Video: 5ನೇ ದಿನದ ಆಪರೇಷನ್ ಸಕ್ಸಸ್, ನರಭಕ್ಷಕ ಹುಲಿ ಕೊನೆಗೂ ಅರೆಸ್ಟ್..!

Oct 13, 2019, 3:56 PM IST

ಚಾಮರಾಜನಗರ, [ಅ.13]: ಜಿಲ್ಲೆಯ ಗುಂಡ್ಲುಪೇಟೆ ರೈತರ ಮೇಲೆ ದಾಳಿ ನಡೆಸಿ ನಾಪತ್ತೆಯಾಗಿದ್ದ ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹುಂಡೀಪುರದಲ್ಲಿ ವಾರದ ಹಿಂದೆ ಹುಲಿ ರೈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ  ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ನರಭಕ್ಷಕ ಹುಲಿ ಸೆರೆಗೆ ಆಪರೇಷನ್ ಸ್ಟಾರ್ಟ್

ಡ್ರೋನ್ ಕ್ಯಾಮೆರಾ ಕಣ್ಣಿಂದಲೂ ತಪ್ಪಿಸಿಕೊಂಡ ಹುಲಿ..!

ಅಕ್ಟೋಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: