Vikram Movie: ಥಿಯೇಟರ್‌ನಲ್ಲಿ ಮಾತ್ರ ಪಕ್ಕದಲ್ಲಿ ಕುಳಿತಿರುವವರನ್ನ ಯಾವ ಜಾತಿ ಅಂತ ನಾವು ಕೇಳೋದಿಲ್ಲ: ಕಮಲ್‌ ಹಾಸನ್

Vikram Movie: ಥಿಯೇಟರ್‌ನಲ್ಲಿ ಮಾತ್ರ ಪಕ್ಕದಲ್ಲಿ ಕುಳಿತಿರುವವರನ್ನ ಯಾವ ಜಾತಿ ಅಂತ ನಾವು ಕೇಳೋದಿಲ್ಲ: ಕಮಲ್‌ ಹಾಸನ್

Published : Jun 02, 2022, 11:52 PM IST

ಕಮಲ್​ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಕಮಲ್ ಹಾಸನ್ ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದ್ದು, ಹೂವಿನ ಮಳೆ ಸುರಿಸಿ ಸ್ವಾಗತವನ್ನು ಕೋರಿದ್ದಾರೆ.

ಕಮಲ್​ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಕಮಲ್ ಹಾಸನ್ ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದ್ದು, ಹೂವಿನ ಮಳೆ ಸುರಿಸಿ ಸ್ವಾಗತವನ್ನು ಕೋರಿದ್ದಾರೆ. ಮಾತ್ರವಲ್ಲದೇ ಕಮಲ್ ಹಾಸನ್ ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಲೋಕೇಶ್ ಕನಗರಾಜ್ ವಿಕ್ರಮ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ಕಮಾಲ್ ಹಾಸನ್ ಜೊತೆಗೆ ವಿಜಯ್ ಸೇತುಪತಿ, ಸೂರ್ಯ ಹಾಗೂ ಫಹಾದ್ ಫಾಜಿಲ್ ನಟಿಸಿದ್ದಾರೆ. ಇನ್ನು ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹೀಗಾಗಿ ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇನ್ನು ಅಭಿಮಾನಿಗಳ ಎದುರು ಮಾತನಾಡಿದ ಕಮಲ್ ಹಾಸನ್, ಸಿನಿಮಾ ಒಂದು ಕಲೆ. 

ಸಿನಿಮಾ ಮಂದಿರದಲ್ಲಿ ಮಾತ್ರ ನಾವು ಪಕ್ಕದಲ್ಲಿ ಕುಳಿತಿರುವವರನ್ನ ನೀವು ಯಾವ ಜಾತಿ ಅಂತ ಕೇಳೋದಿಲ್ಲ. ಕತ್ತಲೆ ಅಂದ್ರೆ ಭಯ ಆಗುತ್ತೆ. ಆದ್ರೆ ಸಿನಿಮಾ ಮಂದಿರದಲ್ಲಿ ಕತ್ತಲೆ ಖುಷಿ ಕೊಡುತ್ತೆ ಎಂದು ಹೇಳಿದರು. ವಿಶೇಷವಾಗಿ ನನಗೆ ಬೆಂಗಳೂರಿನ ಜತೆ ಒಂದಲ್ಲ ಸಾಕಷ್ಟು ನೆನಪುಗಳು ಇವೆ. ಪುಟ್ಟಣ್ಣ ಕಣಗಾಲ್ ಸಿನಿಮಾ ರಿಲೀಸ್ ಆದರೆ ಫಸ್ಟ್ ಡೇ ಫಸ್ಟ್ ಶೋ ನೋಡೋಕೆ  ಚೆನ್ನೈನಿಂದ ಬೆಂಗಳೂರಿಗೆ ಬಾಲಚಂದರ್​ ಜೊತೆ ಬರುತ್ತಿದೆ. ನಾನು ಗಿರೀಶ್ ಕಾರ್ನಾಡ್ ಅವರ ದೊಡ್ಡ ಫ್ಯಾನ್. ಬಿ.ವಿ .ಕಾರಂತ್ ಅವರನ್ನು ಮಾತನಾಡಿಸಲು ಬರುತ್ತಿದ್ದೆ ಎಂದಿದ್ದಾರೆ ಅವರು. ಕನ್ನಡದ ಕೋಕಿಲ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸಿದ್ದರು. ಈ ಚಿತ್ರ ತೆರೆಗೆ ಬಂದಿದ್ದು 1977ರಲ್ಲಿ. ಬಾಲು ಮಹೇಂದ್ರ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. 

