Kannappa Teaser: ‘ಬೇಡರ ಕಣ್ಣಪ್ಪ’ನ ಕತೆಯನ್ನೇ ತಿರುಚಿದ್ರಾ? ಸಿನಿಮಾ ಟೀಸರ್‌ ಬಿಡುಗಡೆ..ಸಿನಿಮಾಭಿಮಾನಿಗಳು ಹೇಳಿದ್ದೇನು?

Kannappa Teaser: ‘ಬೇಡರ ಕಣ್ಣಪ್ಪ’ನ ಕತೆಯನ್ನೇ ತಿರುಚಿದ್ರಾ? ಸಿನಿಮಾ ಟೀಸರ್‌ ಬಿಡುಗಡೆ..ಸಿನಿಮಾಭಿಮಾನಿಗಳು ಹೇಳಿದ್ದೇನು?

Published : Jun 16, 2024, 10:13 AM ISTUpdated : Jun 16, 2024, 10:14 AM IST

ಡಾ. ರಾಜ್‌ಕುಮಾರ್ ನಟನೆಯ 'ಬೇಡರ ಕಣ್ಣಪ್ಪ' ಸಿನಿಮಾ ಇತ್ತೀಚೆಗೆ 70 ವರ್ಷ ಪೂರೈಸಿತ್ತು. ನಾಟಕವಾಗಿ ಬಹಳ ಜನಪ್ರಿಯವಾಗಿದ್ದ ಕಣ್ಣಪ್ಪನ ಕಥೆಯನ್ನು ಸಿನಿಮಾ ಮಾಡಿ ಯಶಸ್ಸು ಪಡೆದಿದ್ದ ರಾಜ್ ಕುಮಾರ್‌ರ ಈ ಸಿನಿಮಾ ಬಳಿಕ ತೆಲುಗಿಗೆ ರೀಮೆಕ್ ಆಗಿತ್ತು. ಕನ್ನಡದಲ್ಲಿ ಮತ್ತೆ 'ಶಿವಮೆಚ್ಚಿನ ಕಣ್ಣಪ್ಪ' ಆಗಿ ಹೆಚ್ಚು ಕಮ್ಮಿ ಅದೇ ಕಥೆ ತೆರೆಗೆ ಬಂದಿತ್ತು.

ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮತ್ತೊಮ್ಮೆ ಕಣ್ಣಪ್ಪ ಸಿನಿಮಾ(Kannappa Movie) ಬರುತ್ತಿದೆ. ತೆಲುಗಿನಲ್ಲಿ(Telugu) ಮಂಚು ವಿಷ್ಣು ಹೀರೊ ಆಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮೋಹನ್ ಲಾಲ್, ಪ್ರಭಾಸ್, ಅಕ್ಷಯ್‌ಕುಮಾರ್ ಸೇರಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ಕಣ್ಣಪ್ಪ ಟೀಸರ್ ರಿಲೀಸ್ ಆಗಿದೆ. ಕನ್ನಡ(Kannada) ಸೇರಿದಂತೆ 5 ಭಾಷೆಗಳಲ್ಲಿ 'ಕಣ್ಣಪ್ಪ' ಸಿನಿಮಾ ನಿರ್ಮಾಣವಾಗಿದೆ. ಸದ್ಯ ಬಿಡುಗಡೆ ಆಗಿರುವ ಟೀಸರ್‌ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಭಕ್ತಿ ಪ್ರಧಾನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಮುಖೇಶ್ ಕುಮಾರ್ ಸಿಂಗ್, ನೈಜತೆಗಿಂತ ಬಹಳ ದೂರವಾಗಿ ಕಥೆಯನ್ನು ಕಟ್ಟಿಕೊಟ್ಟಿರುವುದು ಗೊತ್ತಾಗುತ್ತಿದೆ. ಈ ಟೀಸರ್ ನೋಡುತ್ತಿದ್ರೆ ಬೇಡರ ಕಣ್ಣಪ್ಪ ಸಿನಿಮಾದ ಮೂಲ ಕಥೆಯನ್ನೇ ತಿರುಚಿದಂತೆ ಕಾಣುತ್ತಿದೆ. ಕಣ್ಣಪ್ಪ ತನ್ನ ಮುಗ್ಧ ಭಕ್ತಿಯಿಂದ ಶಿವನಿಗೆ ತನ್ನ ಕಣ್ಣುಗಳನ್ನೇ ಅರ್ಪಿಸಿ ಕೃಪೆಗೆ ಪಾತ್ರನಾದವನು. ಶ್ರೀಕಾಳಹಸ್ತಿಯಲ್ಲಿ ಕಣ್ಣಪ್ಪ ಜೀವನ ಸಾಗಿಸಿದ್ದನು ಎಂದು ಕಾವ್ಯಗಳಲ್ಲಿ ಹೇಳಲಾಗಿದೆ. ನಾಸ್ತಿಕನೂ ಆಗಿದ್ದ ಮುಗ್ಧ ಬೇಡ ದಿಣ್ಣ ಮುಂದೆ ಮಹಾನ್ ಶಿವಭಕ್ತನಾದ ಕಥೆಯಿತು. ಆದರೆ ಕಣ್ಣಪ್ಪ ಚಿತ್ರವನ್ನು ಸಂಪೂರ್ಣವಾಗಿ ನ್ಯೂಜಿಲೆಂಡ್ ಕಾಡುಗಳಲ್ಲಿ ಚಿತ್ರೀಕರಿಸಲಾಗಿದೆ. ಹಾಗಾಗಿ ವಾಸ್ತವ ಕಥೆಗೆ ಸಿನಿಮಾ ಬಹಳ ದೂರ ಇರುವಂತೆ ಕಾಣುತ್ತಿದೆ. ಇದಕ್ಕೆಲ್ಲಾ ಉತ್ತರ ಕಣ್ಣಪ್ಪ ಸಿನಿಮಾ ರಿಲೀಸ್ ಆದ ಮೇಲೆ ತಿಳಿಯಲಿದೆ.

ಇದನ್ನೂ ವೀಕ್ಷಿಸಿ:  Nayanthara: ಯಶ್ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್..! ಟಾಕ್ಸಿಕ್ ಟೀಂ ಸೇರಿದ ಲೇಡಿ ಸೂಪರ್ ಸ್ಟಾರ್!

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more