ಬಿಗ್​ಬಾಸ್​ ವಿನಯ್​ ಕನಸು ಏನಿತ್ತು? ಡ್ರೋನ್​ ಪ್ರತಾಪ್​ ಗೆಲ್ಲದ ಕಾರಣವೇನು? ಅವ್ರ ಬಾಯಲ್ಲೇ ಕೇಳಿ....

Published : Feb 21, 2024, 05:43 PM IST
ಬಿಗ್​ಬಾಸ್​ ವಿನಯ್​ ಕನಸು ಏನಿತ್ತು? ಡ್ರೋನ್​ ಪ್ರತಾಪ್​ ಗೆಲ್ಲದ ಕಾರಣವೇನು? ಅವ್ರ ಬಾಯಲ್ಲೇ ಕೇಳಿ....

ಸಾರಾಂಶ

ಬಿಗ್​ಬಾಸ್​ ವಿನಯ್​ ಕನಸು ಏನಿತ್ತು? ಡ್ರೋನ್​ ಪ್ರತಾಪ್​ ಗೆಲ್ಲದ ಕಾರಣವೇನು? ಅವ್ರ ಬಾಯಲ್ಲೇ ಕೇಳಿ....  

ಬಿಗ್​ಬಾಸ್​ ಮುಗಿದು ತಿಂಗಳು ಕಳೆದರೂ ಅದರ ಕ್ರೇಜ್​ನಿಂದ ಬಿಗ್​ಬಾಸ್​ ಅಭಿಮಾನಿಗಳು ಹೊರ ಬಂದಿಲ್ಲ. ಅದೇ ಇನ್ನೊಂದೆಡೆ ಬಿಗ್​ಬಾಸ್​ ಸ್ಪರ್ಧಿಗಳು ಹೊರಕ್ಕೆ ಬರುತ್ತಿದ್ದಂತೆಯೇ ಅವರಿಗೆ ಹಿಂದೆಂದಿಗಿಂತಲೂ ಹೋದಲ್ಲಿ, ಬಂದಲ್ಲಿ ಡಿಮ್ಯಾಂಡ್​ ಜಾಸ್ತಿಯಾಗಿದೆ. ಸ್ಪರ್ಧಿಗಳು ಗೆಲ್ಲದಿದ್ದರೂ ಅವರ ಮೇಲಿನ ಕ್ರೇಜ್​ ಮಾತ್ರ ಅಭಿಮಾನಿಗಳಲ್ಲಿ ನಿಂತಿಲ್ಲ, ಜೊತೆಗೆ ಹಲವಾರು ಕಾರ್ಯಕ್ರಮಗಳಲ್ಲಿ ಇವರನ್ನು ಗೆಸ್ಟ್​ ಆಗಿ ಕರೆಸುವ ಟ್ರೆಂಡ್​ ಶುರುವಾಗಿದೆ. ಒಟ್ಟಿನಲ್ಲಿ ಈಗ ಬಿಗ್​ಬಾಸ್​​ ಖ್ಯಾತಿಯ ಸ್ಪರ್ಧಿಗಳ  ಹವಾ ಜೋರಾಗಿದೆ. ಇವರಿಗಾಗಿ ಫ್ಯಾನ್ಸ್​ ಪೇಜ್​ ಅಸಂಖ್ಯ ಹುಟ್ಟುಕೊಂಡಿದೆ.  ಇವರ ಅಭಿಮಾನಿಗಳ ಬಳಗ ಬಹುದೊಡ್ಡದಾಗುತ್ತಲೇ ಸಾಗುತ್ತಿದೆ.  ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರನ್ನು ಮಾತಿನ ಮೋಡಿಯಲ್ಲಿ ಸಿಲುಕಿಸಿ ಮೋಸ, ವಂಚನೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿದ್ದ ಡ್ರೋನ್​ ಪ್ರತಾಪ್​ರಿಂದ ಹಿಡಿದು ಬಿಗ್​ಬಾಸ್​ ಮನೆಯೊಳಕ್ಕೆ ಹೋಗಿ ಬಂದ ಎಲ್ಲರಿಗೂ ಡಿಮ್ಯಾಂಡ್ ಜಾಸ್ತಿಯಾಗಿದೆ.

