ರಾಜ್‌ಕುಮಾರ್‌ ಗೂ ರಾಜಕೀಯಕ್ಕೂ  ಎಣ್ಣೆ- ಸೀಗೇಕಾಯಿ..ರಾಜಕೀಯ ಕುರುಕ್ಷೇತ್ರಕ್ಕೆ ಅಣ್ಣಾವ್ರು ಬರಲಿಲ್ಲ ಯಾಕೆ..?

ರಾಜ್‌ಕುಮಾರ್‌ ಗೂ ರಾಜಕೀಯಕ್ಕೂ ಎಣ್ಣೆ- ಸೀಗೇಕಾಯಿ..ರಾಜಕೀಯ ಕುರುಕ್ಷೇತ್ರಕ್ಕೆ ಅಣ್ಣಾವ್ರು ಬರಲಿಲ್ಲ ಯಾಕೆ..?

Published : Apr 25, 2023, 03:59 PM IST

ಈ ಎಲೆಕ್ಷನ್ ಬಿಸಿ ಮಧ್ಯೆ ದೊಡ್ಮನೆಯ ಸಾವಿರಾರು ಅಭಿಮಾನಿಗಳು ಅಣ್ಣಾವ್ರ ಹುಟ್ಟುಹಬ್ಬವನ್ನ ಆಚರಸಿ ಸಂಭ್ರಮಿಸಿದ್ದಾರೆ. ಅದಕ್ಕೆ ಕಾರಣ ರಾಜಕೀಯದಲ್ಲಿ ಅಣ್ಣಾವ್ರಿಗೆ ಇದ್ದ ಆ ಗಟ್ಟಿ ನಿರ್ಧಾರ.ರಾಜ್‌ಕುಮಾರ್‌ಗೆ  ಮತ್ತು  ರಾಜಕೀಯಕ್ಕೆ  ಎಣ್ಣೆ ಸೀಗೇಕಾಯಿ ಇದ್ದಂತೆ. ಅಣ್ಣಾವ್ರಿಗೆ ರಾಜಕೀಯ ಆಗಿಬರುತ್ತಿರಲಿಲ್ಲ.

ರಾಜ್ಯ ರಾಜಕಾರಣ ದಲ್ಲಿ  ಎಲ್ಲರು ಬ್ಯುಸಿಯಾಗಿದ್ದಾರೆ. ರಾಜಕೀಯದಲ್ಲಿ ಕೆಸರೆರಚಾಟ, ಕಚ್ಚಾಟವನ್ನೆಲ್ಲಾ ನೋಡುತ್ತಿದ್ದೇವೆ.  ನೀವೆಲ್ಲಾ ನೋಡುತ್ತಿದ್ದೀರಾ. ಅಣ್ಣಾವ್ರ ಹಾಗೆ ಚಿತ್ರರಂಗದಲ್ಲಿರುವವರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.  ಚುನಾವಣಾ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದಾರೆ.  ಈ ಎಲೆಕ್ಷನ್ ಬಿಸಿ ಮಧ್ಯೆ ದೊಡ್ಮನೆಯ ಸಾವಿರಾರು ಅಭಿಮಾನಿಗಳು ಅಣ್ಣಾವ್ರ ಹುಟ್ಟುಹಬ್ಬವನ್ನ ಆಚರಸಿ ಸಂಭ್ರಮಿಸಿದ್ದಾರೆ. ಅದಕ್ಕೆ ಕಾರಣ ರಾಜಕೀಯದಲ್ಲಿ ಅಣ್ಣಾವ್ರಿಗೆ ಇದ್ದ ಆ ಗಟ್ಟಿ ನಿರ್ಧಾರ. ನಟ ಸಾರ್ವಭೌಮ  ರಾಜಕೀಯಕ್ಕೆ ಬಂದಿದ್ರೆ,  ಅದೆಷ್ಟು ಭಾರಿ ಮುಖ್ಯಮಂತ್ರಿ ಆಗಿರುತ್ತಿದ್ದರು, ಅಂತಹ ದೊಡ್ಡ ಆಫರ್ ಗಳು ಅಣ್ಣಾವ್ರ ಕಾಲ ಬುಡಕ್ಕೆ ಬಂದಿತ್ತು. ಆದ್ರೆ ರಾಜ್‌ಕುಮಾರ್‌ಗೆ  ಮತ್ತು  ರಾಜಕೀಯಕ್ಕೆ  ಎಣ್ಣೆ ಸೀಗೇಕಾಯಿ ಇದ್ದಂತೆ. ಅಣ್ಣಾವ್ರಿಗೆ ರಾಜಕೀಯ ಆಗಿಬರುತ್ತಿರಲಿಲ್ಲ. ರಾಜಕೀಯ ಅಂದ್ರೆ ರಾಜ್ಕುಮಾರ್ ಅಜ್ಞಾತವಾಸಿ  ಆಗುತ್ತಿದ್ದರು. ಅವರಿಗೆ  ರಾಜಕೀಯದ ಮೇಲೆ ಕಿಂಚಿತ್ತು ಆಸಕ್ತಿ ಇರಲಿಲ್ಲ. ಆದ್ರೆ ರಾಜಕಾರಣಿಗಳಿಗೆ ಮಾತ್ರ ರಾಜ್‌ಕುಮಾರ್ ಬೇಕಿತ್ತು. ಅಣ್ಣಾವ್ರನ್ನ ಕಂಡರೆ ರಾಜಕಾರಣಿಗಳಿಗೆ ಅಪಾರ ಪ್ರೀತಿ, ಗೌರವ ಮತ್ತು ಭಯ ಇತ್ತು. ಹೀಗಾಗಿ ಯಾರೆಲ್ಲಾ ಮುಖ್ಯಮಂತ್ರಿ, ಮಂತ್ರಿ, ಎಂಎಲ್ಎಗಳಾಗುತ್ತಿದ್ದರು ಅವರು ಮೊದಲು ವರನಟನ ಮನೆಗೆ ಹೋಗಿ ಆಶೀರ್ವಾದ ಪಡೆಯುತ್ತಿದ್ದರು. 
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more