ಸೀತಾರಾಮ ಸೀರಿಯಲ್​ ಸೀತಾ, ವೈಷ್ಣವಿ ಮನೆಗೆ ಬಂದ ಕಳ್ಳ! ಅವನು ಕೇಳಿದ್ದೇನು? ನಟಿ ಹೇಳಿದ್ದೇನು?

Published : Feb 28, 2024, 10:08 PM IST
ಸೀತಾರಾಮ ಸೀರಿಯಲ್​ ಸೀತಾ, ವೈಷ್ಣವಿ ಮನೆಗೆ ಬಂದ ಕಳ್ಳ! ಅವನು ಕೇಳಿದ್ದೇನು? ನಟಿ ಹೇಳಿದ್ದೇನು?

ಸಾರಾಂಶ

ಸೀತಾರಾಮ ಸೀರಿಯಲ್​ ಸೀತಾ ಅಂದ್ರೆ ವೈಷ್ಣವಿ ಗೌಡ ಮನೆಗೆ ಬಂದನಂತೆ ಕಳ್ಳ! ಅವನ್ಯಾರು? ನಟಿಯ ಬಾಯಲ್ಲೇ ಕೇಳಿ...  c

ಸೀತಾರಾಮ ಸೀರಿಯಲ್​ ಸೀತೆಯ ಮನೆಗೆ ಕಳ್ಳ ಬಂದಿದ್ನಂತೆ! ಹೌದು. ಹೀಗಂತ ಖುದ್ದು ಸೀತೆ ಅಂದ್ರೆ ವೈಷ್ಣವಿ ಗೌಡ ಹೇಳಿದ್ದಾರೆ! ಅಷ್ಟಕ್ಕೂ ಬಹುತೇಕರಿಗೆ ತಿಳಿದಿರುವಂತೆ ನಟಿ ವೈಷ್ಣವಿ ಗೌಡ ಈ ಹಿಂದೆ ಅಗ್ನಿಸಾಕ್ಷಿ ಸೀರಿಯಲ್​ನಲ್ಲಿ ಸನ್ನಿಧಿ ಎಂದೇ ಫೇಮಸ್​ ಆದವರು. ಇದೀಗ ಸನ್ನಿಧಿಯ ಜಾಗವನ್ನು ಸೀತೆ ಪಡೆದುಕೊಂಡಿದ್ದಾಳೆ. ಸೀತಾರಾಮ ಸೀರಿಯಲ್​ನ ವೈಷ್ಣವಿ ಅವರ ಸೀತೆಯ ಪಾತ್ರ ಮನೆಮಾತಾಗಿದೆ. ನಿಜ ಜೀವನದಲ್ಲಿ ಮದ್ವೆಯಾಗದಿದ್ರೂ ಸೀರಿಯಲ್​ನಲ್ಲಿ ಸಿಹಿ ಎಂಬ ಪುಟಾಣಿಯ ತಾಯಿಯಾಗಿರುವ ಸೀತೆಯ ಪಾತ್ರಧಾರಿ ವೈಷ್ಣವಿ ಅವರು ಸೋಷಿಯಲ್​  ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​.

ಇದೀಗ ಅವರು ರೀಲ್ಸ್​ ಒಂದನ್ನು ಮಾಡಿದ್ದಾರೆ. ನಿನ್ನೆ ರಾತ್ರಿ ನನ್ನ ಮನೆಗೆ ಒಬ್ಬ ಕಳ್ಳ ಬಂದಿದ್ದ. ನಿನ್ನ ಬಳಿ ಏನೇನಿದೆ ಎಲ್ಲವನ್ನೂ ಕೊಡು ಎಂದ. ಆಗ ನಾನು ನನ್ನ ರಾಮ್​, ನನ್ನ ಶಾಮ್​, ನನ್ನ ಹೆಸರು, ನನ್ನ ಕೆಲಸ ಎಲ್ಲವನ್ನೂ ತೆಗೆದುಕೊಂಡು ಹೋಗು ಎಂದೆ ಎಂಬ ಹಾಡಿನ ರೀಲ್ಸ್​ ಮಾಡಿದ್ದಾರೆ. ಅಷ್ಟಕ್ಕೂ ಇದು ಚೋರ್ ಎಂಬ ಸಂಗೀತ ಆಲ್ಬಂನ ಹಾಡಾಗಿದ್ದು, ಇದೀಗ ಟ್ರೆಂಡಿಂಗ್​ನಲ್ಲಿದೆ. ಅದಕ್ಕೆ ನಟಿ ಸಕತ್​ ಎಕ್ಸ್​ಪ್ರೆಷನ್​ ಕೊಟ್ಟು ರೀಲ್ಸ್​ ಮಾಡಿದ್ದಾರೆ. ಅದರಲ್ಲಿ ರಾಮ್​ನೂ ಕರೆದುಕೊಂಡು ಹೋಗು ಎಂಬ ಮಾತು ಬಂದಿದ್ದರಿಂದ ನೆಟ್ಟಿಗರು ಕಮೆಂಟ್​  ಮಾಡುತ್ತಿದ್ದಾರೆ. ರಾಮ್​ನ ಕರೆದುಕೊಂಡು ಹೋದ್ರೆ ಸೀತಾ ಏನ್​ ಮಾಡ್ತಾಳೆ? ಹೀಗೆಲ್ಲಾ ಹೇಳೋದಾ ಎಂದು ಕೇಳುತ್ತಿದ್ದಾರೆ.

