ಬಿಗ್​ಬಾಸ್​ನವ್ರು ಕರೆದಾಗ ಕದ್ದು ಮುಚ್ಚಿ ಶೂಟಿಂಗ್​ ಮಾಡಿ ಬರ್ತೇನೆ ಎಂದ ರಾಖಿ ಸಾವಂತ್​! ದುಬೈನಿಂದ ಸಂದರ್ಶನ

By Suchethana DFirst Published Oct 6, 2024, 10:28 PM IST
Highlights

ಕೋರ್ಟ್​ಗೆ ಶರಣಾಗತಿ ಆಗುವುದನ್ನು ತಪ್ಪಿಸಲು ದುಬೈನಿಂದ ಭಾರತಕ್ಕೆ ಬಂದು ಕದ್ದುಮುಚ್ಚಿ ಬಿಗ್​ಬಾಸ್​ ಶೂಟಿಂಗ್​ ಮಾಡ್ತಾರಂತೆ ರಾಖಿ ಸಾವಂತ್​! ನಟಿ ಹೇಳಿದ್ದೇನು? 
 

ಬಾಲಿವುಡ್​ ಡ್ರಾಮಾ ಕ್ವೀನ್​ ರಾಖಿ ಸಾವಂತ್​ ಸದ್ಯ ದುಬೈಗೆ ಹಾರಿದ್ದಾರೆ ಎನ್ನಲಾಗಿದೆ. ಭಾರತದಲ್ಲಿ ಕಾಣಿಸಿಕೊಂಡರೆ ಅವರಿಗೆ ಬಂಧಿಸೋ ಛಾನ್ಸ್ ಇದೆ. ಏಕೆಂದರೆ ಹೈಕೋರ್ಟ್​ ಆದೇಶದ ಪ್ರಕಾರ ಅವರು ಸರೆಂಡರ್​ ಆಗಬೇಕಿದೆ. ಏಕೆಂದ್ರೆ ಅವರು ಬಂಧನದ ಭೀತಿ  ಎದುರಿಸುತ್ತಿದ್ದಾರೆ.  ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.  ಪತಿ ಆದಿಲ್​ ಖಾನ್​ ದುರ್ರಾನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಂದಿದೆ.  ಆದಿಲ್ ಅವರ  ಖಾಸಗಿ ವಿಡಿಯೋವನ್ನು ರಾಖಿ ವೈರಲ್ ಮಾಡಿದ್ದರು. ಈ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ರಾಖಿ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹೀಗಾಗಿ ಯಾವ ಕ್ಷಣದಲ್ಲಾದರೂ ರಾಖಿ ಬಂಧನಕ್ಕೆ ಒಳಗಾಗುತ್ತಾರಾ ಎಂಬ ಚರ್ಚೆಗಳು ಎದ್ದಿವೆ. ರಾಖಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಅಷ್ಟಕ್ಕೂ, ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಜೋಡಿಯ ವಿಷಯ ಕಳೆದೊಂದು ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದೆ. ಒಂದಾದ ಮೇಲೊಂದರಂತೆ ನಾಟಕೀಯ ಬೆಳವಣಿಗೆಗಳು ಈ ಜೋಡಿಯ ನಡುವೆ ನಡೆಯುತ್ತಲೇ ಇದೆ.  ಡ್ರಾಮಾ ಕ್ವೀನ್​ ಎಂದೇ ಫೇಮಸ್​ ಆಗಿರುವ ನಟಿ ರಾಖಿ ಸಾವಂತ್​ (Rakhi Sawant) ಮತ್ತು ಆದಿಲ್​ ಖಾನ್​ ದುರ್ರಾನಿ ಅವರ  ಮದುವೆಯ ಕಥೆ ಸಿನಿಮಾಕ್ಕಿಂತಲೂ ಕುತೂಹಲವಾಗಿದೆ. ಮೈಸೂರಿನ ಯುವಕ ಆದಿಲ್​ ಖಾನ್​ ಮದುವೆಯನ್ನು ನಿರಾಕರಿಸಿದ್ದು, ರಾಖಿ ರಂಪಾಟ ಮಾಡಿದ್ದು, ಕೊನೆಗೂ ಆದಿಲ್​  ಮದುವೆಯನ್ನು ಒಪ್ಪಿಕೊಂಡಿದ್ದು ಎಲ್ಲವೂ ಯಾವ ಸಿನಿಮಾ ಕಥೆಗಿಂತಲೂ ಭಿನ್ನವಾಗಿರಲಿಲ್ಲ. ಎಲ್ಲವೂ ಸುಖಾಂತ್ಯಗೊಂಡಿತು ಎನ್ನುವಾಗಲೇ  ಆದಿಲ್ ತಮಗೆ ಮೋಸ ಮಾಡುತ್ತಿದ್ದಾರೆ, ಹಲ್ಲೆ ಮಾಡಿದ್ದಾರೆ, ಇನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ,  ಆದಿಲ್‌ಗಾಗಿ   ಇಸ್ಲಾಂಗೆ ಮತಾಂತರ ಮಾಡಿಕೊಂಡಿರುವೆ. ನಾನು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡು ಆದಿಲ್‌ನ ಮದುವೆ ಆಗಿದ್ದೇನೆ ಎಂದೆಲ್ಲಾ ಆರೋಪಿಸಿದ್ದ ರಾಖಿ ಕೊನೆಗೆ ದೂರು ಕೊಟ್ಟರು. ಇದರಿಂದ ಆದಿಲ್​ (Adil Khan Durrani) ವಿರುದ್ಧ ಎಫ್​ಐಆರ್​ ದಾಖಲಾಗಿದ್ದು  ಅವರು ಜೈಲಿಗೆ ಹೋದದ್ದು, ನಂತರ ಅವರು ಬಿಡುಗಡೆಗೊಂಡ ಬಳಿಕ ಪರಸ್ಪರ ದೋಷಾರೋಪ ಮಾಡುತ್ತಾ ಪತ್ರಿಕಾಗೋಷ್ಠಿ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ.

