ಧಾರಾವಾಹಿಯ ಬಗ್ಗೆ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಅರ್ಯವರ್ಧನ್?

Published : Oct 27, 2019, 02:24 PM ISTUpdated : Oct 27, 2019, 02:32 PM IST
ಧಾರಾವಾಹಿಯ ಬಗ್ಗೆ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಅರ್ಯವರ್ಧನ್?

ಸಾರಾಂಶ

'ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಬೆಳ್ಳಿ ತೆರೆಯಿಂದ ಕಿರುತೆರೆಗೆ ಬಂದಿರುವ ಅರ್ಯವರ್ಧನ್ ಅಲಿಯಾಸ್ ಅನಿರುದ್ಧ್ ತಮ್ಮ ಅಭಿಮಾನಿಯಲ್ಲಿ ಕ್ಷಮೆಯಾಚಿಸಿದ್ದಾರೆ. ಹಾಗೂ ಫೇಸ್‌ಬುಕ್‌ನಲ್ಲಿ ಒಂದು ಲಕ್ಷ ಫಾಲೋವರ್ಸ್‌ ಪಡೆದಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಸೀರಿಯಲ್ ಲೋಕದಲ್ಲೇ ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ಮನೋರಂಜಿಸುತ್ತಾ ಟಾಪ್ ರೆಟೆಡ್‌ ಧಾರಾವಾಹಿ ಸ್ಥಾನ ಪಡೆದುಕೊಂಡಿರುವ 'ಜೊತೆ ಜೊತೆಯಲಿ' ಈಗಾಗಲೆ ಸಾಕಷ್ಟು ಫ್ಯಾನ್ ಪೇಜ್‌ಗಳನ್ನು ಹೊಂದಿದೆ. ಜೊತೆ ಜೊತೆಯಲಿ ಹೆಸರಲ್ಲಿ ಕೆಲವೊಂದು ಫೇಕ್ ಖಾತೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದರ ಬಗ್ಗೆ ಅನಿರುದ್ಧ ತಮ್ಮ ಫೇಸ್ ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಹೆಣ್ಣು ಮಗಳ ಅಭಿಮಾನಕ್ಕೆ ಸೋತು ವೇದಿಕೆ ಮೇಲೆ ಅಪ್ಪಿ ಧನ್ಯವಾದ ಹೇಳಿದ ಆರ್ಯವರ್ಧನ್!

ಅರ್ಯವರ್ಧನ್ ಪಾತ್ರ ಮಾಡುತ್ತಿರುವ ಅನಿರುದ್ಧ್ ಬಹುಬೇಗ ಕಿರುತೆರೆಯಲ್ಲಿ ಯಶಸ್ಸು ಕಂಡು ಜನರ ಪ್ರೀತಿ ಗಿಟ್ಟಿಸಿಕೊಂಡವರು. ಅಭಿಮಾನಿಗಳಿಗೆ ಇನ್ನು ಹೆಚ್ಚು ಹತ್ತಿರವಾಗಲು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಧಾರಾವಾಹಿಯ ಕುತೂಹಲಕಾರಿ ಸಂಗತಿಗಳು, ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳ ಮನವಿಗೆ ಸ್ಪಂದಿಸುತ್ತಾರೆ.

ಕೆಲದಿನಗಳ ಹಿಂದೆ ಅನಿರುದ್ಧ್ ಅಭಿಮಾನಿಗಳಿಗೆ ಥ್ಯಾಂಕ್ಯೂ ನೋಟ್ ಬರೆದಿದ್ದರು.

ನಿಜ ಜೀವನದ ನಾಲ್ವರು ಅಮ್ಮಂದಿರ 'ಜೊತೆ ಜೊತೆಯಲಿ' ಆರ್ಯವರ್ಧನ್!

'ಎಲ್ಲಾ ನನ್ನ ಪ್ರೀತಿಯ ಸ್ನೇಹಿತರಿಗೆ ಸಮಸ್ಕಾರ. ನಿಮ್ಮೆಲ್ಲರ ಪ್ರೀತಿಯಂದ ನನ್ನ ಈ ಅಧಿಕೃತ ಪೇಜ್ ಮೂಲಕ ಒಂದು ಲಕ್ಷ ಸ್ನೇಹಿತರ ಪ್ರೀತಿಯನ್ನು ನಾನು ಪಡೆದಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ನಾ ಸದಾ ಚಿರುಋಣಿ. ಇಂದು ಒಂದೇ ದಿನ ಮೂರು ಸಾವಿರಕ್ಕೂ ಹೆಚ್ಚು ಮೆಸೆಜ್‌ಗಳು ಬಂದಿವೆ. ನನಗೆ ಬಿಡುವಾದಾಗಲೆಲ್ಲಾ ನಿಮಗೆ ಉತ್ತರಿಸಲು ಪ್ರಯತ್ನಿಸುತ್ತೇನೆ. ಆದರೂ ಸಮಯ ಸಾಲದು. ದಯಮಾಡಿ ಕ್ಷಮೆ ಇರಲಿ. ಮೆಸೆಜ್ ಗಳ ಮೂಲಕ, ಕಮೆಂಟ್ ಗಳ ಮೂಲಕ ನನಗೆ ಪ್ರೀತಿ ತೋರಿದ ಎಲ್ಲರಿಗೂ ಹಾಗೂ ಜೊತೆಜೊತೆಯಲಿ ಧಾರಾವಾಹಿಯನ್ನು ಇಷ್ಟಪಟ್ಟು ನೋಡುವ ಮೂಲಕ ಪ್ರೋತ್ಸಾಹಿಸುತ್ತಿರುವ ಎಲ್ಲಾ ನನ್ನ ತಾಯಂದಿರಿಗೂ, ಸಹೋದರ ಸಹೋದರಿಯರಿಗೂ, ಜೀ ವಾಹಿನಿ ಹಾಗೂ ನನ್ನ ಪ್ರೀತಿಯ ಜೊತೆಜೊತೆಯಲಿ ಸಂಪೂರ್ಣ ತಂಡಕ್ಕೂ ನನ್ನ ಮನಃಪೂರ್ವಕ ಧನ್ಯವಾದಗಳು.. ನಿಮ್ಮ ಪ್ರೀತಿ ಸದಾ ಹೀಗೆ ಇರಲಿ.. ಸದಾ ನಿಮ್ಮವ, ನಿಮ್ಮ #Anirudh' ಎಂದು ಬರೆದುಕೊಂಡಿದ್ದಾರೆ.

ಆರ್ಯವರ್ಧನ್ ಜೊತೆ ಲವ್ವಲ್ಲಿ ಬಿದ್ದ ಅನು; ಕುತೂಹಲ ಮೂಡಿಸಿದೆ ಪ್ರಪೋಸ್!

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಲಕ್ಷಾಂತರ ಮಂದಿ ಹೃದಯ ಕದ್ದ ಸೀತಾರಾಮ 'ಸಿಹಿ' ಇವಳೇನಾ? ಫ್ಯಾನ್ಸ್​ ಗರಂ- ತಿರುಗಿಬಿದ್ದದ್ದು ಯಾಕೆ?
ಒಂದೇ ಪ್ರಶ್ನೆ, ಅಲ್ಲೇ ಡ್ರಾ ಅಲ್ಲೇ ಬಹುಮಾನ; Rakshita Shetty ಮುಖವಾಡ ಕಳಚೋಯ್ತು