ತಾರಕ ರತ್ನ ಮರಣದ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ: ಹಳೆ ವಿಡಿಯೋ ವೈರಲ್!

ತಾರಕ ರತ್ನ ಮರಣದ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ: ಹಳೆ ವಿಡಿಯೋ ವೈರಲ್!

Published : Feb 25, 2023, 11:17 AM IST

ಮೇಷ ರಾಶಿಗೆ ಸಂಬಂಧಿಸಿದ ನಟಿ, ವೃಷ್ಚಿಕ ಅಥವಾ ಮಿಥುನ ರಾಶಿಗೆ ಸಂಬಂಧಿಸಿದ ನಟ ನಿಧನ ಹೊಂದಲಿದ್ದಾರೆ ಎಂದೂ ಸಹ ಅವರು ಖಚಿತವಾಗಿ ತಿಳಿಸಿದ್ದರು. ಇದೀಗ ತಾರಕ ರತ್ನ ತಮ್ಮ 39ನೇ ವಯಸ್ಸಿಗೇ ನಿಧನ ಹೊಂದಿರುವ ಕಾರಣ ಹಲವರು ವೇಣು ಸ್ವಾಮಿ ಭವಿಷ್ಯ ನಿಜವಾಗಿದೆ ಎನ್ನುತ್ತಿದ್ದಾರೆ. 

ಎನ್‌ಟಿಆರ್ ಪುತ್ರ, ನಟ, ರಾಜಕಾರಣಿ ನಂದಮೂರಿ ತಾರಕ ರತ್ನ ನಿಧನ ಹೊಂದುತ್ತಾರೆಂದು ಮೊದಲೇ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು ಎನ್ನಲಾಗುತ್ತಿದ್ದು. ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ವೈರಲ್ ಆಗಿದೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ವೇಣು ಸ್ವಾಮಿ, 45 ವರ್ಷ ವಯಸ್ಸಿನ ಒಳಗಿನ ನಾಯಕ ನಟ, ನಾಯಕ ನಟಿ ನಿಧನ ಹೊಂದಲಿದ್ದಾರೆ ಎಂದಿದ್ದರು. ಮೇಷ ರಾಶಿಗೆ ಸಂಬಂಧಿಸಿದ ನಟಿ, ವೃಷ್ಚಿಕ ಅಥವಾ ಮಿಥುನ ರಾಶಿಗೆ ಸಂಬಂಧಿಸಿದ ನಟ ನಿಧನ ಹೊಂದಲಿದ್ದಾರೆ ಎಂದೂ ಸಹ ಅವರು ಖಚಿತವಾಗಿ ತಿಳಿಸಿದ್ದರು. ಇದೀಗ ತಾರಕ ರತ್ನ ತಮ್ಮ 39ನೇ ವಯಸ್ಸಿಗೇ ನಿಧನ ಹೊಂದಿರುವ ಕಾರಣ ಹಲವರು ವೇಣು ಸ್ವಾಮಿ ಭವಿಷ್ಯ ನಿಜವಾಗಿದೆ ಎನ್ನುತ್ತಿದ್ದಾರೆ. 

ಜೊತೆಗೆ ವೇಣು ಸ್ವಾಮಿ ಹೇಳಿರುವ ಆ ನಟಿ ಯಾರು ಎಂಬ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಕೆಲವರು ವೇಣು ಸ್ವಾಮಿಯ ಭವಿಷ್ಯದ ಬಗ್ಗೆ ವಿರೋಧವನ್ನೂ ವ್ಯಕ್ತಪಡಿಸಿದ್ದು, ವೇಣು ಸ್ವಾಮಿಯನ್ನು ಪ್ರಚಾರ ಪ್ರಿಯನೆಂದು, ಕೆಟ್ಟದ್ದನ್ನು ಮಾತ್ರವೇ ಹೇಳಿ ಬೆದರಿಸುತ್ತಾನೆಂದೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೇಣು ಸ್ವಾಮಿ ತೆಲುಗು ಚಿತ್ರರಂಗದ ಕೆಲವು ಜನಪ್ರಿಯ ಸಿನಿಮಾ ಮಂದಿಯ ಬಗ್ಗೆ ಈ ಹಿಂದೆಯೂ ಭವಿಷ್ಯ ಹೇಳಿದ್ದಾರೆ. ನಾಗ ಚೈತನ್ಯ-ಸಮಂತಾ ವಿವಾಹವಾದಾಗ ಇವರಿಬ್ಬರೂ ಬೇರೆಯಾಗುತ್ತಾರೆ ಎಂದಿದ್ದರು. ಅಂತೆಯೇ ಆಯಿತು. ನಟಿ ರಶ್ಮಿಕಾ ಮಂದಣ್ಣ ಸಹ ಚಿತ್ರರಂಗಕ್ಕೆ ಬಂದ ಹೊಸದರಲ್ಲಿ ವೇಣು ಸ್ವಾಮಿ ಬಳಿ ವಿಶೇಷ ಪೂಜೆಗಳನ್ನು ಮಾಡಿಸಿದ್ದರು. ರಶ್ಮಿಕಾ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿರುವ ವೇಣು ಸ್ವಾಮಿ, ವಿಜಯ್ ದೇವರಕೊಂಡ ಜೊತೆಗಿದ್ದರೆ ರಶ್ಮಿಕಾ ತಮ್ಮ ಯಶಸ್ಸು ಕಳೆದುಕೊಳ್ಳುತ್ತಾರೆ ಎಂದೂ ಸಹ ಭವಿಷ್ಯ ನುಡಿದಿದ್ದಾರೆ. 

