ವಾಹನ ಸವಾರರಿಗೆ ಕೊರೋನಾ ಜಾಗೃತಿ, ಬೆಂಗಳೂರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ!

Mar 20, 2020, 6:13 PM IST

ಬೆಂಗಳೂರು(ಮಾ.20): ಕೊರೋನಾ ಸೋಂಕು ಹರಡದಂತೆ ತಡೆಯಲು ಸರ್ಕಾರ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿದ್ದರು. ಟ್ರಾಫಿಕ್‌ನಲ್ಲಿ ನಿಂತು ವಾಹನ ಸವಾರರಿಗೆ ಕೊರೋನಾ ವೈರಸ್ ಕುರಿತು ತೆಗೆದುಕೊಳ್ಳಬೇಕಾದ ಮುನ್ನಚ್ಚೆರಿಕೆ ಕ್ರಮಗಳನ್ನು ಹೇಳಿದರು.