ಗಾಯಕಿ ಮಂಗ್ಲಿ ಮತ್ತೊಂದು ವಿವಾದ: ಕಾಳಹಸ್ತಿಯಲ್ಲಿ ದೇವರ ಮುಂದೆಯೇ ನೃತ್ಯ ಮಾಡಿ ವಿವಾದ!

ಗಾಯಕಿ ಮಂಗ್ಲಿ ಮತ್ತೊಂದು ವಿವಾದ: ಕಾಳಹಸ್ತಿಯಲ್ಲಿ ದೇವರ ಮುಂದೆಯೇ ನೃತ್ಯ ಮಾಡಿ ವಿವಾದ!

Published : Feb 25, 2023, 11:44 AM IST

ಈ ಶಿವರಾತ್ರಿ ದಿನದಂದೂ, ಅವರು ಹಾಡಿರುವ ಗೀತೆಯೊಂದು ರಿಲೀಸ್ ಆಗಿದೆ. ಅದೇ ಇದೀಗ ವಿವಾದಕ್ಕೆ ಕಾರಣವಾಗಿದೆ.  ಈ ಹಾಡು ದಕ್ಷಿಣದ ಕೈಲಾಸ ಎಂದೇ ಖ್ಯಾತಿಯಾಗಿರುವ ಶ್ರೀ ಕಾಳಹಸ್ತೀಶ್ವರಾಲಯದಲ್ಲಿ ಚಿತ್ರೀಕರಣವಾಗಿದ್ದು, ಮಂಗ್ಲಿ ದೇವಸ್ಥಾನದೊಳಗೆ ಕುಣಿದಿದ್ದಾರೆ.

ಗಾಯಕಿ ಮಂಗ್ಲಿ ಸೌತ್ ಸಿನಿ ದುನಿಯಾದಲ್ಲಿ ಸದ್ಯ ಸಿಕ್ಕಾಪಟ್ಟೆ ಜನಪ್ರಿಯ . ಹಾಗೆಯೆ. ಒಂದಿಲ್ಲೊಂದು ಕಾರಣದಿಂದಾಗಿ ಮಂಗ್ಲಿ ವಿವಾದಕ್ಕೀಡಾಗುತ್ತಿರುತ್ತಾರೆ. ಹಾಡಿನಲ್ಲಿ ಅವರು ಹೆಸರು ಎಷ್ಟು ಜನಪ್ರಿಯನೋ, ವಿವಾದದ ಕಾರಣದಿಂದಾಗಿಯೂ ಅಷ್ಟೇ ಫೇಮಸ್. ಇದೀಗ ಮಂಗ್ಲಿ ಹಾಡಿರುವ ಗೀತೆಯೊಂದು ವಿವಾದಕ್ಕೀಡಾಗಿದ್ದು, ಹಲವರು ಹಲವು ರೀತಿಯಲ್ಲಿ ಪ್ರಶ್ನೆ ಮಾಡುವಂತಾಗಿದೆ. ಅದರಲ್ಲೂ ಈ ಹಾಡನ್ನು ಶೂಟ್ ಮಾಡಿದವರ ವಿರುದ್ಧ ದೂರು ನೀಡುವಂತೆ ಆಗ್ರಹಿಸಲಾಗುತ್ತಿದೆ. ಮಂಗ್ಲಿ ಹಾಡು ವಿವಾದ ಎಬ್ಬಿಸೋಕೆ ಕಾರಣ ಇದೆ. ಪ್ರತಿ ಶಿವರಾತ್ರಿಯಂದು ಮಂಗ್ಲಿ ಹಾಡಿರುವ ಶಿವನ ಗೀತೆಯೊಂದು ಬಿಡುಗಡೆ ಆಗುತ್ತದೆ. 

