ಕಾಲುಂಗರ ಇಲ್ಲದೇ ನಿಧಿಯನ್ನು ಮನೆ ತುಂಬಿಸಿಕೊಂಡದ್ದೂ ಆಗೋಯ್ತು! ಶ್ರೀರಸ್ತು ಶುಭಮಸ್ತು ಸೀರಿಯಲ್​ ಮುಕ್ತಾಯ?

Published : Apr 06, 2025, 06:59 PM ISTUpdated : Apr 07, 2025, 11:04 AM IST
ಕಾಲುಂಗರ ಇಲ್ಲದೇ ನಿಧಿಯನ್ನು ಮನೆ ತುಂಬಿಸಿಕೊಂಡದ್ದೂ ಆಗೋಯ್ತು! ಶ್ರೀರಸ್ತು ಶುಭಮಸ್ತು ಸೀರಿಯಲ್​ ಮುಕ್ತಾಯ?

ಸಾರಾಂಶ

"ಶ್ರೀರಸ್ತು ಶುಭಮಸ್ತು" ಧಾರಾವಾಹಿಯಲ್ಲಿ, ತುಳಸಿ ಕುಟುಂಬ ರಕ್ಷಿಸಲು ಹೋರಾಡುತ್ತಿದ್ದರೆ, ಶಾರ್ವರಿ ವಿನಾಶಕ್ಕೆ ಸಂಚು ರೂಪಿಸಿದ್ದಾಳೆ. ಶಾರ್ವರಿಯ ಕುತಂತ್ರ ಬಯಲಿಗೆ ಬಂದು, ಆಕೆ ಜೈಲು ಸೇರುವ ಸಾಧ್ಯತೆ ಇದೆ. ಇತ್ತೀಚೆಗೆ ನಡೆದ ಮದುವೆಯಲ್ಲಿ ಕಾಲುಂಗುರ ಮರೆತಿರುವ ಬಗ್ಗೆ ವೀಕ್ಷಕರು ಗಮನಿಸಿದ್ದಾರೆ. ತುಳಸಿಯ ಮಗಳ ಪಾತ್ರದಲ್ಲಿರುವ ಮಗುವಿನ ಬಗ್ಗೆಯೂ ಕುತೂಹಲವಿದೆ.