Vikram Movie: ಎಲ್ಲರನ್ನೂ ಹೇಗೆ ಗೌರವಿಸಬೇಕು ಅನ್ನೋದನ್ನ ನಾನು ಅಣ್ಣಾವ್ರಿಂದ ಕಲಿತೆ: ಕಮಲ್ ಹಾಸನ್

ಈ ಬಗ್ಗೆ ಮಾತನಾಡಿರುವ ಅವರು, ಕೋಕಿಲ ಚಿತ್ರವನ್ನು ಕನ್ನಡದಲ್ಲೇ ಮಾಡಲಾಗಿತ್ತು. ಶೂಟಿಂಗ್​ಗಾಗಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ನಾನು ಪರಾಗ್ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದೆ ಎಂದು ಹೇಳಿದರು. ಜೊತೆಗೆ ಡಾ.ರಾಜ್​ಕುಮಾರ್ ಅವರ ಕುಟುಂಬ ಸೇರಿದಂತೆ ಪುನೀತ್ ರಾಜ್‌ಕುಮಾರ್ ಬಗ್ಗೆ ಮಾತನಾಡಿದರು. ಸಾಮಾನ್ಯವಾಗಿ ಹೆಸರಿನ‌ ಜೊತೆ ಊರಿನ ಹೆಸರು ಸೇರಿಸಿಕೊಳ್ತಾರೆ ಆದ್ರೆ ವಿಜಯ್ ಸೇತುಪತಿ ನಿಮ್ಮ ಹೆಸರನ್ನ ಅವರ ಹೆಸರಿನ ಜೊತೆ ಸೇರಿಕೊಂಡಿದ್ದಾರೆ. ಅದೇ ಅವರ ಎನರ್ಜಿ ಸೂರ್ಯ ತಂದೆ ನನ್ನ ಸ್ನೇಹಿತ ಅಂತ ಹೇಳೋದಿಲ್ಲ. ಯಾಕಂದ್ರೆ ಅವರು ನನ್ನ ಸಹೋದರ. ಸೂರ್ಯನಿಗೆ ನಾನು ಚಿಕ್ಕಪ್ಪ. ನೀವು ಸೂರ್ಯ ಅಂತಾ ಕರೆದಾಗ ಎಷ್ಟು ಖುಷಿ ಆಗುತ್ತೋ ಅಷ್ಟೇ ಖುಷಿ ನನಗೂ ಆಗತ್ತೆ, ನನ್ನ ಫಿಟ್ನೆಸ್ ಸೀಕ್ರೆಟ್ ನಾನು ಹೆಚ್ಚು ದಿನ‌ ಬದುಕಬೇಕು ನಿಮ್ಮನ್ನ ಎಂಟರ್ಟೈನ್ ಮಾಡಬೇಕು. 

ನಾನು ಸಿನಿಮಾ ಬ್ಲಾಕ್ ಬಾಸ್ಟರ್ ಅಂತ ಹೇಳಿದ್ರೆ ತಪ್ಪಾಗುತ್ತೆ. ನೀವು ಅಭಿಮಾನಿಗಳು ಬ್ಲಾಕ್ ಬಾಸ್ಟರ್ ಅಂತ ಹೇಳಬೇಕು ಎಂದು ಕಮಲ್ ತಿಳಿಸಿದರು.  ಇನ್ನು  ಸಂಗೀತ ನಿರ್ದೇಶಕ ಅನಿರುದ್ದ್  ಬಗ್ಗೆ ಮಾತನಾಡಿದ ಕಮಲ್ ಹಾಸನ್ ಅನಿರುದ್ಧ್ ಈ ರೀತಿ ಮ್ಯೂಸಿಕ್ ಮಾಡುತ್ತಾನೆ ಅನ್ನೋದೇ ಆಶ್ಚರ್ಯ. ಅವನ ತಾತನ ಕಾಲದಿಂದ ಅವ್ರ ಕುಟುಂಬದವರು ಮ್ಯೂಸಿಕ್ ಕಂಪೋಸ್ ಮಾಡಿಕೊಂಡು ಬರ್ತಿದ್ದಾರೆ. ಅನಿರುದ್ಧ್ ನಾಲ್ಕನೇ ಜನರೇಷನ್ ಎಂದು ಕಮಲ್ ಹೇಳಿದರು. ಈ ಸಮಯದಲ್ಲಿ ಪುಟ್ಟ ಅಭಿಮಾನಿ ಕೊಟ್ಟ ಪೇಂಟಿಂಗ್‌ಗೆ ಕಮಲ್ ಸಹಿ ಮಾಡಿಕೊಟ್ಟರು. ಅಲ್ಲದೇ ಆ ಪುಟ್ಟ ಅಭಿಮಾನಿಯ ತಲೆಗೆ ಹೂ ಕೂಡಾ ಮುಡಿಸಿದರು. 
 
ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more