'ಮುಂಗಾರು ಮಳೆ'ಯಂತೆ ಮತ್ತೊಂದು ಹಿಟ್ ಕೊಡ್ತಾರಾ?: ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗಣೇಶ್ ಬಿಚ್ಚಿಟ್ಟ ಲವ್ ಸ್ಟೋರಿ

Aug 12, 2024, 4:41 PM IST

ಶ್ರೀನಿವಾಸರಾಜು ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಈಗಗಾಲೇ ಹಾಡುಗಳಿಂದಲೇ ಪ್ರೇಕ್ಷಕರನ್ನ ಸೆಳೆದಿದೆ. ಚಿತ್ರವು ಇದೇ ಆ.15ರಂದು ಬಿಡುಗಡೆಯಾಗುತ್ತಿದ್ದು, ಈ ಮಧ್ಯೆ ಕೃಷ್ಣಂ ಪ್ರಣಯ ಸಖಿ ಚಿತ್ರದ ನಾಯಕ ಗಣೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ಶ್ರೀನಿವಾಸ್ ರಾಜು ನಿರ್ದೇಶನದ ರೊಮ್ಯಾಂಟಿಕ್ ಎಂಟರ್ ಟೇನರ್ ಚಿತ್ರದಲ್ಲಿ ಬಹು ದೊಡ್ಡ ತಾರಾಗಣವೇ ಇದೆ. ಕೃಷ್ಣಂ ಪ್ರಣಯ ಸಖಿಯಲ್ಲಿ ಗಣೇಶ್ ಮಾಳವೀಕಾ ನಾಯರ್ ಮೋಡಿ ಮಾಡಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ ಚಿತ್ರವಿದು.