ಶ್ರೀರಸ್ತು ಶುಭಮಸ್ತು ಸೀರಿಯಲ್ನಲ್ಲಿ ಶಾರ್ವರಿ ಪಾತ್ರ ಮಾಡಿದ್ದ ನೇತ್ರಾ ಜಾಧವ್, ಇಲ್ಲಿಂದ ಮಿಸ್ ಆಗಿ ಬೇರೆ ಕಡೆ ಕಾಣಿಸಿಕೊಂಡಿದ್ದಾರೆ. ಫ್ಯಾನ್ಸ್ ಹೇಳ್ತಿರೋದೇನು?
ಶಾರ್ವರಿ ಎಂದಾಕ್ಷಣ ಸೀರಿಯಲ್ ಪ್ರೀಕ್ಷಕರ ಗಮನ ಸೆಳೆಯುತ್ತಿದ್ದವರು ಶ್ರೀರಸ್ತು ಶುಭಮಸ್ತುವಿನ ನೇತ್ರಾ ಜಾಧವ್. ಇವರ ಪಾತ್ರವನ್ನು ಅಭಿಮಾನಿಗಳು ಸಕತ್ ಮೆಚ್ಚಿಕೊಂಡಿದ್ದರು. ತಮ್ಮ ಕಣ್ಣುಗಳಿಂದಲೇ ಅಭಿಯನ ಮಾಡುವ ಮುದ್ದು ಮೊಗದ ಸುಂದರಿ ಶಾರ್ವರಿ ಈಗ ಈ ಸೀರಿಯಲ್ನಿಂದ ಹೊರಕ್ಕೆ ಬಂದು ಸೀರಿಯಲ್ ಪ್ರೇಮಿಗಳಿಗೆ ಶಾಕ್ ನೀಡಿದ್ದರು. ಶಾರ್ವರಿ ಪಾತ್ರಕ್ಕೆ ಹೊಸ ಎಂಟ್ರಿ ಆಗಿದೆ. ಆದರೆ ಒಂದು ಪಾತ್ರದಲ್ಲಿ ಒಬ್ಬರನ್ನೇ ಬಹು ತಿಂಗಳು, ವರ್ಷ ನೋಡುವ ಸೀರಿಯಲ್ ಪ್ರೇಮಿಗಳಿಗೆ ಅದೇ ಪಾತ್ರಕ್ಕೆ ಹೊಸ ಮುಖವನ್ನು ಕಲ್ಪನೆ ಮಾಡಿಕೊಳ್ಳುವುದು ಬಹು ಕಷ್ಟ. ಅದರಲ್ಲಿಯೂ ಯಾರಿಗೂ ಡೌಟ್ ಬರದಂತೆ, ಒಳ್ಳೆಯವಳು ಎನಿಸಿಕೊಂಡು ಕುತಂತ್ರ ಬುದ್ಧಿಯ ಶಾರ್ವರಿ ಪಾತ್ರಕ್ಕೆ ನೇತ್ರಾ ಅವರು ನ್ಯಾಯ ಒದಗಿಸಿಕೊಟ್ಟಿದ್ದರು. ಹೆಸರಿಗೆ ತಕ್ಕಂತೆಯೇ ಕಣ್ಣಿನಲ್ಲಿಯೇ ಅಭಿನಯ ಮಾಡುವಲ್ಲಿ ಇವರದ್ದು ಎತ್ತಿದ ಕೈ. ಅದಕ್ಕಾಗಿಯೇ ಇವರು ಸೀರಿಯಲ್ನಿಂದ ನಿರ್ಗಮಿಸಿರುವುದು ಬಹಳ ಮಂದಿಗೆ ಬೇಸರ ತಂದಿದೆ. ಮತ್ತೊಮ್ಮೆ ಅವರನ್ನು ವಾಪಸ್ ಕರೆದುಕೊಂಡು ಬರುವಂತೆಯೂ ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಕೂಡ ಹಾಕುತ್ತಿದ್ದರು.
ನೇತ್ರಾ ಅವರು ಸೀರಿಯಲ್ ಬಿಟ್ಟದ್ದು ಯಾಕೆ ಎಂದು ಗುಟ್ಟಾಗಿಯೇ ಉಳಿದಿದೆ. ಆದರೆ ಅವರು ಇನ್ನೊಂದು ಸೀರಿಯಲ್ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಆದರೆ ಆ ಸೀರಿಯಲ್ ಕನ್ನಡದ್ದು ಅಲ್ಲ. ಬದಲಿಗೆ ತೆಲಗು ಸೀರಿಯಲ್. ಮಗುವಾ ಓ ಮಗುವಾ. ಇದರಲ್ಲಿ ಅವರು ಫುಲ್ ಆ್ಯಕ್ಷನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಖುದ್ದು ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಕನ್ನಡಿಗರು ಯಾಕೋ ತುಂಬಾ ಬೇಜಾರು ಆಗಿದ್ದಾರೆ. ಇಲ್ಲಿ ನಿಮ್ಮನ್ನುನಾವು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ. ನೀವು ನೋಡಿದ್ರೆ ತೆಲಗುಗೆ ಹೋಗಿ ಕನ್ನಡದ ಅಭಿಮಾನಿಗಳಿಗೆ ಮೋಸ ಮಾಡಿಬಿಟ್ರಿ ಎನ್ನುತ್ತಿದ್ದಾರೆ.
