ಟಾಲಿವುಡ್‌ನಲ್ಲಿ ಸಂಕ್ರಾಂತಿ ರೇಸ್​; ಡಾಕು ಮಹರಾಜ್ ಹೊಡೆತಕ್ಕೆ ಡಲ್ ಆದ ಗೇಮ್ ಚೇಂಜರ್

ಟಾಲಿವುಡ್‌ನಲ್ಲಿ ಸಂಕ್ರಾಂತಿ ರೇಸ್​; ಡಾಕು ಮಹರಾಜ್ ಹೊಡೆತಕ್ಕೆ ಡಲ್ ಆದ ಗೇಮ್ ಚೇಂಜರ್

Published : Jan 14, 2025, 10:58 PM IST

ಸಂಕ್ರಾಂತಿ ಹಬ್ಬಕ್ಕೆ ತೆಲುಗು ಚಿತ್ರರಂಗದಲ್ಲಿ ಮೂರು ದೊಡ್ಡ ಸಿನಿಮಾಗಳು ಬಿಡುಗಡೆಯಾಗಿವೆ. ರಾಮ್ ಚರಣ್, ಬಾಲಕೃಷ್ಣ ಮತ್ತು ವೆಂಕಟೇಶ್ ಅಭಿನಯದ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನಡೆಸುತ್ತಿವೆ. ಇತ್ತ ಕನ್ನಡ ಚಿತ್ರರಂಗಕ್ಕೆ ನಟ ಶರಣ್ ಅವರ ಸೊಸೆ ಕೀರ್ತಿ ಕೃಷ್ಣ ಪಾದಾರ್ಪಣೆ ಮಾಡಿದ್ದಾರೆ.

ಸಂಕ್ರಾಂತಿಗೆ ತೆಲುಗು ಚಿತ್ರರಂಗ ಗರಿಗೆದರಿದೆ. ಮೂವರು ಸ್ಟಾರ್ ನಟರ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ ಆಗಿವೆ. ಜನವರಿ 10 ರಂದು ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಿತ್ತು. ಭಾನುವಾರ ನಂದಮೂರಿ ಬಾಲಕೃಷ್ಣ ನಟನೆಯ ‘ಢಾಕೂ ಮಹಾರಾಜ್’ ಸಿನಿಮಾ ತೆರೆಗೆ ಬಂದಿದೆ. ಸಂಕ್ರಾತಿ ದಿನ ವಿಕ್ಟರಿ ವೆಂಕಟೇಶ್ ನಟನೆಯ ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ತೆರೆಗೆ ಬರಲಿದೆ. ಜನವರಿ 10ರಂದು ಬಿಡುಗಡೆ ಆಗಿದ್ದ ‘ಗೇಮ್ ಚೇಂಜರ್’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತ್ತು, ಆದರೆ ಭಾನುವಾರ ಬಿಡುಗಡೆ ಆದ ‘ಢಾಕೂ ಮಹಾರಾಜ್’ ಸಿನಿಮಾದಿಂದಾಗಿ ‘ಗೇಮ್ ಚೇಂಜರ್’ ಹೊಡೆತ ತಿಂದಿದೆ. ಮೊದಲ ದಿನ ‘ಢಾಕೂ ಮಹಾರಾಜ್’ ಭರ್ಜರಿ ಕಲೆಕ್ಷನ್ ಮಾಡಿದೆ.
 
ಸ್ಯಾಂಡಲ್‌ವುಡ್‌ಗೆ ಹೊಸ ಹೊಸ ಹೀರೋಯಿನ್‌ಗಳ ಎಂಟ್ರಿ ಆಗ್ತಿದೆ. ಕನ್ನಡ ಚಿತ್ರರಂಗ ತಾರಾ ಕುಟುಂಬದ ಕುಡಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಕೀರ್ತಿ ಕೃಷ್ಣ ಕೂಡ ಒಬ್ಬರು.  ಕೀರ್ತಿ ಕೃಷ್ಣ ನಟ ಶರಣ್ ಅವರ ಸೊಸೆ. ಅಂದರೆ, ಶರಣ್ ಹಾಗೂ ಹಿರಿಯ ನಟಿ ಶ್ರುತಿ ಅವರ ತಂಗಿ ಉಷಾ ಕೃಷ್ಣ ಅವರ ಪುತ್ರಿ. ಪಡ್ಡೆ ಹುಲಿ ಖ್ಯಾತಿ ಶ್ರೇಯಸ್ ಜೊತೆ 'ದಿಲ್‌ದಾರ್' ಚಿತ್ರದಲ್ಲಿ ಕೀರ್ತಿ ನಾಯಕಿಯಾಗಿ ನಟಿಸೋ ಮೂಲಕ ಇಂಡಸ್ಟ್ರಿಗೆ ಕಾಲಿಡ್ತಾ ಇದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಮುಂದಿನ ಸಿನಿಮಾಗೂ ಇವರೇ ನಾಯಕಿಯಾಗಿ ಆಯ್ಕೆಯಾಗಿದ್ದು ಸ್ಯಾಂಡಲ್​ವುಡ್​​ನಲ್ಲಿ ತನ್ನ ಹೆಜ್ಜೆ ಗುರುತು ಮೂಡಿಸೋ ಉತ್ಸಾಹದಲ್ಲಿದ್ದಾರೆ ಕೀರ್ತಿ ಕೃಷ್ಣ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more