ಶ್ರೀರಸ್ತು ಶುಭಮಸ್ತು ಸೀರಿಯಲ್‌ ಈಗ ಕುತೂಹಲದ ಘಟ್ಟ ತಲುಪಿದೆ. ಮನೆಯ ಒಳಿತಿಗಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ತುಳಸಿ ಹಾಗೂ ಎಲ್ಲರನ್ನೂ ಸರ್ವನಾಶ ಮಾಡಲು ಏನು ಬೇಕಾದರೂ ಮಾಡಲು ಪಣ ತೊಟ್ಟಿರುವ ಶಾರ್ವರಿ... ಈ ಇಬ್ಬರು ಸೊಸೆಯಂದಿರ ನಡುವಿನ ಕಥೆಯ ಹಂತಕ್ಕೆ ಬಂದು ತಲುಪಿದೆ.  ಕುಟುಂಬ, ಪತಿ, ಮಕ್ಕಳು ಎಂದು ಬಂದರೆ ಯಾವುದಕ್ಕೂ ಜಗ್ಗದೇ, ಕುಗ್ಗದೇ ಮುನ್ನುಗ್ಗುವವಳು ತುಳಸಿ. ಆದರೆ ಏನೇ ಆದರೂ ಸೈ. ಗಂಡನ ಇಡೀ ಕುಟುಂಬವನ್ನೇ ನಾಶ ಮಾಡಿ ನೆಮ್ಮದಿಯ ಉಸಿರು ಬಿಡುವ ತವಕದಲ್ಲಿದ್ದಾಳೆ ಶಾರ್ವರಿ.  ಅದೇ ಇನ್ನೊಂದೆಡೆ,  ಸಮರ್ಥ್​, ಅವಿ-ಅಭಿ ಎಲ್ಲರೂ ಒಂದಾಗಿದ್ದಾರೆ. ಶಾರ್ವರಿಯ ಕುತಂತ್ರ ಬಹುತೇಕ ಎಲ್ಲರಿಗೂ ಗೊತ್ತಾಗಿ, ಅವರೆಲ್ಲರೂ ಶಾರ್ವರಿಯ ವಿರುದ್ಧ ಸಿಡಿದೆದ್ದಿದ್ದಾರೆ. ಅದೇ ಇನ್ನೊಂದೆಡೆ,  ಅತ್ತೆಯ ಮಾತು ಕೇಳಿ ತಂಗಿ ಪೂರ್ಣಿ ಹಾಗೂ ಅತ್ತೆ ತುಳಸಿ ಕಂಡರೆ ಉರಿಬೀಳುತ್ತಿದ್ದ, ಇಬ್ಬರಿಗೂ ಹಾನಿ ಉಂಟು ಮಾಡಲು ಅತ್ತೆಯ ಜೊತೆ ಸ್ಕೆಚ್​ ಹಾಕುತ್ತಿದ್ದ ದೀಪಿಕಾ ಕೂಡ ಬದಲಾಗಿದ್ದಾಳೆ. ಇನ್ನೇನು ಇದೆ ಬಾಕಿ? ಎಲ್ಲವೂ ಬಹುತೇಕ ಮುಗಿದೇ ಹೋಗಿದೆ. ಈಗೇನಿದ್ದರೂ ಶಾರ್ವರಿಯ ಕುತಂತ್ರ ಸಾಕ್ಷಿ ಸಹಿತ ಬಯಲಾಗಿ ಆಕೆ ಜೈಲುಪಾಲು ಆಗಬೇಕಿರುವುದು ಮಾತ್ರ ಉಳಿದಿದೆ. ಇದಾಗಲೇ ಕಾರು ಅಪಘಾತ ಮಾಡಿರುವುದು ಶಾರ್ವರಿ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳೂ ಸಿಕ್ಕಾಗಿದೆ.  

ಇದೀಗ ನಿಧಿಯ ಮದುವೆಯೂ ನಿರ್ವಿಘ್ನವಾಗಿ ನಡೆದುಹೋಗಿದೆ. ಹಾಗಿದ್ದರೆ ಇನ್ನೇನು ಸೀರಿಯಲ್​ ಮುಗಿದೇ ಹೋಗುವ ಎಲ್ಲಾ ಲಕ್ಷಣಗಳೂ ಗೋಚರವಾಗುತ್ತಿದೆ. ಮತ್ತೆ ಸೀರಿಯಲ್​ ಎಳೆಯುವಲ್ಲಿ ಇನ್ನೇನೂ ಅರ್ಥವಿಲ್ಲ ಎನ್ನುವುದು ವೀಕ್ಷಕರ ಅಭಿಮತ. ಆದರೆ ಇದರ ನಡುವೆಯೇ, ನಿಧಿಯನ್ನು ಮನೆ ತುಂಬಿಸಿಕೊಳ್ಳುವ ಸಮಯದಲ್ಲಿ ನಿರ್ದೇಶಕರು ಮಾಡಿರುವ ಎಡವಟ್ಟು ನೆಟ್ಟಿಗರ ಕಣ್ಣು ಕುಕ್ಕಿದೆ. ನಿಧಿಯನ್ನು ಮದುವೆ ಮಾಡಿಸಿಕೊಟ್ಟ ಬಳಿಕ ಆಕೆಯನ್ನು ಮನೆ ತುಂಬಿಸಿಕೊಳ್ಳುವಾಗ ಸೇರು ಒದೆಯುವ ದೃಶ್ಯವಿದೆ. ಅದರಲ್ಲಿ ನಿಧಿ ಸೇರನ್ನು ಒದೆಯುವಾಗ ಆಕೆಯ ಕಾಲಿನಲ್ಲಿ ಕಾಲುಂಗುರ ಇಲ್ಲ! ಸೀರಿಯಲ್​ಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುವ ನೆಟ್ಟಿಗರು ಇದರ ಬಗ್ಗೆ ಸಿಕ್ಕಾಪಟ್ಟೆ ಕಮೆಂಟ್​ ಮಾಡುತ್ತಿದ್ದಾರೆ. 