Latest Videos

ಚೈತ್ರಾ ಕುಂದಾಪುರಗೆ ಮಾತು ಕಲಿಸಿದ್ದೇ ರಂಜಿತ್​ ಅಂತೆ: ಚೈತ್ರಾರ ಮಾತು ಕೇಳಿ ಖುದ್ದು ಸುದೀಪ್​ ಶಾಕ್​!

ಇದಾದ ಬಳಿಕ ಸೋಷಿಯಲ್​ ಮೀಡಿಯಾದಲ್ಲಿ ದಿನಕ್ಕೊಂದು ವೇಷದಲ್ಲಿ ಕಾಣಿಸಿಕೊಳ್ತಿದ್ದ ರಾಖಿ ಇದ್ದಕ್ಕಿದ್ದಂತೆಯೇ ಕಣ್ಮರೆಯಾದರು. ಇದೀಗ ಮತ್ತೆ ಪ್ರತ್ಯಕ್ಷ ಆಗಿದ್ದಾರೆ. ಎಲ್ಲಿ ಅಂತೀರಾ? ಬಿಗ್​ಬಾಸ್​ ಮನೆಯಲ್ಲಿ! ಹೌದು. ಬಿಗ್​ಬಾಸ್​ ಮನೆಯಲ್ಲಿ ರಾಖಿ ಸಾವಂತ್​ ಗ್ರ್ಯಾಂಡ್​ ಎಂಟ್ರಿ ಆಗಿದೆ. ಈ ಹಿಂದೆ ಹಿಂದಿ ಬಿಗ್​ಬಾಸ್​ನ ಓಟಿಟಿಯಲ್ಲಿಯೂ ಈಕೆ ಭಾಗವಹಿಸಿದ್ದರು. ಈಗ ಮರಾಠಿಯ ದೊಡ್ಮನೆಗೆ ಈಕೆ ನಾಟಕ ಮಾಡುತ್ತ ಎಂಟ್ರಿ ಕೊಡುತ್ತಿದ್ದಂತೆಯೇ ಬಿಗ್​ಬಾಸ್​ ಮನೆಯ ಮೂಡೇ ಚೇಂಜ್​ ಆಗಿ ಹೋಗಿದೆ. ಅಂದಹಾಗೆ ಇತ್ತ ಬಿಗ್​ಬಾಸ್​ ಕನ್ನಡದ 11ನೇ ಸೀಸನ್​ ಇಂದಿನಿಂದ ಶುರುವಾಗಲಿದ್ದರೆ, ಅತ್ತ ಮರಾಠಿ ಬಿಗ್​ಬಾಸ್​ ಕೂಡ ಶುರುವಾಗಿದ್ದು, ರಾಖಿ ಸಾವಂತ್​ ಮರಾಠಿಯ ಬಿಗ್​ಬಾಸ್​ಗೆ ಗ್ರ್ಯಾಂಡ್​ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಎಂದಿನ ನಾಟಕೀಯ ಶೈಲಿಯಲ್ಲಿ, ಎಲ್ಲರ ಕಾಲೆಳೆದಿದ್ದಾರೆ. ತಮ್ಮನ್ನು ಮೀರಿಸುವವರು ಯಾರೂ ಇಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಆದರೆ ಈಕೆಯ ಎಂಟ್ರಿ ಆಗುತ್ತಿದ್ದಂತೆಯೇ ಅಲ್ಲಿರುವ ಕೆಲವು ಸ್ಪರ್ಧಿಗಳಿಗೆ ಅದರಲ್ಲಿಯೂ ಮುಖ್ಯವಾಗಿ, ಹಿಂದಿ, ತೆಲಗು, ತಮಿಳು ನಟಿ ನಿಕ್ಕಿ ತಂಬೋಲಿ ಅವರಿಗೆ ಕಿರಿಕಿರಿ ಆಗಿದೆ. ರಾಖಿಯ ಮಾತು ಅವರಿಗೆ ಅಸಹ್ಯ ಮೂಡಿಸಿದೆ ಎನ್ನುವುದು ವಿಡಿಯೋ ನೋಡಿದರೆ ತಿಳಿಯುತ್ತದೆ.

