ಒಂಟಿ ಸಲಗದ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

Mar 14, 2023, 2:28 PM IST

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿರುವ ಘಟನೆ ಚಾಮರಾಜನಗರ-ತಮಿಳುನಾಡು ಗಡಿಯ ತಾಳವಾಡಿಯ ತಲಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆನೆಯನ್ನು ಕಂಡು ಕಕ್ಕಾಬಿಕ್ಕಿಯಾದ ಬೈಕ್ ಸವಾರ ಬೈಕ್ ಬಿಟ್ಟು ಕೆಳಗೆ ಬಿದ್ದಿದ್ದು,ಆನೆ ಹತ್ತಿರಕ್ಕೆ ಬರುತ್ತಿದ್ದಂತೆ ಓಡಿ ಹೋಗಿದ್ದಾನೆ.ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರ ಪಾರಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನು ಈ ದೃಶ್ಯವನ್ನು  ಎದುರುಗಡೆಯಿಂದ ಬರುತ್ತಿದ್ದ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.