ಕರ್ನಾಟಕ ಪೊಲೀಸ್ರಿಗೆ ಚಳ್ಳೇಹಣ್ಣು ತಿನ್ನಿಸಿದ ತೆಲುಗು ನಟಿ: ಸಿಕ್ಕಿಬಿದ್ದಿದ್ದೇಗೆ...

ಕರ್ನಾಟಕ ಪೊಲೀಸ್ರಿಗೆ ಚಳ್ಳೇಹಣ್ಣು ತಿನ್ನಿಸಿದ ತೆಲುಗು ನಟಿ: ಸಿಕ್ಕಿಬಿದ್ದಿದ್ದೇಗೆ...

Published : May 22, 2024, 05:31 PM IST

ನಾನು ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿಲ್ಲ. ಇದೆಲ್ಲಾಊಹಾಪೋಹ ಅಷ್ಟೇ. ನಾನು ಹೈದರಾಬಾದ್‌ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡಿದ್ದರು.

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ ಆರ್‌ ಫಾರ್ಮ್‌ನಲ್ಲಿ ಭಾನುವಾರ (ಮೇ 19) ರಾತ್ರಿ ರೇವ್‌ ಪಾರ್ಟಿ ಆಯೋಜಿಸಿದ್ದ ಮಾಹಿತಿ ಆಧರಿಸಿ ಸೋಮವಾರ (ಮೇ 20) ಬೆಳಗಿನ ಜಾವ ಸಿಸಿಬಿ ಪೊಲೀಸರು ಮತ್ತು ಮಾದಕ ವಸ್ತು ನಿಗ್ರಹ ದಳವು ದಾಳಿ ನಡೆಸಿತ್ತು. ಈ ವೇಳೆ ತೆಲುಗು ನಟ-ನಟಿಯರು, ಉದ್ಯಮಿಗಳು, ಟೆಕ್ಕಿಗಳು ಸೇರಿದಂತೆ ಅನೇಕರು ಸಿಕ್ಕಿಬಿದ್ದಿದ್ದರು. ಈ ದಾಳಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಆದರೆ ಅವರು ಅದನ್ನು ಅಲ್ಲಗಳೆದಿದ್ದರು. ಇದೀಗ ನಟಿ ಹೇಳಿದ್ದೆಲ್ಲವೂ ಸುಳ್ಳು ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿ ರೇವ್‌ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಕುರಿತು ವರದಿ ಬಿತ್ತರವಾಗುತ್ತಿದ್ದಂತೆ ಕಂಗಾಲಾದ ಅವರು ಸತ್ಯ ಮರೆಮಾಚಲು, ನಾನು ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿಲ್ಲ. 

ಇದೆಲ್ಲಾಊಹಾಪೋಹ ಅಷ್ಟೇ. ನಾನು ಹೈದರಾಬಾದ್‌ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲೂ ಕೂಡ ಏನೂ ನಡೆದೇ ಇಲ್ಲ ಎಂಬಂತೆ, ಸಹಜವಾಗಿಯೇ ಮಾತನಾಡಿದ್ದರು. ಇದನ್ನು ಕಂಡವರು, ಓಹ್ ಇದು ನಿಜ ಇರಬಹುದೇನೋ, ಹೇಮಾ ರೇವ್ ಪಾರ್ಟಿಯಲ್ಲಿ ಇರಲಿಲ್ಲ ಎಂದುಕೊಂಡಿದ್ದರು. ಆದರೆ ಅಸಲಿ ವಿಚಾರವೇ ಬೇರೆ ಆಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ, ತಮ್ಮನ್ನು ಬಿಟ್ಟು ಬಿಡುವಂತೆ ಪೊಲೀಸರ ಬಳಿ ಅಲವತ್ತುಕೊಂಡಿದ್ದಾರೆ. ತುರ್ತಾಗಿ ಹೊರ ಹೋಗಬೇಕೆಂದು ಹೇಳಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದ ಫಾರ್ಮ್‌ಹೌಸ್‌ನಿಂದ ಹೊರ ಬಂದಿದ್ದ ಹೇಮಾ, ಈ ವೇಳೆ ಅಲ್ಲಿಯೇ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್‌ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್‌ ದಯಾನಂದ್ ಅಧಿಕಾರಿ ತಿಳಿಸಿದ್ದಾರೆ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more