70 ಲಕ್ಷಕ್ಕೂ ಅಧಿಕ ಹಣ ಖರ್ಚು: ಸಿನಿಮಾದ130 ಮಂದಿಗೆ ಚಿನ್ನದ ನಾಣ್ಯ ಕೊಟ್ಟ ಕೀರ್ತಿ ಸುರೇಶ್!

70 ಲಕ್ಷಕ್ಕೂ ಅಧಿಕ ಹಣ ಖರ್ಚು: ಸಿನಿಮಾದ130 ಮಂದಿಗೆ ಚಿನ್ನದ ನಾಣ್ಯ ಕೊಟ್ಟ ಕೀರ್ತಿ ಸುರೇಶ್!

Published : Mar 23, 2023, 12:12 PM IST

ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯಗಳನ್ನು 130 ಮಂದಿಗೆ ಕೀರ್ತಿ ಸುರೇಶ್ ನೀಡಿದ್ದಾರಂತೆ! ಸದ್ಯ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 'ದಸರಾ' ಸಿನಿಮಾದಲ್ಲಿ ವನ್ನೆಲಾ ಎಂಬ ಪಾತ್ರದಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದಾರೆ. 

ಇದ್ರೆ ಇಂಥಾ ನಟಿ ಇರಬೇಕಪ್ಪಾ ಎನ್ನುತ್ತಿದ್ದಾರೆ ತೆಲುಗು ಸಿನಿಮಾ ದಸರಾ ಟೀಂ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಮಾಡಿರೋ ಈ ಕೆಲಸಕ್ಕೆ ಇಡೀ ದಸರಾ ಟೀಂ  ವಾವಾ ಎನ್ನುತ್ತಿದೆ. ಮಹಾನಟಿ' ಕೀರ್ತಿ ಸುರೇಶ್ ಮೂಲತಃ ಮಲಯಾಳಂ ಚಿತ್ರರಂಗದವರಾದರೂ, ಟಾಲಿವುಡ್‌ನಲ್ಲೇ ಹೆಚ್ಚು ಸಕ್ರಿಯರಾಗಿದ್ದಾರೆ. ಅವರಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದ್ದು ಕೂಡ ತೆಲುಗಿನ 'ಮಹಾನಟಿ' ಸಿನಿಮಾ. ಇದೀಗ ಅವರು ತೆಲುಗಿನ 'ದಸರಾ' ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಿ ಈ ಸಿನಿಮಾದ ಹೀರೋ. ಸದ್ಯ ಒಂದು ವಿಚಾರಕ್ಕೆ ಕೀರ್ತಿ ಸುರೇಶ್ ಸಖತ್ ಸುದ್ದಿಯಲ್ಲಿದ್ದಾರೆ. 

ಹೌದು, ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯಗಳನ್ನು 130 ಮಂದಿಗೆ ಕೀರ್ತಿ ಸುರೇಶ್ ನೀಡಿದ್ದಾರಂತೆ! ಸದ್ಯ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 'ದಸರಾ' ಸಿನಿಮಾದಲ್ಲಿ ವನ್ನೆಲಾ ಎಂಬ ಪಾತ್ರದಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದಾರೆ. ಇದೊಂದು ಡಿಗ್ಲಾಮರಸ್ ಪಾತ್ರ. ಈ ಸಿನಿಮಾದ ತಂಡದ ಮೇಲೆ ಕೀರ್ತಿಗೆ ಅದೇನೋ ವಿಶೇಷ ಪ್ರೀತಿ. ಹಾಗಾಗಿ, ಚಿತ್ರಕ್ಕಾಗಿ ಕೆಲಸ ಮಾಡಿದ ಸುಮಾರು 130 ಜನರಿಗೆ 10 ಗ್ರಾಂ ತೂಕದ ಒಂದೊಂದು ಚಿನ್ನದ ನಾಣ್ಯಗಳನ್ನು ಕೀರ್ತಿ ಸುರೇಶ್ ನೀಡಿದ್ದಾರೆ ಎನ್ನಲಾಗಿದೆ. ಈ ಚಿನ್ನದ ನಾಣ್ಯಗಳ ಒಟ್ಟು ಮೌಲ್ಯ 70ರಿಂದ 75 ಲಕ್ಷ ರೂ. ಎಂದು ತಿಳಿದುಬಂದಿದೆ. ಚಿತ್ರೀಕರಣದ ಕೊನೆಯ ದಿನ ಕೀರ್ತಿ ಸುರೇಶ್ ಅವರು ಈ ಚಿನ್ನದ ನಾಣ್ಯಗಳನ್ನು ನೀಡಿದ್ದಾರಂತೆ. ತನಗೆ ದಸರಾ ಸಿನಿಮಾದಲ್ಲಿ ಬಂದ ಸಂಭಾವನೆಯನ್ನು ಇಡೀ ಚಿತ್ರತಂಡಕ್ಕಾಗಿಯೇ ಖರ್ಚು ಮಾಡಿದ ಏಕೈಕ ನಟಿ ಕೀರ್ತಿ ಸುರೇಶ್.

ನಿಜಕ್ಕೂ ನೀವು ರಿಯಲ್ ಲೈಫಲ್ಲೂ ಮಹಾನಟಿಯೇ ಎಂದು ಚಿತ್ರತಂಡ ಬಣ್ಣಿಸುತ್ತಿದೆ. 'ಕೀರ್ತಿ ಸುರೇಶ್ ಅವರು ಕೊನೆಯ ದಿನದ ಶೂಟಿಂಗ್ ವೇಳೆ ತುಂಬ ಭಾವುಕರಾಗಿದ್ದರು. ತಮಗೆ ಇಂಥದ್ದೊಂದು ಸಿನಿಮಾ ನೀಡಿದ್ದಕ್ಕಾಗಿ ಚಿತ್ರತಂಡದ ಸದಸ್ಯರಿಗೆ ಏನಾದರೂ ವಿಶೇಷವಾದದ್ದನ್ನು ನೀಡಬೇಕು ಎಂದು ಅವರು ಅಂದುಕೊಂಡಿದ್ದರು' ಎಂದು ಹೇಳಿದ್ದಾರೆ. ಕಳೆದ ವರ್ಷ ತೆರೆಕಂಡ 'ಸರ್ಕಾರು ವಾರಿ ಪಾಟ' ಸಿನಿಮಾ ಕೀರ್ತಿಗೆ ಬ್ರೇಕ್ ನೀಡಿತು. ಸದ್ಯ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. 'ದಸರಾ' ನಂತರ ಚಿರಂಜೀವಿ ಜೊತೆಗೆ 'ಭೋಳಾ ಶಂಕರ್' ಸಿನಿಮಾ ಮಾಡುತ್ತಿದ್ದಾರೆ. ಹಾಗೆಯೇ, ತಮಿಳಿನಲ್ಲಿ 'ಮಾಮಣ್ಣನ್', 'ಸೈರೆನ್', ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ 'ರಘು ತಾತ' ಹಾಗೂ 'ರಿವಾಲ್ವಾರ್ ರೀಟಾ' ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ಧಾರೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more