ಇದೀಗ ದುಬೈನಿಂದಲೇ ಸಂದರ್ಶನ ನೀಡಿರುವ ರಾಖಿ ಸಾವಂತ್​, ನಾನು ಏನೂ ತಪ್ಪು ಮಾಡಲಿಲ್ಲ. ಮಾಡದ ತಪ್ಪಿಗೆ ಹೈಕೋರ್ಟ್​ ಸರೆಂಡರ್​ ಆಗುವಂತೆ ಹೇಳುತ್ತಿದೆ. ನಾನು ನಿರಪರಾಧಿ ಎಂದು ತಿಳಿಸುವ ಎಲ್ಲಾ ಸಾಕ್ಷ್ಯಾಧಾರಗಳೂ ನನ್ನ ಬಳಿ ಇವೆ. ಆದರೂ ಯಾಕೋ ನನ್ನನ್ನು ಸಿಲುಕಿಸುತ್ತಿದ್ದಾರೆ. ನಾನು ಮರಾಠಿ ಬಿಗ್​ಬಾಸ್​ಗೆ ಕದ್ದುಮುಚ್ಚಿ ಹೋಗಿ ಶೂಟಿಂಗ್​ ಮಾಡಿ ಮತ್ತೆ ವಾಪಸ್​ ಬರ್ತೇನೆ. ನನ್ನನ್ನು ವಿನಾಕಾರಣ ನೋಯಿಸಲಾಗುತ್ತಿದೆ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ. ಇದರ ವಿಡಿಯೋ ವೈರಲ್​ ಆಗುತ್ತಲೇ ಬಿಗ್​ಬಾಸ್​ಗೆ ಹೋಗುವ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಕೋರ್ಟ್​ ಸರೆಂಡರ್​ ಆಗು ಎಂದು ಆದೇಶ ಹೊರಡಿಸುವಾಗ ಅದನ್ನು ಮೀರಿ ಈ ರೀತಿಮಾಡುವುದು ಸರಿಯೇ ಎನ್ನುವ ಪ್ರಶ್ನೆ ಎದುರಾಗಿದೆ. 

ಬಿಗ್​ಬಾಸ್​​ ಸ್ಪರ್ಧಿಯಾಗಿ ಕತ್ತೆ? ಎರಡು ಕಾಲಿಂದಲ್ಲ ಸ್ವಾಮಿ, ನಿಜವಾಗ್ಲೂ ನಾಲ್ಕು ಕಾಲಿಂದೇ...ವಿಡಿಯೋ ರಿಲೀಸ್​!

click me!