ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Dec 21, 2024, 06:29 PM IST

ಆರು ಜನರ ಬಲಿ ಪಡೆದ ನೆಲಮಂಗಲದಲ್ಲಿ ನಡೆದ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ  ಬೆಂಗಳೂರು ತುಮಕೂರು ಎನ್ ಎಚ್ 48ರ ತಿಪ್ಪಗೊಂಡನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೋಲ್ವೋ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರಿನಲ್ಲಿದ್ದ ಒಟ್ಟು ಆರು ಜನ ದಾರುಣವಾಗಿ ಸಾವನ್ನಪ್ಪಿದ್ದರು. ಈ ಭಯಾನಕ ಘಟನೆಯ ವೀಡಿಯೋ ಈಗ ವೈರಲ್ ಆಗುತ್ತಿದೆ. ಈ ದುರಂತದಲ್ಲಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ ಅವರ ಹೆಂಡತಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಜೀವ ಕಳೆದುಕೊಂಡಿದ್ದಾರೆ. 

ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಈಚರ್‌ ಕ್ಯಾಂಟರ್‌ ಹೋಗುತ್ತಿತ್ತು. ಇದೇ ಕ್ಯಾಂಟರ್‌ನ ಹಿಂದೆ ಚಂದ್ರಮ್‌ ಅವರ ವೋಲ್ವೋ ಕಾರು ಹೋಗುತ್ತಿತ್ತು. ಇನ್ನು ಪಕ್ಕದ ರಸ್ತೆಯಲ್ಲಿ  ಬೆಂಗಳೂರು ಕಡೆಗೆ ಕಂಟೈನರ್ ಲಾರಿಯೊಂದು ವೇಗವಾಗಿ ಹೋಗುತ್ತಿತ್ತು. ನಿಯಂತ್ರಣ ತಪ್ಪಿದ ಕಂಟೇನರ್‌ ಚಾಲಕ ರಸ್ತೆಯ ಮಧ್ಯದ ಡಿವೈಡರ್ ಮೇಲೆ ಗಾಡಿ ಹತ್ತಿಸಿದ್ದಾರೆ. ಪಕ್ಕದ ರಸ್ತೆಗೆ ಇಳಿದ ಕಂಟೇನರ್‌ ತುಮಕೂರು ಕಡೆ ಹೋಗ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್‌ಗೆ ಢಿಕ್ಕಿಯಾದ ಕಂಟೇನರ್‌, ಅದರ ಹಿಂದೆಯೇ ಬರುತ್ತಿದ್ದ ವೋಲ್ವೋ ಕಾರ್‌ನ ಮೇಲೆ ಏಕಾಏಕಿ ಬಿದ್ದಿದೆ. ಕಂಟೇನರ್‌ ಬಿದ್ದ ಪರಿಣಾಮಕ್ಕೆ ಇಡೀ ವೋಲ್ವೋ ಕಾರ್‌ ಅಪ್ಪಚ್ಚಿಯಾಗಿದೆ. ಆಗ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಲಾರಿ ಹಾಗೂ ಕ್ಯಾಂಟರ್ ಚಾಲಕ ಇಬ್ಬರಿಗೂ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more