ಸಾಕ್ಷಾತ್​ ಲಕ್ಷ್ಮಿ ಲುಕ್​ನಲ್ಲಿ ಹಳೆಯ ಶಾರ್ವರಿ: ಯಾಕ್​ ಮೇಡಂ ಮೋಸ ಮಾಡಿದ್ರಿ ಕೇಳ್ತಿದ್ದಾರೆ ಫ್ಯಾನ್ಸ್​

By Suchethana DFirst Published Aug 15, 2024, 2:25 PM IST
Highlights


ಶ್ರೀರಸ್ತು ಶುಭಮಸ್ತು ಸೀರಿಯಲ್​ನಲ್ಲಿ ಶಾರ್ವರಿ ಪಾತ್ರ ಮಾಡಿದ್ದ ನೇತ್ರಾ ಜಾಧವ್​, ಇಲ್ಲಿಂದ ಮಿಸ್​ ಆಗಿ ಮಹಾಲಕ್ಷ್ಮಿಯಾಗಿ ಕಾಣಿಸಿಕೊಂಡಿದ್ದಾರೆ. ಫ್ಯಾನ್ಸ್​ ಹೇಳ್ತಿರೋದೇನು? 
 

ನಾಳೆ ವರಮಹಾಲಕ್ಷ್ಮಿ ಹಬ್ಬ. ಎಲ್ಲೆಲ್ಲೂ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕೆಲವು ಮಹಿಳೆಯರಂತೂ ಹಬ್ಬದ ಬಣ್ಣಬಣ್ಣದ ಉಡುಗೆ ತೊಟ್ಟು, ಚಿನ್ನಾಭರಣಗಳಿಂದ ಮಿಂಚಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಕಿರುತೆರೆ ನಟಿ ನೇತ್ರಾ ಜಾಧವ್​ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎನ್ನುವ ಮೂಲಕ ರೇಷ್ಮೆ ಸೀರೆಯನ್ನುಟ್ಟು ಸಾಕ್ಷಾತ್​ ಲಕ್ಷ್ಮಿಯ ರೀತಿಯಲ್ಲಿ ವಿಡಿಯೋಶೂಟ್​ ಮಾಡಿಸಿಕೊಂಡಿದ್ದಾರೆ. ಅಷ್ಟಕ್ಕೂ ನೇತ್ರಾ ಜಾಧವ್​ ಎಂದರೆ ಬಹುತೇಕ ಮಂದಿಗೆ ತಿಳಿಯಲ್ಲಿಕ್ಕಿಲ್ಲ. ಆದರೆ ಶಾರ್ವರಿ ಎಂದರೆ ಸುಲಭದಲ್ಲಿ ಸೀರಿಯಲ್​ ಪ್ರಿಯರಿಗೆ ತಿಳಿಯುತ್ತದೆ. ಆದರೆ ಈಕೆ ಈ ಶಾರ್ವರಿಯಲ್ಲ, ಬದಲಿಗೆ ಹಳೆಯ ಶಾರ್ವರಿ!  ಹೌದು. ಶ್ರೀರಸ್ತು ಶುಭಮಸ್ತುವಿನ ಹಳೆಯ ಶಾರ್ವರಿಯೇ ನೇತ್ರಾ ಜಾಧವ್​.  ತಮ್ಮ ಕಣ್ಣುಗಳಿಂದಲೇ ಅಭಿಯನ ಮಾಡುವ ಮುದ್ದು ಮೊಗದ ಸುಂದರಿ ಶಾರ್ವರಿ ಈಗ ಈ ಸೀರಿಯಲ್​ನಿಂದ ಹೊರಕ್ಕೆ ಬಂದು ಸೀರಿಯಲ್​ ಪ್ರೇಮಿಗಳಿಗೆ ಶಾಕ್​ ನೀಡಿದ್ದರು.  ಹೊಸ ಶಾರ್ವರಿ ಎಂಟ್ರಿ ಕೊಟ್ಟು ಕೆಲ ತಿಂಗಳುಗಳೇ ಕಳೆದಿದ್ದರೂ, ಈ ಹಳೆಯ ಶಾರ್ವರಿಯನ್ನು ಮಾತ್ರ ಸೀರಿಯಲ್​ ಪ್ರೇಮಿಗಳು ಸಕತ್​  ಮಿಸ್​ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದಕ್ಕೆ ಅವರ ಕಮೆಂಟ್ಸ್​ ಸಾಕ್ಷಿಯಾಗಿದೆ. 


