ಮತ್ತೆ ಶುರುವಾಗುತ್ತಿದೆ 'ಸರಿಗಮಪ' ಚಾಂಪಿಯನ್‌ಶಿಪ್‌!

By Suvarna NewsFirst Published Sep 17, 2021, 2:15 PM IST
Highlights

ನಾದಬ್ರಹ್ಮ ನೇತೃತ್ವದಲ್ಲಿ ಮತ್ತೆ ಶುರುವಾಗುತ್ತಿದೆ ಸಂಗೀತ ರಿಯಾಲಿಟಿ ಶೋ. ಸರಿಗಮಪ ಚಾಂಪಿಯನ್‌ಶಿಪ್....
 

ಜೀ ಕನ್ನಡ ವಾಹಿನಿಯಲ್ಲಿ ಸಂಗೀತ ರಿಯಾಲಿಟಿ ಶೋ ಮತ್ತೊಮ್ಮೆ ಶುರುವಾಗುತ್ತಿದೆ. ನಾದಬ್ರಹ್ಮ ಹಂಸಲೇಖ ಅವರ ನೇತೃತ್ವದಲ್ಲಿ ಚಾಂಪಿಯನ್‌ಶಿಪ್‌ ಆರಂಭವಾಗಲಿದ್ದು, ಸೆಪ್ಟೆಂಬರ್ 18ರಿಂದ ಶುರುವಾಗುತ್ತಿದೆ. ಈಗಾಗಲೇ ಮಹಾ ಪ್ರೋಮೋ ಬಿಡುಗಡೆಯಾಗಿದೆ. 

'ಸ್ವರ ಲೋಕದ ಹೊಸ ಮನ್ವಂತರ, ಅದ್ಧೂರಿ ವೇದಿಕೆಯಲ್ಲಿ ಗಾನ ಸಮರ! ಸರಿಗಮಪ ಚಾಂಪಿಯನ್ ಶಿಪ್, ಇದೇ ಶನಿವಾರದಿಂದ ಶನಿ-ಭಾನು ರಾತ್ರಿ 7.30ಕ್ಕೆ' ಎಂದು ಬರೆದು ಜೀ ಕನ್ನಡ ಪೇಜ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.  ಒಟ್ಟು 16 ಸೀಸನ್‌ಗಳು ನಡೆದಿದೆ,  ಈ 17ನೇ ಸೀಸನ್‌ ಓಪನಿಂಗ್‌ನಲ್ಲಿ ಪ್ರತಿಯೊಬ್ಬ ಜ್ಯೂರಿಯೂ ಹಾಡುವ ಮೂಲಕ ಸೀಸನ್ ಆರಂಭಿಸಲಿದ್ದಾರೆ.. 

ಮತ್ತೆ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟ ಗಾಯಕ ಹೇಮಂತ್!

ಪ್ರತಿ ಸೀಸನ್‌ ನಡೆದುಕೊಂಡು ಬಂದಂತೆ, ಹಂಸಲೇಖ ಅವರೊಂದಿಗೆ ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಗಾಗಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿ ಹಿನ್ನಲೆ ಗಾಯಕ ಹೇಮಂತ್ ಸರಿಗಮಪ ಶೋ ಮೂಲಕ ಕಿರುತೆರೆಗೆ ಕಮ್‌ ಬ್ಯಾಕ್ ಮಾಡುತ್ತಿದ್ದಾರೆ. 

ಕಳೆದ ಸೀಸನ್‌ನಲ್ಲಿ ಗಾಯಕ ಶ್ರೀನಿಧಿ ಶಾಸ್ತ್ರಿ ವಿಜೇತರಾಗಿದ್ದು, ಟ್ರೋಫಿ ಜೊತೆಗೆ 10 ಲಕ್ಷ ರೂ. ಹಣ ಪಡೆದು ಕೊಂಡಿದ್ದಾರೆ. ಕಂಬದ ರಂಗಯ್ಯ ಎರಡನೇ ಸ್ಥಾನ ಪಡೆದು ಕೊಂಡಿದ್ದಾರೆ. ಪ್ರತಿ ಸೀಸನ್‌ನಲ್ಲಿ ಭಾಗವಹಿಸುವ ಸ್ಪರ್ಧಿಗಳು ದೊಡ್ಡ ಅವಕಾಶಗಳನ್ನು ಪಡೆದುಕೊಂಡಿದ್ದಾರೆ, ಕೆಲವರು ಸಿನಿಮಾಗಳಲ್ಲಿಯೂ ಹಾಡಿದ್ದಾರೆ.

 

 
 
 
 
 
 
 
 
 
 
 
 
 
 
 

A post shared by Zee Kannada (@zeekannada)

click me!