ಅಶೋಕಂಗೆ ಕರಿಮಣಿ ಮಾಲೀಕ ನೀನಲ್ಲ ಎನ್ನೋದಾ ಪ್ರಿಯಾ: ಹೀಗೆಲ್ಲಾ ಹೇಳ್ಬೇಡಿ ಪ್ಲೀಸ್​ ಅಂತಿದ್ದಾರೆ ಫ್ಯಾನ್ಸ್​

Published : Apr 29, 2024, 06:21 PM ISTUpdated : Apr 29, 2024, 06:24 PM IST
ಅಶೋಕಂಗೆ ಕರಿಮಣಿ ಮಾಲೀಕ ನೀನಲ್ಲ ಎನ್ನೋದಾ ಪ್ರಿಯಾ: ಹೀಗೆಲ್ಲಾ ಹೇಳ್ಬೇಡಿ ಪ್ಲೀಸ್​ ಅಂತಿದ್ದಾರೆ ಫ್ಯಾನ್ಸ್​

ಸಾರಾಂಶ

ಕರಿಮಣಿ ಮಾಲಿಕ ನೀನಲ್ಲ ಹಾಡಿಗೆ ರೀಲ್ಸ್​ ಮಾಡಿದ ಪ್ರಿಯಾ, ಅಶೋಕ್​. ಸೀತಾರಾಮ ಸೀರಿಯಲ್​ ಪ್ರಿಯರು ಏನು ಹೇಳಿದ್ರು ನೋಡಿ...  

ಕಳೆದ 3-4 ತಿಂಗಳುಗಳಿಂದ  ಸೋಷಿಯಲ್​ ಮೀಡಿಯಾದಲ್ಲಿ ಕರಿಮಣಿ ಮಾಲೀಕನದ್ದೇ ಹವಾ. ಏನಿಲ್ಲ... ಏನಿಲ್ಲ... ಕರಿಮಣಿ ಮಾಲಿಕ ನೀನಲ್ಲ ಎಂದು ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ರೀಲ್ಸ್​ ಮಾಡುತ್ತಿದ್ದಾರೆ. ಉಪೇಂದ್ರ ನಾಯಕನಾಗಿ ನಟಿಸಿದ್ದ 'ಉಪೇಂದ್ರ' ಸಿನಿಮಾದ ಹಾಡುಗಳು ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದವು. ಪ್ರೇಮ, ರವೀನಾ ಟಂಡನ್ ಹಾಗೂ ದಾಮಿನಿ ಈ ಸಿನಿಮಾದಲ್ಲಿ ನಾಯಕಿಯರಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಒಬ್ಬೊಬ್ಬ ನಾಯಕಿಗೆ ಒಂದೊಂದು ಹಾಡನ್ನು ಇಡಲಾಗಿತ್ತು. ಅದರಲ್ಲಿ ಉಪ್ಪಿ ಹಾಗೂ ಪ್ರೇಮಗೆ ಅಂತ ಕಂಪೋಸ್ ಮಾಡಿದ್ದ ಹಾಡೇ 'ಏನಿಲ್ಲ.. ಏನಿಲ್ಲ..'. ಆಗತಾನೇ 'ಎ' ಸಿನಿಮಾಗೆ ಭರ್ಜರಿ ಮ್ಯೂಸಿಕ್ ಕೊಟ್ಟು ಗೆದ್ದಿದ್ದ ಗುರುಕಿರಣ್ 'ಉಪೇಂದ್ರ'ಗೂ ಮಸ್ತ್ ಟ್ಯೂನ್ ಹಾಕಿದ್ದರು. ಇದೀಗ ಮತ್ತೆ 25 ವರ್ಷಗಳ ಬಳಿಕ ಹಲ್​ಚಲ್​ ಸೃಷ್ಟಿಸುತ್ತಿದೆ. 

ಇದಾಗಲೇ ಹಲವಾರು ನಟ-ನಟಿಯರೂ ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಇದೀಗ ಸೀತಾರಾಮ ಸೀರಿಯಲ್​ ಖ್ಯಾತಿಯ ಪ್ರಿಯಾ ಮತ್ತು ಅಶೋಕ್​ ಕೂಡ ರೀಲ್ಸ್​ ಮಾಡಿದ್ದಾರೆ. ಸೀತಾರಾಮ ಸೀರಿಯಲ್​ನಲ್ಲಿ ಈ ಜೋಡಿಯ ಅದ್ಧೂರಿ ಮದುವೆಯಾಗಿದೆ. ಅಸಲಿ ಮದುವೆಗೆ ಖರ್ಚು ಮಾಡುವಂತೆ ಭರ್ಜರಿ ಸೆಟ್​ ಹಾಕಿ ಮದುವೆ ಮಾಡಲಾಗಿದೆ. ಎಷ್ಟೋ ಮಂದಿ ಇದು ರಿಯಲ್​ ಮದುವೆನೇ ಎಂದು ಅಂದುಕೊಂಡವರೂ ಇದ್ದಾರೆ. ಸಾಮಾನ್ಯವಾಗಿ ಸೀರಿಯಲ್​ಗಳಲ್ಲಿ ನಾಯಕ- ನಾಯಕಿಯರ ನಟನೆ ಎಷ್ಟು ನೈಜವಾಗಿರುತ್ತದೆ ಎಂದರೆ ರಿಯಲ್​ ಲೈಫ್​ನಲ್ಲಿಯೂ ಇವರೇ ಜೋಡಿಯಾಗಲಿ, ಇವರೇ ಮದ್ವೆಯಾಗಲಿ ಎಂದೆಲ್ಲಾ ಅದೆಷ್ಟೋ ಅಭಿಮಾನಿಗಳು ಅಂದುಕೊಳ್ಳುವುದು ಉಂಟು.