 ಒಂದು ಪಾತ್ರದಲ್ಲಿ ಒಬ್ಬರನ್ನೇ ಬಹು ತಿಂಗಳು, ವರ್ಷ ನೋಡುವ ಸೀರಿಯಲ್​ ಪ್ರೇಮಿಗಳಿಗೆ ಅದೇ ಪಾತ್ರಕ್ಕೆ ಹೊಸ ಮುಖವನ್ನು ಕಲ್ಪನೆ ಮಾಡಿಕೊಳ್ಳುವುದು ಬಹು ಕಷ್ಟ. ಅದರಲ್ಲಿಯೂ ಯಾರಿಗೂ ಡೌಟ್​ ಬರದಂತೆ, ಒಳ್ಳೆಯವಳು ಎನಿಸಿಕೊಂಡು ಕುತಂತ್ರ ಬುದ್ಧಿಯ ಶಾರ್ವರಿ ಪಾತ್ರಕ್ಕೆ ನೇತ್ರಾ ಅವರು ನ್ಯಾಯ ಒದಗಿಸಿಕೊಟ್ಟಿದ್ದರು. ಹೆಸರಿಗೆ ತಕ್ಕಂತೆಯೇ ಕಣ್ಣಿನಲ್ಲಿಯೇ ಅಭಿನಯ ಮಾಡುವಲ್ಲಿ ಇವರದ್ದು ಎತ್ತಿದ ಕೈ. ಅದಕ್ಕಾಗಿಯೇ ಇವರು ಸೀರಿಯಲ್​ನಿಂದ ನಿರ್ಗಮಿಸಿರುವುದು ಬಹಳ ಮಂದಿಗೆ ಬೇಸರ ತಂದಿದೆ. ಮತ್ತೊಮ್ಮೆ ಅವರನ್ನು ವಾಪಸ್​  ಕರೆದುಕೊಂಡು ಬರುವಂತೆಯೂ ಹಲವರು ಸೋಷಿಯಲ್​ ಮೀಡಿಯಾದಲ್ಲಿ ಕಮೆಂಟ್​  ಕೂಡ ಹಾಕುತ್ತಿದ್ದರು. ಈಗಲೂ ಅದು ನಿಂತಿಲ್ಲ. ನೇತ್ರಾ ಅವರು ಸೀರಿಯಲ್​ ಬಿಟ್ಟದ್ದು ಯಾಕೆ ಎಂದು ಗುಟ್ಟಾಗಿಯೇ ಉಳಿದಿದೆ.  ಆದರೆ ಅವರು ಇನ್ನೊಂದು ಸೀರಿಯಲ್​ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಆದರೆ ಆ ಸೀರಿಯಲ್​  ಕನ್ನಡದ್ದು ಅಲ್ಲ. ಬದಲಿಗೆ ತೆಲಗು ಸೀರಿಯಲ್​. ಮಗುವಾ ಓ ಮಗುವಾ. ಇದರಲ್ಲಿ ಅವರು ಫುಲ್​ ಆ್ಯಕ್ಷನ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಖುದ್ದು ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಖಾತೆಯಲ್ಲಿ ಶೇರ್​  ಮಾಡಿಕೊಂಡಿದ್ದರು.  ಆಗಲೂ ಕನ್ನಡ ಬಿಟ್ಟ ಬಗ್ಗೆ ಅವರಿಗೆ ಪ್ರಶ್ನೆಗಳ ಸುರಿಮಳೆಯೇ ಆಗಿತ್ತು. 

Latest Videos

ಪಾರ್ವತಮ್ಮನವ್ರು ಹಾಗೆ ಯಾಕೆ ಮಾಡಿದ್ರಂತ ಕೊನೆಗೂ ಗೊತ್ತಾಗ್ಲೇ ಇಲ್ಲ! ಸುಧಾರಾಣಿ ಹೇಳಿದ್ದೇನು?