ಡೀಪ್​ಫೇಕ್​ ಹೆಸ್ರಲ್ಲಿ ಶಾರುಖ್​, ಸಲ್ಮಾನ್​, ರಣಬೀರ್, ಅಕ್ಷಯ್​​ಗೆ ಹೀಗೆಲ್ಲಾ ಮಾಡೋದಾ? ಉಫ್​ ಎಂದ ಫ್ಯಾನ್ಸ್​! ​

 
ಇದೀಗ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ಕೆಂಡಸಂಪಿಗೆ ಸೀರಿಯಲ್​ ಜಾತ್ರೆ ಹೊಸಪೇಟೆಯಲ್ಲಿ ನಡೆದಿದ್ದು, ಅದರಲ್ಲಿ ಬಿಗ್​ಬಾಸ್​ ಸ್ಪರ್ಧಿಗಳು  ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್​ಬಾಸ್​ನ ವಿನಯ್​ ಆನೆಯ ಮೂಲಕ ಬಂದಿದ್ದರೆ, ಡ್ರೋನ್​ ಪ್ರತಾಪ್​ ಗರುಡದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದರ ಪ್ರೊಮೋ ರಿಲೀಸ್​ ಆಗಿದೆ. ಇದೇ ವೇಳೆ ಬಿಗ್​ಬಾಸ್​ ಸ್ಪರ್ಧಿಗಳು ಭರ್ಜರಿ ಡ್ಯಾನ್ಸ್​ ಕೂಡ ಮಾಡಿದ್ದಾರೆ. 

 

ಇದೇ ಸಮಯದಲ್ಲಿ ವಿನಯ್​ ಅವರು ತಮ್ಮ ಕನಸಿನ ಬಗ್ಗೆ ಮಾತನಾಡಿದ್ದಾರೆ. ಎಲ್ಲಿಗೆ ಹೋದರೂ ತಮಗೆ ಎಲ್ಲರೂ ಗೌರವ ಕೊಡಬೇಕು, ಚಪ್ಪಾಳೆಯಿಂದ ಬರಮಾಡಿಕೊಳ್ಳಬೇಕು ಎನ್ನುವ ಕನಸು ಇತ್ತು. ಅದೀಗ ಬಿಗ್​ಬಾಸ್​​ಗೆ ಹೋಗಿ ಬಂದ ಮೇಲೆ ಕನಸಾಗಿದೆ ಎಂದಿದ್ದಾರೆ. ಇದೇ ವೇಳೆ ನಿರೂಪಕ, ಡ್ರೋನ್​ ಪ್ರತಾಪ್​ ಅವರಿಗೆ ನೀವ್ಯಾಕೆ ಬಿಗ್​ಬಾಸ್​ ಕಪ್​ ಗೆಲ್ಲಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಆಗ ಪ್ರತಾಪ್​ ತಮ್ಮ ಎಂದಿನ ಕಿಕಿಕಿ ಎನ್ನುವ ನಗುವಿನ ಮೂಲಕ ಉತ್ತರ ನೀಡಿದ್ದಾರೆ. ಅವರು ಮುಂದೆ ಏನು ಉತ್ತರ ನೀಡಿದ್ದಾರೆ ಎನ್ನುವುದನ್ನು ನೋಡಲು ಕೆಂಡಸಂಪಿಗೆ ಸೀರಿಯಲ್ ಸಂತೆ ನೋಡಬೇಕು. ಸದ್ಯ ರಿಲೀಸ್​ ಆಗಿರೋ ಪ್ರೊಮೋದಲ್ಲಿ ಪ್ರತಾಪ್​ ನಗುವುದನ್ನು ಮಾತ್ರ ನೋಡಬಹುದು.

