ಶೂಟಿಂಗ್ ವೇಳೆ ಭಾಗ್ಯಳನ್ನು ಒದೆಯಲು ಹೋದ ಶ್ರೇಷ್ಠಾ ಪಾತ್ರಧಾರಿಯ ಹಿಂಬದಿ ಡ್ಯಾಮೇಜ್​!

Published : Sep 25, 2024, 02:56 PM IST
 ಶೂಟಿಂಗ್ ವೇಳೆ ಭಾಗ್ಯಳನ್ನು ಒದೆಯಲು ಹೋದ ಶ್ರೇಷ್ಠಾ ಪಾತ್ರಧಾರಿಯ ಹಿಂಬದಿ ಡ್ಯಾಮೇಜ್​!

ಸಾರಾಂಶ

ಭಾಗ್ಯಲಕ್ಷ್ಮಿ ಸೀರಿಯಲ್​ ಶೂಟಿಂಗ್​ ಸಮಯದಲ್ಲಿ ಭಾಗ್ಯಳನ್ನು ಒದೆಯಲು ಹೋದ ಶ್ರೇಷ್ಠಾ ಪಾತ್ರಧಾರಿ ಕಾವ್ಯಾ ಗೌಡ ಬಿದ್ದು ಸೊಂಟ ನೋವು ಮಾಡಿಕೊಂಡಿದ್ದಾರೆ. ಅದರ ವಿಡಿಯೋ ವೈರಲ್​ ಆಗಿದೆ.  

ಶೂಟಿಂಗ್​ ಸಮಯದಲ್ಲಿ ಏನೇನೋ ಅನಾಹುತ ಸಂಭವಿಸುವುದು ನಡೆದೇ ಇರುತ್ತದೆ. ಸಿನಿಮಾ ಆಗಲಿ, ಸಿರಿಯಲ್​  ಆಗಲೀ, ಶೂಟಿಂಗ್​ ಮಾಡುವ ಭರದಲ್ಲಿ ಅನಾಹುತ ಆಗುವುದು ಸಹಜ. ಇದೇ ರೀತಿ ಕಲರ್ಸ್​ ಕನ್ನಡ ವಾಹಿನಿಯ ಭಾಗ್ಯಲಕ್ಷ್ಮಿ ಸೀರಿಯಲ್​ ಶೂಟಿಂಗ್​ ಸಮಯದಲ್ಲಿ ಶ್ರೇಷ್ಠಾ ಪಾತ್ರಧಾರಿ ಕಾವ್ಯಾ ಗೌಡ ಅವರು ಭಾಗ್ಯ ಪಾತ್ರಧಾರಿ ಸುಷ್ಮಾ ಕೆ.ರಾವ್​ ಅವರನ್ನು ಒದೆಯಲು ಹೋದ ಸಮಯದಲ್ಲಿ ಜಾರಿಬಿದ್ದು ಹಿಂಬದಿ ಪೆಟ್ಟು ಮಾಡಿಕೊಂಡಿದ್ದಾರೆ. ಇದರ ವಿಡಿಯೋ ಅನ್ನು ಸುಷ್ಮಾ ಅವರು ಹಾಸ್ಯದ ರೂಪದಲ್ಲಿ ಶೇರ್​ ಮಾಡಿದ್ದಾರೆ. ಅಷ್ಟಕ್ಕೂ ಕಾವ್ಯಾ ಅವರಿಗೆ ಭಾರಿ ಏನೂ ಸಂಭವಿಸಿಲ್ಲ.  ಅವರು ಕೂಡ ಜೋರಾಗಿ ನಕ್ಕಿದ್ದಾರೆ. ಏನಾಯಿತು ಎಂದು ತಾಂಡವ್​ ಪಾತ್ರಧಾರಿ ಸುದರ್ಶನ್​ ಅವರು ತಮಾಷೆಯ ಮೂಲಕ ವಿವರಿಸಿದ್ದಾರೆ.

 ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿರೋ ಸುಷ್ಮಾ ಆಗಾಗ್ಗೆ ಶೂಟಿಂಗ್​ ವಿಡಿಯೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಕೆಲ ದಿನಗಳ ಹಿಂದಷ್ಟೇ ಶ್ರೇಷ್ಠಾಳ ಮೇಲೆ ಬೂದಿ ಎರೆಚುವ ಶೂಟಿಂಗ್​ ಸಮಯದ ಮೇಕಿಂಗ್​ ವಿಡಿಯೋ ಶೇರ್​ ಮಾಡಿಕೊಂಡಿದ್ದರು. ಇದರಲ್ಲಿ ಶ್ರೇಷ್ಠಾ ಪಾತ್ರಧಾರಿ ಕಾವ್ಯ ಗೌಡ ಅವರ ಮೇಲೆ ಬೂದಿ ಎರೆಚಲಾಗಿತ್ತು. ಅದೆಲ್ಲಾ ಕಣ್ಣಿಗೂ ಬಿದ್ದು ಕಾವ್ಯಾ ಪಡಬಾರದ ಕಷ್ಟ ಪಟ್ಟರು. ಅಷ್ಟೇ ಅಲ್ಲದೇ ಡ್ರೆಸ್​ ಒಳಗೆ ಎಲ್ಲಾ ಬೂದಿ ಸೇರಿಕೊಂಡು ಪೇಚಿಗೂ ಸಿಲುಕಿದರು. ಒಂದು ದೃಶ್ಯವನ್ನು ಪ್ರೇಕ್ಷಕರ ಮುಂದೆ ತೋರಿಸುವ ಮುನ್ನ ನಟ-ನಟಿಯರು ಪಡುವ ಕಷ್ಟಗಳ  ಬಗ್ಗೆ ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಇದರಲ್ಲಿ ಸುಷ್ಮಾ ಮಾಮೂಲಿನಂತೆ ಜೋಕ್​ ಮಾಡುತ್ತಲೇ ಇದ್ದರೂ, ಬೂದಿ ಮೆತ್ತಿಕೊಂಡ ಕಾವ್ಯಾ ಪರದಾಡಿದ್ದರು. ಈಗಲೂ ಕಾವ್ಯಾ ಬಿದ್ದು ನೋವಾಗಿದ್ದರೂ ನಗುತ್ತಿದ್ದಾರೆ. 

ಅನುಬಂಧ ಅವಾರ್ಡ್​ಗೆ ಭಾಗ್ಯಲಕ್ಷ್ಮಿ ಸೀರಿಯಲ್​ ಸುಷ್ಮಾರನ್ನು ರೆಡಿ ಮಾಡಿದ್ದು ಹೀಗೆ ನೋಡಿ...

