಾಳದವಳು. ನೇಪಾಳ ಮೂಲದ ರಿತು ತಾಯಿ ಜೊತೆಗೆ ಬೆಂಗಳೂರಿನಲ್ಲಿ ನೆಲೆಸಿದ್ದಾಳೆ. ಸೀತಾರಾಮ ಸೀರಿಯಲ್​ಗೂ ಸಿಹಿ ಬಾಳಿಗೂ ಸಾಮ್ಯತೆ ಇದೆ. ಹೌದು. ಸೀತಾರಾಮ ಸೀರಿಯಲ್​ ರೀತಿಯಲ್ಲಿಯೇ ಈಕೆಯ ನಿಜ ಜೀವನದ ಕೂಡ ಇದೆ. ಸೀತಾರಾಮ ಸೀರಿಯಲ್​ನಲ್ಲಿ ಈಕೆಗೆ ಅಪ್ಪ ಇಲ್ಲ. ಅಮ್ಮನೇ ಸರ್ವಸ್ವ. ಅದೇ ರೀತಿ ರಿತು ರಿಯಲ್​ ಲೈಫ್​ ಸ್ಟೋರಿ ಕೂಡ. ಇದರ ಬಗ್ಗೆ ಖುದ್ದು ಅವರ ಅಮ್ಮನೇ ಹೇಳಿಕೊಂಡಿದ್ದರು.

ವೇಟ್​ ಮಾಡ್ತಾ ಇದ್ದೀನಿ ಎನ್ನುತ್ತಲೇ ಅಭಿಮಾನಿಗಳ​ ತಲೆಗೆ ಹುಳು ಬಿಟ್ಟ ಆ್ಯಂಕರ್​ ಅನುಶ್ರೀ...

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?
Naa Ninna Bidalaare: ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!