ಶ್ರೀರಸ್ತು ಶುಭಮಸ್ತುವಿಗೆ 700ರ ಸಂಭ್ರಮ: ಹುಟ್ಟುತ್ತಲೇ ಸೀರಿಯಲ್​ನಲ್ಲಿ ಮಿಂಚ್ತಿರೋ ಈ ಪುಟಾಣಿ ಯಾರ ಮಗು?

ಹೆಣ್ಣಿಗೆ ಮದುವೆ ಮಾಡುವಾಗ ತಾಳಿ ಜೋತೆ ಕಾಲುಂಗುರ ಕೂಡಾ ಒಂದು ಒಡವೆ. ಕಾಲು ಉಂಗುರ ತೋಡಿಸಿ ಮದುವೆ ಮಾಡುವುದು ಡೈರೆಕ್ಟರ್ ಕರ್ತವ್ಯ. ಇಷ್ಟು ಸಣ್ಣ ಸಣ್ಣ ವಿಷಯಗಳು ನಮ್ಮ ಸಂಸ್ಕೃತಿ ಯನ್ನು ಪ್ರತಿಬಿಂಬಿಸುತ್ತವೆ . ಇಂತಹ ಸಣ್ಣ ವಿಷಯಗಳು ಡೈರೆಕ್ಟರ್ ತಲೆಗೆ ಹೊಳೆಯುವುದೆ ಇಲ್ಲ ಎಂದು ಕೆ.ಎಲ್​.ಮಂಜುಳಾ ಎನ್ನುವವರು ಕಮೆಂಟ್​ ಮೂಲಕ ತಿಳಿಸಿದ್ದಾರೆ. ಅದಕ್ಕೆ ರಿಪ್ಲೈ ಕೂಡ ಬಂದಿದ್ದು ಅರ್ಜೆಂಟ್​ ಮದ್ವೆಯಲ್ವಾ? ಅದ್ಕೇ ಕಾಲುಂಗುರ ಮರೆತಿರಬೇಕು ಎಂದು ತಮಾಷೆಯನ್ನೂ ಮಾಡಲಾಗಿದೆ. ಚಿಕ್ಕಪುಟ್ಟ ವಿಷಯಗಳನ್ನೂ ನಿರ್ದೇಶಕರು ಎಷ್ಟರಮಟ್ಟಿಗೆ ಗಮನ ಹರಿಸಬೇಕು ಎನ್ನುವುದಕ್ಕೆ ಈ ಒಂದು ದೃಶ್ಯ ಸಾಕ್ಷಿಯಾಗಿದೆ. 