ಸತ್ಯ ಸೀರಿಯಲ್ ದಿವ್ಯಾ-ಬಾಲಾ ದಂಪತಿ ಸಕತ್ ರೀಲ್ಸ್: ನಖರಾ ಬಿಟ್ಟು ಗಂಡನ ಜೊತೆ ಬಾಳು ಎಂದ ಫ್ಯಾನ್ಸ್
ಅಷ್ಟಕ್ಕೂ ಶ್ರೀರಸ್ತು ಶುಭಮಸ್ತು ಸೀರಿಯಲ್ನಲ್ಲಿ ಶಾರ್ವರಿಯ ಪಾತ್ರಕ್ಕೆ ಸ್ವಪ್ನಾ ದೀಕ್ಷಿತ್ ಅವರು ಬಂದಿದ್ದಾರೆ. ಅವರು ಕೂಡ ಅದ್ಭುತ ಕಲಾವಿದೆಯೇ. ಆದರೆ ಸೀರಿಯಲ್ನ ಬಹಳಷ್ಟು ವೀಕ್ಷಕರಿಗೆ ನೇತ್ರಾ ಅವರೇ ಬೇಕಂತೆ. ಈ ಸೀರಿಯಲ್ ಪ್ರೊಮೋ ಹಾಕಿದಾಗಲೆಲ್ಲವೂ ನೇತ್ರಾ ಅವರನ್ನು ಮಿಸ್ ಮಾಡಿಕೊಳ್ಳುವ ಬಗ್ಗೆ ಕಮೆಂಟಿಗರು ಹೇಳುತ್ತಲೇ ಇರುತ್ತಾರೆ. ನೇತ್ರಾ ಅವರು, ಈ ಹಿಂದೆ ಸುಧಾರಾಣಿ ಅವರ ಜೊತೆ ರಥಸಪ್ತಮಿ ಧಾರಾವಾಹಿಯಲ್ಲಿ ಅವರ ತಂಗಿಯ ಪಾತ್ರದಲ್ಲಿ ನಟಿಸಿದ್ದರು. ನಂತರ ಅವರದ್ದೇ ಜೊತೆ ನೆಗಟಿವ್ ರೋಲ್ನಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಈ ಹಿಂದೆ ಉದಯ ಟಿವಿಯಲ್ಲಿ ಆಕೃತಿ ಎನ್ನುವ ಧಾರವಾಹಿಯಲ್ಲಿ ನಟಿಸುತ್ತಿದ್ದರು. ನಂತರ ಸುಂದರಿ ಧಾರವಾಹಿಯಲ್ಲಿಯೂ ಬಣ್ಣ ಹಚ್ಚಿದ್ದರು. ಅಂದಹಾಗೆ ಶಾರ್ವರಿ ಅವರ ಮಕ್ಕಳು ಇನ್ನೂ ಚಿಕ್ಕವರು. ಶ್ರೀರಸ್ತು ಶುಭಮಸ್ತು ಸೀರಿಯಲ್ನಲ್ಲಿ ಮಕ್ಕಳಿಗೆ ಮದುವೆಯಾಗಿದ್ದರೆ ರಿಯಲ್ ಲೈಫ್ನ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಆಗಾಗ್ಗೆ ಮಾಡರ್ನ್ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ.
ಶ್ರೀರಸ್ತು ಶುಭಮಸ್ತು ಸೀರಿಯಲ್ನ 400ನೇ ಎಪಿಸೋಡ್ ಸಂಭ್ರಮದ ವಿಡಿಯೋ ಈಚೆಗೆ ವೈರಲ್ ಆಗಿತ್ತು. ಅದರಲ್ಲಿ ಸೀರಿಯಲ್ನ ಎಲ್ಲಾ ನಟಿ-ನಟರು ಇದ್ದರೂ ಸೀರಿಯಲ್ ಪ್ರೇಮಿಗಳು ನೇತ್ರಾ ಅವರನ್ನು ಮಿಸ್ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಬಹುಶಃ ಈ ಶೂಟಿಂಗ್ ನೇತ್ರಾ ಅವರು ಸೀರಿಯಲ್ನಲ್ಲಿ ಇದ್ದ ಸಂದರ್ಭದಲ್ಲಿಯೇ ಮಾಡಿದ್ದು ಎಂದು ತೋರುತ್ತಿದೆ. ಅದಕ್ಕಾಗಿ 400ರ ಸಂಭ್ರಮದಲ್ಲಿ ನೇತ್ರಾ ಕಾಣಿಸಿಕೊಂಡಿದ್ದು ಸ್ವಪ್ನಾ ಕಾಣಿಸುತ್ತಿಲ್ಲ. ಆದರೆ ನೇತ್ರಾ ಅವರೇ ತಮಗೆ ಬೇಕು ಎಂದು ಅಭಿಮಾನಿಗಳು ಪಟ್ಟುಹಿಡಿಯುತ್ತಿದ್ದಾರೆ.
ಹೆಣ್ಣು ಮಗು ಬೇಕೋ ಗಂಡೊ ಎಂದು ಕೇಳಿದ ಪ್ರಶ್ನೆಗೆ ಲಡ್ಡು-ಪೇಡಾ ಉದಾಹರಣೆ ಕೊಟ್ಟ ರಣವೀರ್ ಸಿಂಗ್!