ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್

ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್

Published : Jan 29, 2026, 12:07 PM IST

'ಕಾಂತಾರ' ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಗೋವಾ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಎದುರೇ ದೈವಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲರೊಬ್ಬರು ದೂರು ನೀಡಿದ್ದಾರೆ. 


ಕಾಂತಾರ ದೈವದ ವಿಚಾರದಲ್ಲಿ ಅವಹೇಳನ ಹಿನ್ನೆಲೆ ಬೆಂಗಳೂರಿನಲ್ಲಿ ಬಾಲಿವುಡ್ ಸ್ಟಾರ್ ದೀಪಿಕಾ ಪಡುಕೋಣೆ ಪತಿ ರಣ್‌ವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಕೀಲ ಪ್ರಶಾಂತ್ ಎಂಬುವವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಶಾಂತ್ ಅವರು ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಫ್‌ಐಆರ್‌ ಪ್ರತಿ ಲಭ್ಯವಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಧಾರ್ಮಿಕ ಭಾವನೆಗೆ ಧಕ್ಕೆ, ಸೆಕ್ಷನ್ 299 ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯ, ಸೆಕ್ಷನ್ 302 ಮತ್ತೊಬ್ಬರ ಧಾರ್ಮಿಕ ಭಾವನೆ ನೋಯಿಸುವುದು, ಇವುಗಳಡಿ ಪ್ರಕರಣ ದಾಖಲಾಗಿದೆ. ಗೋವಾದ ಚಲನಚಿತ್ರೋತ್ಸವದಲ್ಲಿ ನಟ ರಣ್ವೀರ್ ಸಿಂಗ್ ದೈವಗಳ ಬಗ್ಗೆ ಅವಹೇಳನ ಮಾಡಿದ್ದರು. ಚಾಮುಂಡಿ ದೇವರನ್ನು Female Ghost ಎಂದು ಅನುಕರಿಸಿ ರಿಷಬ್ ಶೆಟ್ಟಿ ಎದುರಲ್ಲೇ ದೈವಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ..

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more