Ilayaraja: ರಜನಿಯ 'ಕೂಲಿ'ಗೆ ಇಳಯರಾಜ ಕೃತಿಚೌರ್ಯ ನೋಟಿಸ್ ಕಳುಹಿಸಿದ್ದೇಕೆ..?

Ilayaraja: ರಜನಿಯ 'ಕೂಲಿ'ಗೆ ಇಳಯರಾಜ ಕೃತಿಚೌರ್ಯ ನೋಟಿಸ್ ಕಳುಹಿಸಿದ್ದೇಕೆ..?

Published : May 04, 2024, 11:22 AM IST

ಕಾಲಿವುಡ್‌ನಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಅದು ತಲೈವಾ ರಜನಿಕಾಂತ್ ಸಿನಿಮಾ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಮಧ್ಯೆ. ಸೂಪರ್ ಸ್ಟಾರ್ ರಜಿನಿಕಾಂತ್ ನಟನೆಯ ಕೂಲಿ ಸಿನಿಮಾಗೆ ಸಂಬಂಧಪಟ್ಟಂತೆ ಆಕ್ರೋಶಗೊಂಡಿರೋ ಸಂಗೀತ ನಿರ್ದೇಶಕ ಇಳಯರಾಜ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಲೋಕೇಶ್ ಕನಕರಾಜ್ ನಿರ್ದೇಶಿಸುತ್ತಿರೋ ತಲೈವಾ ನಟಿಸುತ್ತಿರುವ ‘ಕೂಲಿ’ ಚಿತ್ರದ(Coolie Movie) ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಇತ್ತೀಚಿಗಷ್ಟೇ ಟೀಸರ್ ಮೂಲಕ ಚಿತ್ರದ ಟೈಟಲ್‌ನ್ನ ಚಿತ್ರತಂಡ ರಿವೀಲ್ ಮಾಡಿತ್ತು. ಟೈಟಲ್ ಟೀಸರ್ ರಿಲೀಸ್ ಆಗ್ತಿದ್ದಂತೆ 'ಕೂಲಿ' ಕ್ರೇಜ್ ದುಪ್ಪಟ್ಟಾಯ್ತು. ಅನಿರುದ್ಧ್ ಹಿನ್ನೆಲೆ ಸಂಗೀತ ನೀಡಿದ್ದ ಈ ಟೀಸರ್‌ನಲ್ಲಿ, ಡಿಸ್ಕೋ ಹಾಡನ್ನು ಬಳಸಲಾಗಿತ್ತು. ಅದು ಇಳಯರಾಜಾ(Ilayaraja) ಹಾಕಿದ ಟ್ಯೂನ್ ಹೀಗಾಗಿ 'ಕೂಲಿ' ನಿರ್ಮಾಣ ಸಂಸ್ಥೆಗೆ ಮ್ಯೂಸಿಕ್ ಮಾಂತ್ರಿಕ ಇಳಯರಾಜಾ ಕೃತಿ ಚೌರ್ಯದ ನೋಟಿಸ್(Copyright Notice) ಕಳಿಸಿದ್ದಾರೆ. 1983ರಲ್ಲಿ ರಜನಿಕಾಂತ್(Rajinikanth) ತಂಗಮಗನ್ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾಗೆ ಇಳಯಾರಾಜ ಅವರೇ ಟ್ಯೂನ್‌ಹಾಕಿದ್ರು. ಅದೇ ಸಿನಿಮಾದ ವಾ ವಾ..ಎಂಬ ಹಾಡಿನ ತುಣುಕನ್ನ, ಕೂಲಿಯಲ್ಲಿ ಬಳಸಿಕೊಳ್ಳಲಾಗಿದೆ ಎಂಬುದು ಇಳಯರಾಜಾ ಅವರ ಆರೋಪ. ಕೂಲಿ ಚಿತ್ರದ ಟೀಸರ್‌‌ನಲ್ಲಿ ಇಳಯರಾಜಾ ಅವರ ವಾ ವಾ ಪಾಕಂ ವಾ ಹಾಡನ್ನು ಮರುಸೃಷ್ಟಿ ಮಾಡಲಾಗಿದೆ. ಆದ್ರೆ ಮ್ಯೂಸಿಕ್‌ನ ಮೊದಲ ಮಾಲೀಕ ಇಳಯರಾಜ ಆಗಿದ್ರಿಂದ, ಕೃತಿಚೌರ್ಯದ ಆರೋಪ ಮಾಡಿದ್ದಾರೆ.. ಹೀಗಾಗಿ ನನ್ನಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು, ಇಳಯರಾಜ ಸನ್ ಪಿಕ್ಚರ್ಸ್‌ಗೆ ನೋಟಿಸ್ ಕಳುಹಿಸಿದ್ದಾರೆ. ಸದ್ಯ ನೋಟೀಸ್ ನಲ್ಲಿ ಇದು ಹಕ್ಕುಸ್ವಾಮ್ಯ ಕಾಯಿದೆ 1957ರ ಅಡಿಯಲ್ಲಿ ಅಪರಾಧ ಅಂತ ಹೇಳಲಾಗಿದೆ.

ಇದನ್ನೂ ವೀಕ್ಷಿಸಿ:  Sudeep: ಕಿಚ್ಚನ ಕೋಟೆಗೆ 'ಜೈಲರ್' ಮಾಸ್ಟರ್ ಎಂಟ್ರಿ..!ಆಕ್ಷನ್ ಮೂಡ್‌ನಲ್ಲಿ ಬಾದ್ ಷಾ ಸುದೀಪ್..!

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more