ಮದುವೆಯ ಮೊದಲ ಹೆಜ್ಜೆ 'ಲಗ್ನ ಕಳಿಸುವ ಕಾರ್ಯ'ದ ವಿಡಿಯೋ ಶೇರ್​ ಮಾಡಿದ ಸೀತಾರಾಮ ಪ್ರಿಯಾ

Published : Dec 22, 2024, 06:42 PM ISTUpdated : Dec 23, 2024, 09:51 AM IST
ಮದುವೆಯ ಮೊದಲ ಹೆಜ್ಜೆ 'ಲಗ್ನ ಕಳಿಸುವ ಕಾರ್ಯ'ದ ವಿಡಿಯೋ ಶೇರ್​ ಮಾಡಿದ ಸೀತಾರಾಮ ಪ್ರಿಯಾ

ಸಾರಾಂಶ

ಸೀತಾರಾಮ ಧಾರಾವಾಹಿಯ ನಟಿ ಮೇಘನಾ ಶಂಕರಪ್ಪ ಅವರು ಮದುವೆಯಾಗಲಿದ್ದಾರೆ. ನಟಿ ಇತ್ತೀಚೆಗೆ ತಮ್ಮ ಭಾವಿ ಪತಿಯನ್ನು ಪರಿಚಯಿಸಿದ್ದು, ಈಗ ಮದುವೆಯ ಆಮಂತ್ರಣ ಪತ್ರಿಕೆ ತಯಾರಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಸೀತಾರಾಮದ   ಪ್ರಿಯಾ  ಇದಾಗಲೇ ಸೀರಿಯಲ್‌ನಲ್ಲಿ ತನ್ನ ಮನಮೆಚ್ಚಿದ ಪ್ರಿಯಕರ ಅಶೋಕ್‌ನನ್ನು ಮದುವೆಯಾಗಿದ್ದಾಳೆ. ಆದರೆ ರಿಯಲ್‌ ಲೈಫ್‌ನ ಪ್ರಿಯಾ ಅಂದ್ರೆ ಮೇಘನಾ ಶಂಕರಪ್ಪ ನಿಜ ಜೀವನದಲ್ಲಿ ಹಸೆಮಣೆಯೇರಲು ಸಜ್ಜಾಗಿದ್ದಾರೆ. ಈ ಬಗ್ಗೆ ನಟಿ ಈ ಹಿಂದೆಯೇ ಕ್ಲೂ ಕೊಟ್ಟಿದ್ದರೂ ಪತಿಯ ಮುಖವನ್ನು ಪರಿಚಯಿಸಿರಲಿಲ್ಲ. ಅದನ್ನು ಗುಟ್ಟಾಗಿ ಇಟ್ಟಿದ್ದರು. ತಮ್ಮ ಬಾಯ್‌ಫ್ರೆಂಡ್ ಬರ್ತಡೇ ವಿಶ್ ಮಾಡಿದ ಫೋಟೋವೊಂದನ್ನು ಹಂಚಿಕೊಂಡಿದ್ದರಷ್ಟೆ.  ಇಬ್ಬರೂ ಒಂದೇ ತರಹದ ಉಂಗುರ ಧರಿಸಿ ಕೈಮೇಲೆ ಕೈ ಇಟ್ಟು ಫೋಟೋ ತೆಗೆದುಕೊಂದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡು ವಿಶ್ ಮಾಡಿದ್ದರು. ಬಳಿಕ ಕೆಲ ದಿನಗಳ ಹಿಂದೆ,  ವಿಶೇಷ ವಿಡಿಯೋ ಮಾಡುವ ಮೂಲಕ ಭಾವಿ ಪತಿಯ ಮುಖ ಪರಿಚಯವನ್ನು ಮಾಡಿಸಿದ್ದಾರೆ. ಒಂದೊಳ್ಳೆ ಹಿನ್ನೆಲೆ ಗಾಯನದ ಮೂಲಕ ರೆಸ್ಟೋರೆಂಟ್‌ ಒಂದರಲ್ಲಿ ಸಿನಿಮೀಯ ಸ್ಟೈಲ್‌ನಲ್ಲಿಯೇ ಪತಿಯನ್ನು ತೋರಿಸಿದ್ದಾರೆ ನಟಿ. ಅವರ ಹೆಸರು ಜಯಂತ್‌ ಎನ್ನುವುದನ್ನು ಕ್ಯಾಪ್ಷನ್‌ ಮೂಲಕ ತಿಳಿಸಿದ್ದಾರೆ. One step closer to Forever, Meet Jayanth ಎಂದು ಬರೆದುಕೊಂಡಿದ್ದರು.

ಇದೀಗ ಇನ್ನೊಂದು ವಿಡಿಯೋ ಶೇರ್​ ಮಾಡಿರುವ ನಟಿ, ಮದುವೆಯ ಮೊದಲ ಹೆಜ್ಜೆಯಾಗಿ ಆಮಂತ್ರಣ ಪತ್ರಿಕೆ ಬರೆಸುವ ಕಾರ್ಯದ ಬಗ್ಗೆ ತಿಳಿಸಿದ್ದಾರೆ. ಪುರೋಹಿತರನ್ನು ಕರೆಸಿ ಶುಭ ಮುಹೂರ್ತದಲ್ಲಿ ಈ ಕಾರ್ಯವನ್ನು ನೆರವೇರಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ಇದನ್ನು ಲಗ್ನ ಕಳಿಸುವ ಕಾರ್ಯ ಎಂದೂ ಕರೆಯುತ್ತಾರೆ. ಅದರ ವಿಡಿಯೋ ಅನ್ನು ಮೇಘನಾ ಅವರು ಶೇರ್​ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪುರೋಹಿತರು ಆಮಂತ್ರಣ ಪತ್ರಿಕೆ ಬರೆಯುವ ಕಾರ್ಯಕ್ಕೆ ಚಾಲನೆ ನೀಡುವುದನ್ನು ನೋಡಬಹುದು. ಈ ಕಾರ್ಯದಲ್ಲಿ, ಮೇಘನಾ ಅವರ ಕುಟುಂಬಸ್ಥರು ಹಾಗೂ ಭಾವಿ ಪತಿ ಕೂಡ ಹಾಜರಿದ್ದಾರೆ. ಇದರಲ್ಲಿ ಎಂದಿನಂತೆ ಮೇಘನಾ ಅವರು ಕೆಲವು ತಮಾಷೆಗಳ ಮೂಲಕವೂ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮದುವೆ ಸಂಬಂಧಿಸಿದ ಸೀರೆ, ಕೆಲವು ಒಡವೆಗಳನ್ನು ತೋರಿಸಿದ್ದಾರೆ. ಆದರೆ  ಮದುವೆ ಯಾವಾಗ ಎಂದು ಇನ್ನಷ್ಟೇ ಕಾದು ನೋಡಬೇಕಿದೆ. ಇದೇ ಸದ್ಯ ಅವರ ಫ್ಯಾನ್ಸ್​ ಪ್ರಶ್ನೆಯಾಗಿದೆ. 

