
ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಯಾರಿಗೆ ತಾನೆ ಗೊತ್ತಿಲ್ಲ. ಕನ್ನಡದ ಸಂಗೀತದ ಲೋಕದಲ್ಲಿಯೇ ಹೊಸ ಅಧ್ಯಾಯಗಳನ್ನು ಬರೆದುಕೊಂಡು ಮುಂದೆ ಸಾಗುತ್ತಿದೆ.
ಗಾನ ಗಾರುಡಿಗ, ನಾದಬ್ರಹ್ಮ ಹಂಸಲೇಖ, ಮೆಲೋಡಿ ಮಾಸ್ಟರ್ ರಾಜೇಶ್ ಕೃಷ್ಣನ್, ಚರಿತ್ರೆ ಸೃಷ್ಟಿಸಿದ ಗಾಯಕ ವಿಜಯ್ ಪ್ರಕಾಶ್, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ..ಇವರೊಂದಿಗೆ ಅನುಶ್ರೀ.. ಹೌದು ಸರಿಗಮಪ ಸೀಸನ್ 17ರ ಮೆಗಾ ಆಡಿಶನ್ ಮೂಲಕ ಆರಂಭವಾಗಿದೆ. ಜೀವನದ ಜ್ಞಾನ ಸಂಪಾದನೆ ಮಾಡಿರುವ ಹಿರಿಯ 70 ವರ್ಷದ ಗೋವರ್ಧನ್ ಈ ಬಾರಿಯ ಪ್ರಮುಖ ಆಕರ್ಷಣೆ.
ಕನ್ನಡದ ಗಡಿ ದಾಟಿ ಹವಾ ಎಬ್ಬಿಸಿದ ಜೊತೆಜೊತೆಯಲಿ
ಸರಿಗಮಪ ಸಾಧನೆಗಳು ಇಲ್ಲಿಗೆ ನಿಲ್ಲುವುದಿಲ್ಲ. ಹೊಸದೊಂದು ಆಯಾಮಕ್ಕೂ ಸರಿಗಮಪ ಮುನ್ನುಡಿ ಬರೆದಿದೆ. ಬೆಂಗಳೂರಿನಿಂದ ಮಲೆಮಹದೇಶ್ವರ ಬೆಟ್ಟ, ಸಾಂಸ್ಕೃತಿಕ ನಗರಿ ಮೈಸೂರು ಮತ್ತು ಹುಬ್ಬಳ್ಳಿಗೆ ಉಚಿತವಾಗಿ ಬಸ್ ಪ್ರಯಾಣ ಏರ್ಪಡಿಸಲಾಗಿತ್ತು. ಜನರು ಸಿಕ್ಕ ಅವಕಾಶದಲ್ಲಿ ಸರಿಗಮಪ ಸವಿ ಸವಿದರು. ಇದು ಪಕ್ಕಾ ಒಂದು ಮ್ಯೂಸಿಕಲ್ ಜರ್ನಿ...ಹಾಂ.. ಕಾಯ್ತಾ ಇರಿ ಈ ಬಸ್ ಮುಂದಿನ ಸಾರಿ ನಿಮ್ಮ ಊರಿಗೂ ಬರಬಹುದು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.