ಮತ್ತೆ ಇಬ್ಬರು ಅನಾಥ ಮಕ್ಕಳ ದತ್ತು ಪಡೆದ ಶ್ರೀಲೀಲಾ: ನಟಿಯ ಕೆಲಸಕ್ಕೆ ಅಭಿಮಾನಿಗಳ ಮೆಚ್ಚುಗೆ!

Mar 8, 2024, 1:16 PM IST

ಬಹುಭಾಷಾ ನಟಿ ಶ್ರೀಲೀಲಾ ಟಾಲಿವುಡ್ ಅಂಗಳದಲ್ಲಿ ಭರ್ಜರಿಯಾಗಿ ಸದ್ದು ಮಾಡ್ತಿದ್ದಾರೆ. ಸ್ಟಾರ್ ನಟ-ನಟಿಯರು ಸಾಮಾಜಿಕ ಕೆಲಸಗಳು ಕೈ ಜೋಡಿಸುತ್ತಾರೆ. ಶ್ರೀಲೀಲಾ ಒಂದು ಹೆಜ್ಜೆ ಮುಂದೆ ಹೋಗಿ ಅನಾಥ ಮಕ್ಕಳನ್ನು ದತ್ತು ಪಡೆದಿದ್ದಾರೆ. ಈ ಹಿಂದೆಯೂ ಶ್ರೀಲೀಲಾ ಭರಾಟೆ ಸಿನಿಮಾ ಮಾಡುತ್ತಿದ್ದ ಸಂದರ್ಭದಲ್ಲೆ ಅನಾಥ ಮಕ್ಕಳ  ದತ್ತು ಪಡೆದ ಸುದ್ದಿ ಬಿತ್ತರವಾಘಿತ್ತು. ಇದೀಗ ಮತ್ತೆ ಇಬ್ಬರು ಬುದ್ಧಿಮಾಂದ್ಯ ಮಕ್ಕಳ ಪಾಲನೆ ಪೋಷಣೆಯ ಸಂಪೂರ್ಣ ಖರ್ಚನ್ನು ಭರಿಸುವ ಜವಾಬ್ದಾರಿ ಹೊತ್ತಿದ್ದಾರೆ. ಈ ಮೂಲಕ ಇತರೆ ನಟಿಯರಿಗಿಂತ ವಿಭಿನ್ನ ಎನ್ನಿಸಿಕೊಂಡಿದ್ದಾರೆ. ನಟಿಯು ಇತ್ತೀಚೆಗೆ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ ಒಬ್ಬ ಗಂಡು, ಒಬ್ಬ ಹೆಣ್ಣು ಸೇರಿ ಇಬ್ಬರು ದಿವ್ಯಾಂಗ ಮಕ್ಕಳನ್ನು ದತ್ತು ಪಡೆದಿದ್ದಾರೆ.

ಗುರು ಮತ್ತು ಶೋಭಿತಾ ಎಂಬ ಇಬ್ಬರು ಮಕ್ಕಳನ್ನು ದತ್ತು ಪಡೆದಿರುವ ಶ್ರೀಲೀಲಾ ಉದಾರ ಮತ್ತು ಚಿಂತನಶೀಲ ಕಾರ್ಯ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.. ನಟಿ ಕರ್ನಾಟಕದ ಕಲ್ಯಾಣ ಕೇಂದ್ರವೊಂದಕ್ಕೆ ಭೇಟಿ ನೀಡಿದ್ದು, ಇನ್ನು ಮುಂದೆ ಇಬ್ಬರು ಮಕ್ಕಳನ್ನು ಸಾಕಲು ಆರ್ಥಿಕವಾಗಿ ಬೆಂಬಲ ನೀಡಲಿದ್ದಾರೆ. ನಟಿಯ ಕೆಲಸಕ್ಕೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡದ ಕಿಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, ಟಾಲಿವುಡ್ನಲ್ಲಿ ಟಾಪ್ ನಟಿಯಾಗಿ ಬೆಳೆದಿದ್ದಾರೆ. ಇತ್ತೀಚೆಗೆ ಗುಂಟೂರು ಕಾರಂ ಚಿತ್ರವೂ ಹಿಟ್ಟಾಗಿತ್ತು. ನಟಿ ಹರೀಶ್ ಶಂಕರ್ ನಿರ್ದೇಶನದ 'ಉಸ್ತಾದ್ ಭಗತ್ ಸಿಂಗ್' ಚಿತ್ರದಲ್ಲಿ ಪವರ್ಸ್ಟಾರ್ ಪವನ್ ಕಲ್ಯಾಣ್  ಜೊತೆ ಶೀಘ್ರದಲ್ಲೇ ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ; 150 ಕೋಟಿ ಬಜೆಟ್ನಲ್ಲಿ ಚಿತ್ರ ನಿರ್ಮಿಸಲಾಗಿದೆ.