DK Shivakumar: ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ

DK Shivakumar: ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ

Published : Feb 16, 2024, 05:47 PM ISTUpdated : Feb 16, 2024, 05:48 PM IST

ಜನರ ಬದುಕನ್ನು ಕಟ್ಟಿಕೊಡುವ ಬಜೆಟ್ ಇದಾಗಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಯಾರೂ ಮಾಡಿಲ್ಲ. ನೀರಾವರಿ ಇಲಾಖೆಗೆ ಬಹಳ ಅನುದಾನ ಸಿಕ್ಕಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ 15ನೇ ಬಜೆಟ್ ದೇಶಕ್ಕೆ ಮಾದರಿಯಾಗಿದೆ. 3 ಲಕ್ಷ 71 ಸಾವಿರ ಕೋಟಿ ಬಜೆಟ್‌(Budget) ಮಂಡಿಸಲಾಗಿದೆ. ಈ ಬಜೆಟ್ ಆತ್ಮವಿಶ್ವಾಸ ಎಷ್ಟಿತ್ತು ಅಂದ್ರೆ, ವಿಪಕ್ಷಗಳಿಗೆ(Opposition Parties) ಕೂರಲು ಆಗಿಲ್ಲ. ಇಷ್ಟು ಅಭಿವೃದ್ಧಿ ಮಾಡಿದ್ರಲ್ಲಾ ಅಂತ ಕೈ ಹೊಸಕಿಕೊಂಡು ಹೊರಗೆ ಹೋದ್ರು. 81ರಿಂದ ಅಸೆಂಬ್ಲಿಯಲ್ಲಿ ಇದ್ದೀನಿ‌. ಯಾವುದೇ ವಿಪಕ್ಷಗಳು ಆಡಳಿತ ಮಾಡಿದ್ದಾರೆ. ಯಾರೂ ಕೂಡ ಬಜೆಟ್ ಬಾಯ್ಕಾಟ್ ಮಾಡಿ ಹೊರಗೆ ಬಂದಿಲ್ಲ. ವಿಪಕ್ಷಗಳು ಸಭಾತ್ಯಾಗ ಮಾಡಿದ್ದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಡಿಸಿಎಂ ಡಿಕೆ ಶಿವಕುಮಾರ್‌(DK shivakumar) ಹೇಳಿದರು. ಸರ್ಕಾರಿ ನೌಕರರಿಗೆ ಸಂಬಳ ಕೊಡಬೇಕು, ಮಹಿಳೆಯರಿಗೆ 2 ಸಾವಿರ ಕೊಡಬೇಕು. ಮನೆಗೆ ವಿದ್ಯುತ್ ಶಕ್ತಿ ನೀಡಬೇಕು. ಎಲ್ಲೆಡೆ ಉಚಿತವಾಗಿ ಬಸ್‌ನಲ್ಲಿ ಓಡಾಡ್ತಿದ್ದಾರೆ ಅವರಿಗೆ ಅವಮಾನ ಮಾಡಿದ್ದಾರೆ. ರಾಜ್ಯದ ಜನತೆಗೆ ವಿಪಕ್ಷಗಳಿಂದ ಅವಮಾನ. ಬಿಜೆಪಿ, ಜೆಡಿಎಸ್‌ ಶಾಸಕರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ:  Farmers Protest in Delhi: ಡ್ರೋನ್ ಮೇಲೆ ಟೆನಿಸ್ ಬಾಲ್ ದಾಳಿ: ಪೊಲೀಸರ ತಂತ್ರಗಳಿಗೆ ಅನ್ನದಾತರ ಪ್ರತಿತಂತ್ರ..!

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more