Pushpa Movie: 'ಪುಷ್ಪ' ಚಿತ್ರವನ್ನು ಈ ಐದು ಕಲಾವಿದರು ರಿಜೆಕ್ಟ್ ಮಾಡಿದ್ರು!

Pushpa Movie: 'ಪುಷ್ಪ' ಚಿತ್ರವನ್ನು ಈ ಐದು ಕಲಾವಿದರು ರಿಜೆಕ್ಟ್ ಮಾಡಿದ್ರು!

Suvarna News   | Asianet News
Published : Jan 30, 2022, 01:57 PM IST

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ' ಚಿತ್ರವು ಬಿಡುಗಡೆಯಾಗಿ ಈಗಾಗಲೇ ಯಶಸ್ಸು ಗಳಿಸಿದೆ. ಈ ಸಿನಿಮಾದ ಕಥೆ ರೆಡಿಯಾದ ಬಳಿಕ 5 ಕಲಾವಿದರ ಬಳಿ ಮೊದಲು ಹೋಗಿತ್ತು. ಆದರೆ ಕೆಲ ಕಾರಣಗಳಿಂದ ಆ ಪಾತ್ರಗಳನ್ನು ಈ ಕಲಾವಿದರು ರಿಜೆಕ್ಟ್​ ಮಾಡಿದ್ದರಂತೆ. 

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಚಿತ್ರವು ಬಿಡುಗಡೆಯಾಗಿ ಈಗಾಗಲೇ ಯಶಸ್ಸು ಗಳಿಸಿದ್ದು, ಇತ್ತೀಚೆಗೆ ಒಟಿಟಿ ಫ್ಲಾಟ್‌ಫಾರ್ಮ್‌ ಅಮೇಜಾನ್ ಪ್ರೈಮ್‌ನಲ್ಲಿಯೂ 'ಪುಷ್ಪ' ಚಿತ್ರ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಈ ಸಿನಿಮಾದ ಕಥೆ ರೆಡಿಯಾದ ಬಳಿಕ 5 ಕಲಾವಿದರ ಬಳಿ ಮೊದಲು ಹೋಗಿತ್ತು. ಆದರೆ ಕೆಲ ಕಾರಣಗಳಿಂದ ಆ ಪಾತ್ರಗಳನ್ನು ಈ ಕಲಾವಿದರು ರಿಜೆಕ್ಟ್​ ಮಾಡಿದ್ದರಂತೆ. ಹೌದು! ಟಾಲಿವುಡ್ ನಟ ಮಹೇಶ್​ ಬಾಬು ಪುಷ್ಪರಾಜ್​ ಪಾತ್ರದಲ್ಲಿ ನಟಿಸಬೇಕಿತ್ತು. ಆದರೆ, ಕೆಲ ಕಾರಣಗಳಿಂದ ಈ ಕಥೆಯನ್ನು ಮಹೇಶ್​ ಬಾಬು ರಿಜೆಕ್ಟ್​ ಮಾಡಿದ್ದರಂತೆ.

ಸಂತೋಷ್‌ ಆನಂದ್‌ರಾಮ್‌ ನಿರ್ದೇಶನ Pan India ಚಿತ್ರದಲ್ಲಿ ಶಿವರಾಜ್‌ಕುಮಾರ್!

ಶ್ರೀವಲ್ಲಿ ಪಾತ್ರದಲ್ಲಿ ಸಮಂತಾ ನಟಿಸಬೇಕಿತ್ತು. ಆದರೆ ಅವರು ಈ ಪಾತ್ರವನ್ನು ಒಪ್ಪದೇ ಚಿತ್ರದ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡು ಸಖತ್​ ಸೌಂಡ್​ ಮಾಡಿದ್ದರು. 'ಊ ಅಂಟಾವಾ' ಹಾಡಿಗೆ ಬಾಲಿವುಡ್ ನಟಿ ದಿಶಾ ಪಟಾನಿ ಹಾಗೂ ನೋರಾ ಫತೇಹಿ ಅವರಿಗೂ ಆಫರ್​ ನೀಡಲಾಗಿತ್ತು. ಆದರೆ, ಇಬ್ಬರು ಕೂಡ ಈ ಆಫರ್​ ಅನ್ನು ರಿಜೆಕ್ಟ್​ ಮಾಡಿದ್ದರು​. ಮುಖ್ಯವಾಗಿ ಚಿತ್ರದ ಮತ್ತೊಂದು ಹೈಲೆಟ್​ ಅಂದರೆ, ಅದು ಮಲಯಾಳಂ ಸ್ಟಾರ್​ ನಟ ಫಹಾದ್ ಫಾಸಿಲ್ ಪಾತ್ರ. ಈ ಪಾತ್ರಕ್ಕೆ ಮೊದಲು ಕಾಲಿವುಡ್‌ ನಟ ವಿಜಯ್​ ಸೇತುಪತಿ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ, ಡೇಟ್​ ಸಮಸ್ಯೆಯಿಂದ ವಿಜಯ್​ ಸೇತುಪತಿ ಈ ಪಾತ್ರವನ್ನು ಕೈ ಬಿಟ್ಟಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more