ಅಂದಹಾಗೆ ಕಾವ್ಯಾ ಗೌಡ ಕುರಿತು ಹೇಳುವುದಾದರೆ, ಇವರು ಐದು ವರ್ಷ ತೆಲುಗು ಧಾರಾವಾಹಿಯಲ್ಲಿ ನಾಯಕಿ  ಪಾತ್ರದಲ್ಲಿ ನಟಿಸಿದ್ದಾರೆ.ಬೆಂಗಳೂರು ಮೂಲದ ಕಾವ್ಯಾ,  ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ವಿಲನ್​ ರೋಲ್​ ಮೂಲಕ ಮನೆ ಮಾತಾಗಿದ್ದಾರೆ.   3 ವರ್ಷಗಳ ಹಿಂದೆ ಉದಯ ಟಿವಿಯಲ್ಲಿ ಮೂಡಿ ಬಂದ ದೇವಯಾನಿ ಧಾರಾವಾಹಿಯಲ್ಲಿ ನಟಿಸಿದ್ದರು. ವಿಜಯ್ ರಾಘವೇಂದ್ರ ನಟನೆಯ ರಿಂಗ ರಿಂಗ ರೋಸ್ ಎಂಬ ಸಿನಿಮಾಗೂ ಇವರು ನಟಿಸಿದ್ದಾರೆ.  ಇದಕ್ಕೂ ಮುನ್ನ ಜೀ ಕನ್ನಡ ವಾಹಿನಿಯ 'ಮಿಸ್ಟರ್ & ಮಿಸ್‌ಸ್ ರಂಗೇಗೌಡ' ಧಾರಾವಾಹಿಯಲ್ಲಿ ಲೀಡ್ ಆಗಿ 100 ಎಪಿಸೋಡ್‌ಲ್ಲಿ ನಟಿಸಿದ್ದರು. ಆಮೇಲೆ ಸೀರಿಯಲ್​ ಬಿಟ್ಟಿದ್ದರು. ಭಾಗ್ಯಲಕ್ಷ್ಮಿಯಲ್ಲಿ ಶ್ರೇಷ್ಠಾ ಮತ್ತು ತಾಂಡವ್ ಮದುವೆ ನಿಂತಿದೆ. ಭಾಗ್ಯಳನ್ನು ಬದಲಾಯಿಸುವುದಾಗಿ ಕುಸುಮಾ ಚಾಲೆಂಜ್​ ಹಾಕಿದ್ದಾಳೆ. ಸೀರಿಯಲ್ ಯಾವ ರೀತಿ ಟರ್ನ್​ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. 

ಇನ್ನು ಸುಷ್ಮಾ ಕುರಿತು ಹೇಳುವುದಾದರೆ, ಇವರು ಚಿಕ್ಕಮಗಳೂರಿನ ಕೊಪ್ಪದವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‌ಸಿ ಪದವಿ ಪಡೆದಿದ್ದಾರೆ. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಿಂದ ಹಿಂದಿಯಲ್ಲಿ ಪದವಿ ಪಡೆದಿದ್ದಾರೆ.  ಭರತನಾಟ್ಯ ಮತ್ತು ಕೂಚುಪುಡಿ ಕಲಾವಿದೆ. ನೃತ್ಯಕ್ಕಾಗಿ  1997ರಲ್ಲಿ  ಆರ್ಯಭಟ ಪ್ರಶಸ್ತಿ ಪಡೆದಿದ್ದಾರೆ. 2005ರಲ್ಲಿ ನಟನೆಗಾಗಿಯೂ ಆರ್ಯಭಟ ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ಈಗ 38 ವರ್ಷ ವಯಸ್ಸು. ಸುಷ್ಮಾ ರಾವ್ ಎಸ್‌.ನಾರಾಯಣ್ ನಿರ್ದೇಶನದ ಭಾಗಗೀರಥಿ ಧಾರಾವಾಹಿಯಲ್ಲಿ ಹೇಮಾ ಪ್ರಭಾತ್ ಅವರ ತಂಗಿಯ ಪಾತ್ರದಲ್ಲಿ ನಟಿಸುವ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಟ್ಟರು. ನಂತರ ಯಾವ ಜನ್ಮದ ಮೈತ್ರಿ, ಗುಪ್ತಗಾಮಿನಿ, ಸೊಸೆ ತಂದ ಭಾಗ್ಯ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದರು.     

ಅನುಬಂಧ ವೇದಿಕೆ ಮೇಲೆ ಹತ್ತಾರು ಭಾಗ್ಯಲಕ್ಷ್ಮಿಯರು- 25 ವರ್ಷಗಳ ಜರ್ನಿ ನೆನೆದು ನಟಿ ಸುಷ್ಮಾ ಕಣ್ಣೀರು

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
BBK 12: ಟಾಸ್ಕ್ ಆಡದೇ ಈ ವಾರದ ‘ಕ್ಯಾಪ್ಟನ್’ ಆದ ಸ್ಪಂದನಾ.. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!