ನಟಿ ಶ್ರೀದೇವಿಯ ನಿಗೂಢ ಸಾವಿಗೆ ಈಗೇನಿದು ಟ್ವಿಸ್ಟ್​? ರಹಸ್ಯವಾಗಿದ್ದ ತಂಗಿ ಶ್ರೀಲತಾ ಹೆಸರು ಮುನ್ನೆಲೆಗೆ!

ಇದೀಗ ಅಶೋಕ್​ ಮತ್ತು ಪ್ರಿಯಾ ರೀಲ್ಸ್​ ಮಾಡಿದ್ದಾರೆ. ಸೀರಿಯಲ್​ನಲ್ಲಿ ಕಟ್ಟಿರುವ ಕರಿಮಣಿಯನ್ನು ತೋರಿಸಿರುವ ಪ್ರಿಯಾ ಅವರು, ನೀನಲ್ಲ ನೀನಲ್ಲ ಕರಿಮಣಿ ಮಾಲಿಕ ನೀನಲ್ಲ ಎಂದು ಹೇಳಿದ್ದಾರೆ. ಹಿಂದಕ್ಕೆ ಅಶೋಕ್​ ಬಂದು ಡ್ಯಾನ್ಸ್​ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.   ಮೇಘನಾ ಅವರ ಬಣ್ಣದ ಬದುಕಿನ ಕುರಿತು ಹೇಳುವುದಾದರೆ, 'ಸೀತಾರಾಮ' ಸೀರಿಯಲ್​ಗೂ ಮುನ್ನ ಅವರು,  ನಟಿಸಿದ್ದು 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ ಖಳನಾಯಕಿ ನೇತ್ರಾ ಪಾತ್ರದ ಮೂಲಕ ಗಮನ ಸೆಳೆದಿದ್ದರು ಮೇಘನಾ ಶಂಕರಪ್ಪ.  

ನಿರೂಪಕಿಯಾಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದ ಮೇಘನಾ ಶಂಕರಪ್ಪ ನಟನೆಗೆ ಕಾಲಿಟ್ಟಿದ್ದು 'ಕಿನ್ನರಿ' ಧಾರಾವಾಹಿಯ ನಂತರ. ಮುಂದೆ 'ಕೃಷ್ಣ ತುಳಸಿ', 'ರತ್ನಗಿರಿ ರಹಸ್ಯ', 'ದೇವಯಾನಿ', 'ಸಿಂಧೂರ' ಹೀಗೆ ಕೆಲವೊಂದು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಮೇಘನಾ ಅವರು ಸದ್ಯ ಪ್ರಿಯಾ ಆಗಿ ಬದಲಾದುದು ಕಿರುತೆರೆ ವೀಕ್ಷಕರಿಗೆ ಖುಷಿ ತಂದಿದೆ. ಪಾಸಿಟಿವ್ ಆಗಿರಲಿ, ನೆಗೆಟಿವ್ ಆಗಿರಲಿ ಯಾವುದೇ ಪಾತ್ರ ನೀಡಿದರೂ ಅಚ್ಚುಕಟ್ಟಾಗಿ ಜೀವ ತುಂಬುವ ಮೇಘನಾ ಎರಡು ಶೇಡ್ ಪಾತ್ರವಿರುವ ಪಾತ್ರದ ಮೂಲಕ ಗುರುತಿಸಿಕೊಂಡಾಕೆ. ಕಿರುತೆರೆ ಅಂಗಳದಲ್ಲಿ ಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡುತ್ತಿರುವ ಈಕೆಗೆ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುವ ಆಸೆಯೂ ಇದೆ. ಅಂದಹಾಗೆ ಮೇಘನಾ ಶಂಕರಪ್ಪ ಹಾಗೂ ಅಶೋಕ್ ಶರ್ಮಾ ಸೀತಾರಾಮ ಸೀರಿಯಲ್‌ನಲ್ಲಿ ಪ್ರಿಯಾ ಹಾಗೂ ಅಶೋಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೇಘನಾ ಭರತನಾಟ್ಯ ಕಲಾವಿದೆ, ನಟಿ, ನಿರೂಪಕಿಯಾಗಿದ್ದರೆ, ಅಶೋಕ್ ಸಿನಿಮಾ, ಸೀರಿಯಲ್ ಕಲಾವಿದ, ಗಾಯಕನಾಗಿಯೂ ಗಮನ ಸೆಳೆದಿದ್ದಾರೆ.

ಭಾರಿ ತೂಕದ ವ್ಯಕ್ತಿ ಮೈಮೇಲೆ ಮಲಗಿರುವಾಗ.... ಇಂಟಿಮೇಟ್​ ದೃಶ್ಯಗಳ ಕುರಿತು ನಟಿ ದಿವ್ಯಾ ಹೇಳಿದ್ದೇನು?


PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
BBK 12: ಟಾಸ್ಕ್ ಆಡದೇ ಈ ವಾರದ ‘ಕ್ಯಾಪ್ಟನ್’ ಆದ ಸ್ಪಂದನಾ.. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!