ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ಮಂಡಿಸಲಿದ್ದು, ಈ ಬಜೆಟ್ ವರದಾನವಾಗುವುದೇ? ಎಂದು ಜನರು ಕಾತುರದಿಂದ ನೋಡುತ್ತಿದ್ದಾರೆ.
ಬೆಂಗಳೂರು (ಜ. 31): ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ಮಂಡಿಸಲಿದ್ದು, ಈ ಬಜೆಟ್ ವರದಾನವಾಗುವುದೇ? ಎಂದು ಜನರು ಕಾತುರದಿಂದ ನೋಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ದೇಶದ ಆರ್ಥಿಕತೆ, ಕೃಷಿ ವಲಯ, ಉದ್ಯೋಗ ವಲಯ ಸೇರಿದಂತೆ ನಾನಾ ಜನವರ್ಗಗಳಿಗೆ ಬಜೆಟ್ನಿಂದ ಸಾಕಷ್ಟು ನಿರೀಕ್ಷೆಯಿದೆ.
ಕೋವಿಡ್ ಸಾಂಕ್ರಾಮಿಕದ ಬಳಿಕ ಆಟೋಮೊಬೈಲ್, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವಲಯಗಳು ನೆಲಕಚ್ಚಿವೆ. ಪರಿಣಾಮ ಕೋಟ್ಯಂತರ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ಈ ವಲಯಗಳಲ್ಲಿ ಮತ್ತೆ ಉದ್ಯೋಗ ಸೃಷ್ಟಿಗಾಗಿ ಸರ್ಕಾರ ನಾನಾ ಕ್ರಮಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ಬಜೆಟ್ ಬೆನ್ನಲ್ಲೇ 5 ರಾಜ್ಯಗಳ ಚುನಾವಣೆ ನಡೆಯಲಿದೆ. ಹೀಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಮತ್ತು ಒಟ್ಟಾರೆ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಕೆಲ ಹೊಸ ಕ್ರಮಗಳನ್ನು ಸರ್ಕಾರ ಪ್ರಕಟಿಸಬಹುದು ಎಂಬ ನಿರೀಕ್ಷೆ ಇದೆ.