ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Dec 21, 2024, 06:29 PM IST

ಆರು ಜನರ ಬಲಿ ಪಡೆದ ನೆಲಮಂಗಲದಲ್ಲಿ ನಡೆದ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ  ಬೆಂಗಳೂರು ತುಮಕೂರು ಎನ್ ಎಚ್ 48ರ ತಿಪ್ಪಗೊಂಡನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೋಲ್ವೋ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರಿನಲ್ಲಿದ್ದ ಒಟ್ಟು ಆರು ಜನ ದಾರುಣವಾಗಿ ಸಾವನ್ನಪ್ಪಿದ್ದರು. ಈ ಭಯಾನಕ ಘಟನೆಯ ವೀಡಿಯೋ ಈಗ ವೈರಲ್ ಆಗುತ್ತಿದೆ. ಈ ದುರಂತದಲ್ಲಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ ಅವರ ಹೆಂಡತಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಜೀವ ಕಳೆದುಕೊಂಡಿದ್ದಾರೆ. 

ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಈಚರ್‌ ಕ್ಯಾಂಟರ್‌ ಹೋಗುತ್ತಿತ್ತು. ಇದೇ ಕ್ಯಾಂಟರ್‌ನ ಹಿಂದೆ ಚಂದ್ರಮ್‌ ಅವರ ವೋಲ್ವೋ ಕಾರು ಹೋಗುತ್ತಿತ್ತು. ಇನ್ನು ಪಕ್ಕದ ರಸ್ತೆಯಲ್ಲಿ  ಬೆಂಗಳೂರು ಕಡೆಗೆ ಕಂಟೈನರ್ ಲಾರಿಯೊಂದು ವೇಗವಾಗಿ ಹೋಗುತ್ತಿತ್ತು. ನಿಯಂತ್ರಣ ತಪ್ಪಿದ ಕಂಟೇನರ್‌ ಚಾಲಕ ರಸ್ತೆಯ ಮಧ್ಯದ ಡಿವೈಡರ್ ಮೇಲೆ ಗಾಡಿ ಹತ್ತಿಸಿದ್ದಾರೆ. ಪಕ್ಕದ ರಸ್ತೆಗೆ ಇಳಿದ ಕಂಟೇನರ್‌ ತುಮಕೂರು ಕಡೆ ಹೋಗ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್‌ಗೆ ಢಿಕ್ಕಿಯಾದ ಕಂಟೇನರ್‌, ಅದರ ಹಿಂದೆಯೇ ಬರುತ್ತಿದ್ದ ವೋಲ್ವೋ ಕಾರ್‌ನ ಮೇಲೆ ಏಕಾಏಕಿ ಬಿದ್ದಿದೆ. ಕಂಟೇನರ್‌ ಬಿದ್ದ ಪರಿಣಾಮಕ್ಕೆ ಇಡೀ ವೋಲ್ವೋ ಕಾರ್‌ ಅಪ್ಪಚ್ಚಿಯಾಗಿದೆ. ಆಗ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಲಾರಿ ಹಾಗೂ ಕ್ಯಾಂಟರ್ ಚಾಲಕ ಇಬ್ಬರಿಗೂ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!
Read more