ಸೀತಾರಾಮ ಸಿರಿಯಲ್‌ ರಾತ್ರಿ ಶೂಟಿಂಗ್‌ ಮಾಡುವಾಗ ಏನೆಲ್ಲಾ ಆಯ್ತು? ನಟಿ ಮೇಘನಾ ರಿವೀಲ್‌

ಇನ್ನು ಮೇಘನಾ ಶಂಕರಪ್ಪ ಅವರ  ಕುರಿತು ಹೇಳುವುದಾದರೆ, 'ಸೀತಾರಾಮ' ಸೀರಿಯಲ್​ಗೂ ಮುನ್ನ ಅವರು,  ನಟಿಸಿದ್ದು 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ ಖಳನಾಯಕಿ ನೇತ್ರಾ ಪಾತ್ರದ ಮೂಲಕ ಗಮನ ಸೆಳೆದಿದ್ದರು ಮೇಘನಾ ಶಂಕರಪ್ಪ.  ನಿರೂಪಕಿಯಾಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದ ಮೇಘನಾ ಶಂಕರಪ್ಪ ನಟನೆಗೆ ಕಾಲಿಟ್ಟಿದ್ದು 'ಕಿನ್ನರಿ' ಧಾರಾವಾಹಿಯ ನಂತರ. ಮುಂದೆ 'ಕೃಷ್ಣ ತುಳಸಿ', 'ರತ್ನಗಿರಿ ರಹಸ್ಯ', 'ದೇವಯಾನಿ', 'ಸಿಂಧೂರ' ಹೀಗೆ ಕೆಲವೊಂದು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಮೇಘನಾ ಅವರು ಸದ್ಯ ಪ್ರಿಯಾ ಆಗಿ ಬದಲಾದುದು ಕಿರುತೆರೆ ವೀಕ್ಷಕರಿಗೆ ಖುಷಿ ತಂದಿದೆ. ಪಾಸಿಟಿವ್ ಆಗಿರಲಿ, ನೆಗೆಟಿವ್ ಆಗಿರಲಿ ಯಾವುದೇ ಪಾತ್ರ ನೀಡಿದರೂ ಅಚ್ಚುಕಟ್ಟಾಗಿ ಜೀವ ತುಂಬುವ ಮೇಘನಾ ಎರಡು ಶೇಡ್ ಪಾತ್ರವಿರುವ ಪಾತ್ರದ ಮೂಲಕ ಗುರುತಿಸಿಕೊಂಡಾಕೆ. ಕಿರುತೆರೆ ಅಂಗಳದಲ್ಲಿ ಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡುತ್ತಿರುವ ಈಕೆಗೆ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುವ ಆಸೆಯೂ ಇದೆ.  

ಕೆಲ ತಿಂಗಳ ಹಿಂದಷ್ಟೇ ಹೊಸ ಮನೆಯಲ್ಲಿ ಖರೀದಿಸಿದ್ದ ಮೇಘನಾ ಅವರು, ಗೃಹ ಪ್ರವೇಶದ ವಿಡಿಯೋವನ್ನು ನಟಿ ಮೇಘಾನಾ ಶಂಕರಪ್ಪ ತಮ್ಮ ಯ್ಯೂಟೂಬ್ ಚಾನೆಲ್​ನಲ್ಲಿ ಶೇರ್ ಮಾಡಿಕೊಂಡಿದ್ದರು.  ಈಗಲೂ ನಟಿಗೆ ಸಿಕ್ಕಾಪಟ್ಟೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಸೀತಾರಾಮ ಸೀರಿಯಲ್‌ನಲ್ಲಿ ಸದ್ಯ ಪ್ರಿಯಾಗೆ ಬ್ರೆಸ್ಟ್‌ ಕ್ಯಾನ್ಸರ್‍‌ ಇರುವಂತೆ ತೋರಿಸಲಾಗಿದೆ. ಆದರೆ ಈ ಕಥೆಯನ್ನು ಅಲ್ಲಿಗೇ ಬಿಟ್ಟು ಸಿಹಿಯ ಸಾವಿನ ಕಡೆ ಕಥೆ ಹೊರಳಿದೆ. ಇನ್ನು ಮೇಘನಾ ಅವರ ಭಾವಿ ಪತಿ ಏನು ಮಾಡುತ್ತಾರೆ, ಮದುವೆಯಾವಾಗ ಎನ್ನುವ ಡಿಟೇಲ್ಸ್‌ ಇನ್ನಷ್ಟೇ ಗೊತ್ತಾಗಬೇಕಿದೆ. 

ಆ ಘಟನೆ ನಂತ್ರ ಹೆಂಡ್ತಿಗೆ ಸೀರೆ ಕೊಡಿಸೋ ಧೈರ್ಯ ಇಂದಿಗೂ ಮಾಡ್ಲಿಲ್ಲಾ ಸಾರ್​... ನಾ.ಸೋಮೇಶ್ವರ್​ ಹೇಳಿದ್ದು ಕೇಳಿ...
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ
Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?