ಅದರಂತೆ ವಿಜಯ್ ದೇವರಕೊಂಡ ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ. ರಷ್ಮಿಕಾ ಹಿಂದಿ ಸಿನಿಮಾ ಮಕಾಡೆ ಮಲಗಿತು. ಮಹೇಶ್ ಬಾಬು ಮನೆಯಲ್ಲಿ 2020 ರ ನಂತರ ಸಾವು ಸಂಭವಿಸುತ್ತೆ ಅದಕ್ಕೆ ಕಾರಣ ಮಹೇಶ್ ಬಾಬು ಜಾತಕ ಎಂದು ಮೊದಲೇ ನುಡಿದಿದ್ದರಂತೆ ಜ್ಯೋತಿಷಿ ವೇಣು ಸ್ವಾಮಿ, ಇದರಿಂದ ಮಹೇಶ್ ಬಾಬು ಕುಟುಂಬ ಇವರನ್ನು ದೂರ ಇಟ್ಟಿತ್ತಂತೆ. ಟಾಲಿವುಡ್ ಸೆಲೆಬ್ರೆಟಿ ಜ್ಯೋತಿಷಿ ಎಂದೆ ಹೆಸರಾಗಿರುವ ವೇಣುಸ್ವಾಮಿ ಪ್ರಭಾಸ್ ಬಗ್ಗೆ ಭಯಾನಕ ಭವಿಷ್ಯ ನುಡಿದಿದ್ದಾರೆ. ಪ್ರಭಾಸ್ ಮದುವೆಯಾಗುವಂತಿಲ್ಲ. ಮದುವೆ ಆದ್ರೆ ಆತ್ಮಹತ್ಯೆ ಮಾಡಿಕೊಂಡ ಉದಯ್ ಕಿರಣ್ ಸ್ಥಿತಿಯೇ ಇವರಿಗೂ ಬರುತ್ತದಂತೆ. ಅದಕ್ಕೆ ಪ್ರಭಾಸ್ ಮದುವೆ ಆಗುತ್ತಿಲ್ಲವಾ ಎಂಬ ಅನುಮಾನ ಇದೀಗ ಶುರುವಾಗಿದೆ. 

ಯಂಗ್ ಟೈಗರ್ ಜೂ.ಎನ್‌ಟಿಆರ್ ಭವಿಷ್ಯದಲ್ಲಿ ರಾಜಕೀಯಕ್ಕೆ ಬಂದರೆ ಸಿಎಂ ಕೂಡ ಆಗಬಹುದು ಎಂಬ ಭವಿಷ್ಯ ನುಡಿದಿದ್ದಾರೆ. ಒಟ್ಟಿನಲ್ಲಿ ಈ ಜ್ಯೋತಿಷಿ ಎಂದರೆ ಸದ್ಯ ಟಾಲಿವುಡ್ ಬೆಚ್ಚಿಬೀಳುತ್ತಿದೆ. ಇವರ ನೇರ ನುಡಿ ಭಯಪಡಿಸುವ ಭಯಂಕರ ಸತ್ಯಗಳು ಇವರ ಸಾವಾಸಾನೆ ಬೇಡ ಎಂದು ಕೆಲವರು ದೂರವಿಟ್ಟಿದ್ದಾರೆ ಇವರನ್ನು. ಇನ್ನು ಕೆಲವರು ಇವರು ಹೇಳಿದ್ದೆಲ್ಲ ಸತ್ಯವಾಗ್ತಿದೆ ಅಂತ ಇವರ  ಬಳಿ ಭವಿಷ್ಯ ತಿಳಿಯಲು ಮುಗಿಬೀಳುತ್ತಿದ್ದಾರೆ.  ಏನೇ ನಡೆದರು ಗ್ರಹಗತಿ ರಾಶಿಫಲಗಳೇ ಕಾರಣ ಅನ್ನೋದು ಇವರ ವಾದ. ಆದರೆ ಪ್ರಚಾರ ಪ್ರಿಯ ಜ್ಯೋತಿಷಿ ಯಾವಾಗಲೂ ಎಲ್ಲರಿಗೂ ನೆಗೆಟಿವ್ ವಿಚಾರಗಳನ್ನೆ ಹೇಳೋ ಜ್ಯೋತಿಷಿ ಎಂದು ಒಂದಷ್ಟು ಜನ ಇವರ ವಿರುದ್ಧ ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ಇವರ ವೀಡಯೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿರೋದಂತು ನಿಜ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more