ಇದೇ ಸಮಯದಲ್ಲಿ, ಬಿಗ್​ಬಾಸ್​ ಸ್ಪರ್ಧಿಗಳಿಗೆ ಫ್ಯಾನ್ಸ್​  ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ನೀವೆಲ್ಲಾ ತುಂಬಾ ಇಷ್ಟ ಎಂದಿದ್ದಾರೆ. ಇದರಲ್ಲಿ ಗಮನ ಸೆಳೆದಿರುವುದು ಹೊಸಪೇಟೆಯ ಯುವತಿಯರು ಡ್ರೋನ್​ ಪ್ರತಾಪ್​ ಅವರಿಗೆ, ನೀವು ಎಂದರೆ ತುಂಬಾ ಇಷ್ಟ. ನಿಮ್ಮನ್ನು ಮದುವೆಯಾಗಲು ಬಂದಿದ್ದೇವೆ ಎಂದಿದ್ದಾರೆ. ಇದನ್ನು ಕೇಳಿ ಡ್ರೋನ್​ ಪ್ರತಾಪ್​ ನಾಚಿ ನೀರಾಗಿದ್ದಾರೆ. ಯೇ ಯೇ ಎನ್ನುತ್ತಲೇ ಯುವತಿಯರಿಂದ ದೂರ ಸರಿಸಲು ನೋಡಿದ್ದು, ಸಭಿಕರು ಬಿದ್ದೂ ಬಿದ್ದೂ ನಕ್ಕಿದ್ದಾರೆ. ಇದರ ಪ್ರೊಮೋ ಅನ್ನು ಕಲರ್ಸ್​ ಕನ್ನಡ ವಾಹಿನಿ ಬಿಡುಗಡೆ ಮಾಡಿತ್ತು.  ಈಚೆಗಷ್ಟ ಡ್ರೋನ್​ ಪ್ರತಾಪ್​ ಆಟೋ ಓಡಿಸಿದ್ದು, ಅದರ ವಿಡಿಯೋ ಅನ್ನು ಫ್ಯಾನ್ಸ್​ ಪೇಜ್​ ಶೇರ್​ ಮಾಡಿಕೊಂಡಿತ್ತು. ಆಟೋ ರಾಜ ಶಂಕರ್​ನಾಗ್​ ಅವರಿಗೆ ಜೈ ಎನ್ನುವ ಮೂಲಕ ಆಟೋ ಓಡಿಸುವ ಎಲ್ಲರಿಗೂ ಪ್ರತಾಪ್​ ಶುಭ ಹಾರೈಸಿದ್ದರು. ಇವರ ಈ ವಿಡಿಯೋಗೆ ಸಹಸ್ರಾರು ಮಂದಿ ಕಮೆಂಟ್​ ಮಾಡಿದ್ದು, ಹಲವರು ಮೆಚ್ಚುಗೆ ಸೂಚಿಸಿದ್ದರು. ನಿಮ್ಮ ಒಳ್ಳೆಯ ಗುಣ ನಿಮ್ಮನ್ನು ಕಾಪಾಡುತ್ತದೆ ಎಂದಿದ್ದರು. ಯಾರು ಏನೇ ಅಂದರೂ ಕ್ಯಾರೇ ಮಾಡಬೇಡಿ ಎಂದೆಲ್ಲಾ ಹೇಳಿದ್ದರು. ಆದರೆ ಒಂದಿಷ್ಟು ಮಂದಿ ಇವರ ಕಾಲೆಳೆದಿದ್ದರು.  ಇದಕದ್ಕೂ ಮೊದಲು  ಡ್ರೋನ್​ ಪ್ರತಾಪ್​ ಮಹಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು.  ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ  ಮಹದೇಶ್ವರ ಬೆಟ್ಟಕ್ಕೆ  ಪ್ರತಾಪ್ ತೆರಳಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಅವರು,  ಅನ್ನ ಪ್ರಸಾದವನ್ನು ಬರಿಯ ನೆಲದ ಮೇಲೆ ತಿಂದು ಹರಕೆ ತೀರಿಸಿದ್ದರು. ತಟ್ಟೆಯ ಸಹಾಯವಿಲ್ಲದೆ, ನೆಲದ ಮೇಲೆಯೇ ಸೇವಿಸಿದ್ದಾರೆ. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಸೌಂಡ್​ ಮಾಡಿತ್ತು. 

ಮದ್ವೆಯಾಗ್ತೇನಂತ ಪ್ರತಾಪ್​ ಬಳಿ ಹೊಸಪೇಟೆ ಯುವತಿಯರು! ನಾಚಿ ನೀರಾದ ಡ್ರೋನ್​ ಮಾಡಿದ್ದೇನು ನೋಡಿ...
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Bigg Boss Kannada: ಎಲ್ಲಿ ನೋಡಿದ್ರೂ ಗಿಲ್ಲಿ ಗಿಲ್ಲಿ, ಪಿಆರ್‌ ಒಗಳಿಗೆ ವಿನಯ್ ಗೌಡ ಹೇಳಿದ್ದೇನು?
ಅನೇಕರ ಆಸೆ, ಹಾರೈಕೆ ಈಡೇರಿತು; Anchor Anushree-Roshan ಜೋಡಿಗೆ ಯಾರೂ ದೃಷ್ಟಿ ಹಾಕ್ಬೇಡಿ..ಪ್ಲೀಸ್