ಅದೇ ಇನ್ನೊಂದೆಡೆ,  ತುಳಸಿಯ ಮಗಳಾಗಿ ಬಂದಿರುವ ಮುದ್ದು ಕಂದನ ಮೇಲೆ ಎಲ್ಲರ ಕಣ್ಣುನೆಟ್ಟಿದೆ. ಇದರ ಜೊತೆಗಿನ ಆಟ-ತುಂಟಾದ ಕ್ಷಣಗಳನ್ನು ದೀಪಿಕಾ ಪಾತ್ರಧಾರಿ, ನಟಿ ದರ್ಶಿನಿ ಡೆಲ್ಟಾ ಶೇರ್​ ಮಾಡಿಕೊಂಡಿದ್ದಾರೆ. ಎಲ್ಲರೂ ಮಗುವನ್ನು ಹೇಗೆ ಆಡಿಸುತ್ತಾರೆ, ಆ ಮಗು ಶೂಟಿಂಗ್​ ಸೆಟ್​ನಲ್ಲಿ ಹೇಗೆ ಸೈಲಂಟ್​ ಆಗಿದೆ. ಎಲ್ಲರ ಬಳಿಯೂ ಎಷ್ಟೊಂದು ಸಲೀಸಾಗಿ ಹೊಂದಿಕೊಂಡಿದೆ ಎನ್ನುವುದನ್ನು ನೋಡಬಹುದಾಗಿದೆ. ಇದೀಗ ಈ ಮಗು ಯಾರು ಎಂಬ ಬಗ್ಗೆ ನೆಟ್ಟಿಗರು ತಡಕಾಡುತ್ತಿದ್ದಾರೆ. ಸಿಕ್ಕದ್ದೇ ಛಾನ್ಸ್ ಎಂದುಕೊಂಡೋ ಏನೋ, ಒಬ್ಬರು ಇದು ತಮ್ಮ ಪಕ್ಕದ ಮನೆಯ ಮಗು ಎಂದಿದ್ದಾರೆ. ಅದಕ್ಕೆ ಹಲವಾರು ಮಂದಿ ರಿಪ್ಲೈ ಮಾಡಿದ್ದು, ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆದರೆ ಅದಕ್ಕೆ ಯಾವುದಕ್ಕೂ ಅವರು ಉತ್ತರ ಕೊಟ್ಟಿಲ್ಲ. ಒಟ್ಟಿನಲ್ಲಿ ಹುಟ್ಟಿ ಕೆಲವೇ ದಿನಗಳಲ್ಲಿ ಮಗು ಸೀರಿಯಲ್​ನಲ್ಲಿ ಕಾಣಿಸಿಕೊಳ್ಳುವಂತಾಗಿದೆ. ಅದು ತುಂಬಾ ಹಠ ಮಾಡದ ಕಾರಣ ಅಲ್ಲಿಯೇ ಇರುವ ಯಾರದ್ದೋ ಮಗುವಿರಬೇಕು ಎಂದೇ ನೆಟ್ಟಿಗರು ಊಹಿಸುತ್ತಿದ್ದಾರೆ. ಅಷ್ಟಕ್ಕೂ ಮಗು ಯಾರದ್ದೇ ಆಗಿದ್ದರೂ ಅದರ ಅಮ್ಮನನ್ನೂ ಶೂಟಿಂಗ್​ ಸೆಟ್​ಗೆ ಕರೆದುಕೊಂಡು ಬರಲೇಬೇಕು. ಅವರನ್ನು ಒಮ್ಮೆಯಾದರೂ ತೋರಿಸಿ ಎನ್ನುವುದು ಅಭಿಮಾನಿಗಳ ಕೋರಿಕೆ. 

'ಯಜಮಾನ' ಸೀರಿಯಲ್​ ಮೊದಲರಾತ್ರಿ ಶೂಟಿಂಗ್​ನಲ್ಲಿ ತೆರೆಮರೆಯಲ್ಲಿ ನಡೆದದ್ದೇನು? ವಿಡಿಯೋ ವೈರಲ್​

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಕಿಚ್ಚ ಸುದೀಪ್‌ ಇದ್ರೂ ಕ್ಯಾರೆ ಎನ್ನಲಿಲ್ಲ. ಅಸಭ್ಯ ಎಂದು ಕಿತ್ತಾಡ್ಕೊಂಡ ರಜತ್‌, ಧ್ರುವಂತ್!
ಕಡಲು,ಸೂರ್ಯ ಹಾಗೂ ನನ್ನ ಕಿರಣಾ… ಪತಿ ಜೊತೆ ಶ್ವೇತಾ ಚೆಂಗಪ್ಪ ಸ್ಪೆಷಲ್ ಡೇಟ್