ಸಿಹಿಯ ನಟನೆಗೆ ಕಣ್ಣೀರು ಹಾಕಿದ ಫ್ಯಾನ್ಸ್‌: ನಿನಗೆ ನೀನೇ ಸಾಟಿ ಕಂದಾ ಎಂದ ಅಭಿಮಾನಿಗಳು

ಇನ್ನು ಸೀತಾರಾಮ ವಿಷಯಕ್ಕೆ ಬರುವುದಾದರೆ, ಪ್ರೀತಿಯನ್ನು ಹೇಳಿಕೊಂಡು ಬಂದ ರಾಮ್​ನನ್ನು ಬೈದು ಸೀತಾ ಮನೆಯಿಂದ ಹೊರಕ್ಕೆ ಕಳಿಸಿದ್ದಾಳೆ. ಇದೇ ಅವಮಾನದಲ್ಲಿ ರಾಮ್​ ಏನು ಮಾಡಬೇಕು ಎಂದು ತಿಳಿಯುವಷ್ಟರಲ್ಲಿಯೇ ಭಯಾನಕ ಅಪಘಾತ ಸಂಭವಿಸಿದೆ. ಅಷ್ಟಕ್ಕೂ ಈ ಆ್ಯಕ್ಸಿಡೆಂಟ್​ ಮಾಡಿಸಿದ್ದು, ಖುದ್ದು ಆತನ ಚಿಕ್ಕಮ್ಮ. ಸೀತಾಳಿಗೆ ಮೋಸ ಮಾಡುವ ಉದ್ದೇಶದಿಂದ ಮದುವೆಯಾಗಲು ಹೊರಟಿದ್ದ ರುದ್ರಪ್ರತಾಪ್​ನ ಕೈಜೋಡಿಸಿ ಚಿಕ್ಕಮ್ಮ ಅಪಘಾತ ಮಾಡಿಸಿದ್ದಾಳೆ. ಜೈಲು ಸೇರಿದ್ದ ರುದ್ರಪ್ರತಾಪ್​ನಿಗೆ ಜಾಮೀನು ಕೊಡಿಸಿ ಹೊರಕ್ಕೆ ಕರೆದುಕೊಂಡು ಬಂದಿರುವ ಚಿಕ್ಕಮ್ಮ, ರುದ್ರಪ್ರತಾಪ್​ ಕೈಯಲ್ಲಿ ಅಪಘಾತ ಮಾಡಿಸಿದ್ದಾಳೆ. ಭೀಕರ ಅಪಘಾತದಲ್ಲಿ ರಾಮ್​ ಆಸ್ಪತ್ರೆಗೆ ಸೇರಿದ್ದಾನೆ.  ಸೀತಾ ರಕ್ತ ಕೊಟ್ಟು ಪ್ರಾಣ ಕಾಪಾಡಿದ್ದಾರೆ. 

 

ಅದೇ ಇನ್ನೊಂದೆಡೆ ಸೀತಾಳಿಗೆ ಅಪಘಾತದ ವಿಷಯ ತಿಳಿದು ಗಾಬರಿಯಾಗಿದ್ದಾಳೆ. ಜೋರಾಗಿ ಅಳುತ್ತಾ ಆಸ್ಪತ್ರೆಗೆ ಧಾವಿಸಿದ್ದಾಳೆ. ತನ್ನಿಂದ ತಪ್ಪಾಯ್ತು ಎಂದು ಗೋಳೋ ಎಂದಿದ್ದಾಳೆ. ಆಸ್ಪತ್ರೆಗೆ ಧಾವಿಸುತ್ತಿರುವ ಹೊತ್ತಿನಲ್ಲಿಯೇ ಸೀರಿಯಲ್​ಗೆ ಭಾರಿ ಟ್ವಿಸ್ಟ್​ ಬಂದಿದೆ. ರಾಮ್​ನ ಮಾಜಿ ಪ್ರೇಯಸಿಯ ಎಂಟ್ರಿ ಆಗಿದೆ. ಹೂಗುಚ್ಛ ಹಿಡಿದುಕೊಂಡು ಬಂದಿದ್ದಾಳೆ. ರಾಮ್‌ ಬಾಳಿನಿಂದ ಸೀತಾಳನ್ನು ದೂರ ಮಾಡಲು ಚಿಕ್ಕಮ್ಮ ಪ್ರೇಯಸಿಯ ಕೈಜೋಡಿಸಿದ್ದಾಳೆ. ಎಚ್ಚರಗೊಂಡ ರಾಮ್‌ ಸೀತಾಳಿಗೆ ಮೌನವಾಗಿಯೇ ಪ್ರೀತಿ ನಿವೇದನೆ ಮಾಡಿಕೊಂಡಿದ್ದಾನೆ. ಮುಂದೇನು ಎನ್ನುವುದು ಪ್ರಶ್ನೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Bigg Boss 19 Winner ಘೋಷಣೆ; ಮೊದಲೇ ಪ್ರೀ ಪ್ಲ್ಯಾನ್‌ ಮಾಡಿದ್ದಕ್ಕೆ ತಿರುಗಿಬಿದ್ದ ಸಹಸ್ಪರ್ಧಿಗಳು!
ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಎಂದೂ ಹೇಳಿರದ ರಿಯಲ್ ಕಥೆ