ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೋಲ್ವೋ ಕಾರಿನ ಮೇಲೆ ಕಂಟೈನರ್ ಬಿದ್ದ ಪ್ರಕರಣ: ನೆಲಮಂಗಲ ಅಪಘಾತ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Dec 21, 2024, 06:29 PM IST

ಆರು ಜನರ ಬಲಿ ಪಡೆದ ನೆಲಮಂಗಲದಲ್ಲಿ ನಡೆದ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ  ಬೆಂಗಳೂರು ತುಮಕೂರು ಎನ್ ಎಚ್ 48ರ ತಿಪ್ಪಗೊಂಡನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೋಲ್ವೋ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರಿನಲ್ಲಿದ್ದ ಒಟ್ಟು ಆರು ಜನ ದಾರುಣವಾಗಿ ಸಾವನ್ನಪ್ಪಿದ್ದರು. ಈ ಭಯಾನಕ ಘಟನೆಯ ವೀಡಿಯೋ ಈಗ ವೈರಲ್ ಆಗುತ್ತಿದೆ. ಈ ದುರಂತದಲ್ಲಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ ಅವರ ಹೆಂಡತಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಜೀವ ಕಳೆದುಕೊಂಡಿದ್ದಾರೆ. 

ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಈಚರ್‌ ಕ್ಯಾಂಟರ್‌ ಹೋಗುತ್ತಿತ್ತು. ಇದೇ ಕ್ಯಾಂಟರ್‌ನ ಹಿಂದೆ ಚಂದ್ರಮ್‌ ಅವರ ವೋಲ್ವೋ ಕಾರು ಹೋಗುತ್ತಿತ್ತು. ಇನ್ನು ಪಕ್ಕದ ರಸ್ತೆಯಲ್ಲಿ  ಬೆಂಗಳೂರು ಕಡೆಗೆ ಕಂಟೈನರ್ ಲಾರಿಯೊಂದು ವೇಗವಾಗಿ ಹೋಗುತ್ತಿತ್ತು. ನಿಯಂತ್ರಣ ತಪ್ಪಿದ ಕಂಟೇನರ್‌ ಚಾಲಕ ರಸ್ತೆಯ ಮಧ್ಯದ ಡಿವೈಡರ್ ಮೇಲೆ ಗಾಡಿ ಹತ್ತಿಸಿದ್ದಾರೆ. ಪಕ್ಕದ ರಸ್ತೆಗೆ ಇಳಿದ ಕಂಟೇನರ್‌ ತುಮಕೂರು ಕಡೆ ಹೋಗ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್‌ಗೆ ಢಿಕ್ಕಿಯಾದ ಕಂಟೇನರ್‌, ಅದರ ಹಿಂದೆಯೇ ಬರುತ್ತಿದ್ದ ವೋಲ್ವೋ ಕಾರ್‌ನ ಮೇಲೆ ಏಕಾಏಕಿ ಬಿದ್ದಿದೆ. ಕಂಟೇನರ್‌ ಬಿದ್ದ ಪರಿಣಾಮಕ್ಕೆ ಇಡೀ ವೋಲ್ವೋ ಕಾರ್‌ ಅಪ್ಪಚ್ಚಿಯಾಗಿದೆ. ಆಗ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಲಾರಿ ಹಾಗೂ ಕ್ಯಾಂಟರ್ ಚಾಲಕ ಇಬ್ಬರಿಗೂ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more