ಅದನ್ನು ಅವರು ಸಂಪ್ರದಾಯ ಎನ್ನುವಂತೆ ಪಾಲಿಸಿಕೊಂಡು ಬರುತ್ತಿದ್ದಾರೆ. ಈ ಶಿವರಾತ್ರಿ ದಿನದಂದೂ, ಅವರು ಹಾಡಿರುವ ಗೀತೆಯೊಂದು ರಿಲೀಸ್ ಆಗಿದೆ. ಅದೇ ಇದೀಗ ವಿವಾದಕ್ಕೆ ಕಾರಣವಾಗಿದೆ.  ಈ ಹಾಡು ದಕ್ಷಿಣದ ಕೈಲಾಸ ಎಂದೇ ಖ್ಯಾತಿಯಾಗಿರುವ ಶ್ರೀ ಕಾಳಹಸ್ತೀಶ್ವರಾಲಯದಲ್ಲಿ ಚಿತ್ರೀಕರಣವಾಗಿದ್ದು, ಮಂಗ್ಲಿ ದೇವಸ್ಥಾನದೊಳಗೆ ಕುಣಿದಿದ್ದಾರೆ. ಅದಕ್ಕೆ ಹೇಳೋದು ದೇವರ ವಿಚಾರದಲ್ಲಿ ಬಹಳ ಜಾಗರೂಕರಾಗಿರಬೇಕು ಎಂದು. ಶ್ರೀಕಾಳಹಸ್ತಿಯಲ್ಲಿ ಒಂದು ಸಂಪ್ರದಾಯವಿದೆ. ಪ್ರತಿ ದಿನ ಸಂಜೆ 6 ಗಂಟೆಗೆ ರಾಹುಕೇತು ಪೂಜೆ ಮುಗಿದ ನಂತರ ಮಂಟಪ ಮುಚ್ಚಲಾಗುತ್ತದೆ. ಆದರೆ, ಮಂಗ್ಲಿ ಹಾಡಿನ ಚಿತ್ರೀಕರಣಕ್ಕಾಗಿ ವಿಶೇಷ ಮಂಟಪವನ್ನು ತೆರೆಯಲಾಗಿದೆ ಎನ್ನಲಾಗುತ್ತಿದೆ. 

ಅಲ್ಲದೇ, ದೇಗುಲದಲ್ಲಿ ಛಾಯಾಗ್ರಹಣಕ್ಕೆ ನಿರ್ಬಂಧವಿದ್ದರೂ, ಶೂಟಿಂಗ್‌ಗೆ ಅನುಮತಿ ಕೊಟ್ಟವರು ಯಾರು? ಎನ್ನುವ ಪ್ರಶ್ನೆ ಮೂಡಿದೆ. ಕಾಳಹಸ್ತಿ ಕಾಲಭೈರವ ದೇವಸ್ಥಾನದಲ್ಲಿ ಶೂಟ್ ಮಾಡಿರುವ ‘ಭಂ ಭಂ ಭೋಲೆ’ ಹಾಡು ರಿಲೀಸ್ ಆಗಿ ವೈರಲ್ ಕೂಡ ಆಗಿದೆ. ಸುದ್ದಲ ಅಶೋಕ್ ತೇಜ್ ಈ ಹಾಡನ್ನು ಬರೆದಿದ್ದು, ಕಾಲಭೈರವ ಸ್ವಾಮಿ ವಿಗ್ರಹದ ಮುಂದೆಯೇ ಮಂಗ್ಲಿ ನೃತ್ಯವನ್ನೂ ಮಾಡಿದ್ದಾರೆ. ಜೊತೆಗೆ ಮುಕ್ಕಂಟಿ ದೇವಸ್ಥಾನದಲ್ಲೂ ಸಹ ಮಂಗ್ಲಿ ಡಾನ್ಸ್ ಮಾಡಿದ್ದಾಳೆ. ಆ ಹಾಡೇ ವಿವಾದಕ್ಕೆ ಕಾರಣವಾಗಿದೆ. ಸ್ಥಳೀಯ ಜನರೂ ದೇವಾಲಯ ಭಕ್ತರೂ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟವರಿಗೂ ಚಿತ್ರೀಕರಣ ಮಾಡಿದವರ ವಿರುದ್ಧವೂ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more