ಮಸೀದಿಗೆ ಭೇಟಿ ನೀಡಿ ಭಾತೃತ್ವದ ಮೆರೆದ ಗವಿ ಸಿದ್ದೇಶ್ವರ ಸ್ವಾಮೀಜಿ

ಮಸೀದಿಗೆ ಭೇಟಿ ನೀಡಿ ಭಾತೃತ್ವದ ಮೆರೆದ ಗವಿ ಸಿದ್ದೇಶ್ವರ ಸ್ವಾಮೀಜಿ

Published : Mar 22, 2022, 02:13 PM IST

ಕೊಪ್ಪಳದ ಗವಿಮಠದ ಪೀಠಾಧಿಪತಿಗಳಾದ ಗವಿಸಿದ್ದೇಶ್ವರ ಸ್ವಾಮೀಜಿ ಯಾವಾಗಲೂ ಇತರ ಸ್ವಾಮೀಜಿಯವರಿಗಿಂತ ಭಿನ್ನವಾಗಿಯೇ ಕೆಲಸ ಮಾಡುತ್ತಾರೆ. ಈಗ ಅಂತಹದ್ದೆ ಕೆಲಸವೊಂದನ್ನು ಮಾಡಿದ್ದಾರೆ. ಇದು ಒಂದು ರೀತಿಯಲ್ಲಿ ಇಡೀ ಸಮಾಜಕ್ಕೆ ಮಾದರಿಯಾಗುವಂಥ ಹಾಗೂ ಸಮಾಜದಲ್ಲಿ ಭಾವೈಕ್ಯತೆ ಸಾರುವಂಥ ಕೆಲಸ. ಈ ಬಾರಿ ಅವರು ಮಸೀದಿಗೆ ಭೇಟಿ ನೀಡುವ ಮೂಲಕ‌ ತಾವು ಇತರರಿಗಿಂತ ಭಿನ್ನ ಎಂದು ತೋರಿಸಿಕೊಟ್ಟಿದ್ದಾರೆ.

 ಕೊಪ್ಪಳ(Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಗವಿಸಿದ್ದೇಶ್ವರ ಸ್ಚಾಮೀಜಿ(Gavi Siddeshwar Swamiji)ಗಳ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿದಿನ ಸಂಜೆ ಪ್ರವಚನ ಕಾರ್ಯಕ್ರಮ ಜರಗುತ್ತಿದೆ.‌ ಇದರ ಮದ್ಯೆ ಪ್ರತಿದಿನ ಒಂದೊಂದು ಹಳ್ಳಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಪಾದಯಾತ್ರೆ ಮಾಡುತ್ತಾರೆ. ಈ  ಗವಿಸಿದ್ದೇಶ್ವರ ಸ್ವಾಮೀಜಿ ಹಿರೇವಂಕಲಕುಂಟಾ ಗ್ರಾಮದ ಜುಮ್ಮಾ ಮಸೀದಿ(masjid)ಗೆ ಭೇಟಿ‌  ನೀಡಿ ಸೌಹಾರ್ದತೆ ಮೆರೆದಿದ್ದಾರೆ.

 ಗವಿಸಿದ್ದೇಶ್ವರ ಸ್ವಾಮೀಜಿ ಮಾತುಗಳೆಂದರೆ ಸಾಕು, ಅವುಗಳ ತೂಕ ಹೆಚ್ಚು.‌ ಅವರು ಮಾತನಾಡುವ ಪ್ರತಿಯೊಂದು ಮಾತುಗಳು ಸಹ ಎಂತವರನ್ನು ಒಂದು ಕ್ಷಣ ಮಂತ್ರಮುಗ್ಧಗೊಳಿಸುತ್ತವೆ. ಮಸೀದಿಗೆ ಭೇಟಿ ನೀಡಿದ್ದ ವೇಳೆಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಮುಸ್ಲಿಂ ಸಮುದಾಯದವರು ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಗವಿಸಿದ್ದೇಶ್ವರ ಸ್ವಾಮೀಜಿಗಳು ಭೂಮಿಯ ಮೇಲೆ ಬದುಕಿರುವ ಜೀವರಾಶಿಗಳಲ್ಲಿ ಮಾನವೀಯತೆ ಅತ್ಯಂತ ಶ್ರೇಷ್ಠವಾದದ್ದು, ಮನುಷ್ಯನಲ್ಲಿ ಭೇದ- ಭಾವ ಇರಬಾರದು. ಸದಾ ಒಳ್ಳೆಯ ಕಾರ್ಯಗಳಲ್ಲಿ ತೊಡಗಬೇಕೆಂದರು. ಜೊತೆಗೆ ಮನುಷ್ಯರಾದವರು ಸದಾ ತ್ಯಾಗದಲ್ಲಿ ತೊಡಗಿರಬೇಕು, ದಯಾ-ಕರುಣೆಯಿಂದ ಬಾಳಿದರೆ ಅದುವೇ ಸ್ವರ್ಗ. ಕೆಲವು ದಿನಗಳ ಹಿಂದೆ ದೇಶದಲ್ಲಿ ಭೇದ- ಭಾವ ಹರಡುವ ವಾತಾವರಣ ಇತ್ತು,ಈ ರೀತಿಯ ಬೆಳವಣಿಗೆಗೆ ಅವಕಾಶ ಕೊಡದೇ ಪ್ರತಿಯೊಬ್ಬರೂ ಸಹೋದರರಂತೆ ಜೀವಿಸಬೇಕೆಂದರು ಕರೆ ನೀಡಿದರು.

Food remedies: ಜಾತಕದ ದುರ್ಬಲ ಗ್ರಹಕ್ಕೆ ಬಲ ತುಂಬಲು ಈ ಆಹಾರ ಸೇವಿಸಿ

 ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಧರ್ಮ ಧರ್ಮಗಳ ನಡುವೆ ಗಲಭೆಗಳಾಗುತ್ತಿರುವ ಈ ಸಂದರ್ಭದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಹಿರೇವಂಕಲಕುಂಟಾದ ಜುಮ್ಮಾ ಮಸೀದಿಗೆ ಭೇಟಿ‌ ನೀಡುವ ಮೂಲಕ ಸೌಹಾರ್ದತೆ ಮೆರೆದಿರುವುದು ನಿಜಕ್ಕೂ ಅನುಕರಣಿಯವೇ ಸರಿ.

25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
Read more