ಅಷ್ಟಕ್ಕೂ ಶ್ರೀರಸ್ತು ಶುಭಮಸ್ತು ಸೀರಿಯಲ್​ನಲ್ಲಿ ಶಾರ್ವರಿಯ ಪಾತ್ರಕ್ಕೆ ಸ್ವಪ್ನಾ ದೀಕ್ಷಿತ್ ಅವರು ಬಂದಿದ್ದಾರೆ. ಅವರು ಕೂಡ ಅದ್ಭುತ ಕಲಾವಿದೆಯೇ. ಆದರೆ ಸೀರಿಯಲ್​ನ ಬಹಳಷ್ಟು ವೀಕ್ಷಕರಿಗೆ ನೇತ್ರಾ ಅವರೇ ಬೇಕಂತೆ. ಈ ಸೀರಿಯಲ್​ ಪ್ರೊಮೋ ಹಾಕಿದಾಗಲೆಲ್ಲವೂ ನೇತ್ರಾ ಅವರನ್ನು ಮಿಸ್​ ಮಾಡಿಕೊಳ್ಳುವ ಬಗ್ಗೆ ಕಮೆಂಟಿಗರು ಹೇಳುತ್ತಲೇ ಇರುತ್ತಾರೆ.   ನೇತ್ರಾ ಅವರು, ಈ ಹಿಂದೆ  ಸುಧಾರಾಣಿ ಅವರ ಜೊತೆ  ರಥಸಪ್ತಮಿ ಧಾರಾವಾಹಿಯಲ್ಲಿ ಅವರ ತಂಗಿಯ ಪಾತ್ರದಲ್ಲಿ ನಟಿಸಿದ್ದರು. ನಂತರ ಅವರದ್ದೇ ಜೊತೆ  ನೆಗಟಿವ್ ರೋಲ್​ನಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು.  ಈ ಹಿಂದೆ ಉದಯ ಟಿವಿಯಲ್ಲಿ ಆಕೃತಿ ಎನ್ನುವ ಧಾರವಾಹಿಯಲ್ಲಿ ನಟಿಸುತ್ತಿದ್ದರು. ನಂತರ  ಸುಂದರಿ ಧಾರವಾಹಿಯಲ್ಲಿಯೂ ಬಣ್ಣ ಹಚ್ಚಿದ್ದರು.  ಅಂದಹಾಗೆ ಶಾರ್ವರಿ ಅವರ ಮಕ್ಕಳು ಇನ್ನೂ ಚಿಕ್ಕವರು. ಶ್ರೀರಸ್ತು ಶುಭಮಸ್ತು ಸೀರಿಯಲ್​ನಲ್ಲಿ  ಮಕ್ಕಳಿಗೆ ಮದುವೆಯಾಗಿದ್ದರೆ  ರಿಯಲ್​ ಲೈಫ್​ನ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಆಗಾಗ್ಗೆ ಮಾಡರ್ನ್​ ಫೋಟೋಶೂಟ್​ ಮಾಡಿಸಿಕೊಂಡು ಅದನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಿರುತ್ತಾರೆ.  

 ಶ್ರೀರಸ್ತು ಶುಭಮಸ್ತು ಸೀರಿಯಲ್​ನ 400ನೇ ಎಪಿಸೋಡ್​  ಸಂಭ್ರಮದ ವಿಡಿಯೋ ಈಚೆಗೆ ವೈರಲ್ ಆಗಿತ್ತು. ಅದರಲ್ಲಿ ಸೀರಿಯಲ್​ನ ಎಲ್ಲಾ ನಟಿ-ನಟರು ಇದ್ದರೂ ಸೀರಿಯಲ್​ ಪ್ರೇಮಿಗಳು ನೇತ್ರಾ ಅವರನ್ನು ಮಿಸ್​ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಬಹುಶಃ ಈ ಶೂಟಿಂಗ್​ ನೇತ್ರಾ ಅವರು ಸೀರಿಯಲ್​ನಲ್ಲಿ ಇದ್ದ ಸಂದರ್ಭದಲ್ಲಿಯೇ ಮಾಡಿದ್ದು ಎಂದು ತೋರುತ್ತಿದೆ. ಅದಕ್ಕಾಗಿ 400ರ ಸಂಭ್ರಮದಲ್ಲಿ ನೇತ್ರಾ ಕಾಣಿಸಿಕೊಂಡಿದ್ದು ಸ್ವಪ್ನಾ ಕಾಣಿಸುತ್ತಿಲ್ಲ. ಆದರೆ ನೇತ್ರಾ ಅವರೇ ತಮಗೆ ಬೇಕು ಎಂದು ಅಭಿಮಾನಿಗಳು ಪಟ್ಟುಹಿಡಿಯುತ್ತಿದ್ದಾರೆ. ಈಗಲೂ ಅವರೇ ಬೇಕು ಎನ್ನುತ್ತಿದ್ದಾರೆ ಫ್ಯಾನ್ಸ್​. 

ಪ್ರಕಾಶ್​ ರಾಜ್​ ಜೊತೆ ಕೆಲಸ ಮಾಡುವ ಅನುಭವ ಹೇಗಿರತ್ತೆ? ಪ್ರಿಯಾಮಣಿ ಓಪನ್​ ಮಾತಿದು...

click me!