ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

Published : Nov 01, 2022, 06:42 PM ISTUpdated : Nov 01, 2022, 07:03 PM IST

ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ನಂತರ ಪುನೀತ್ (Punith Rajkumar) ಅವರ ಬಗ್ಗೆ ಮಾತನಾಡಿದ ಅವರು, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು.ಒಬ್ಬ ತಂದೆ, ಒಬ್ಬ ನಟ, ಒಬ್ಬ ಡಾನ್ಸರ್ (Dancer) ಹೊರತಾಗಿ ಅವರೊಬ್ಬ ಉತ್ತಮ ವ್ಯಕ್ತಿತ್ವದ ವ್ಯಕ್ತಿ. ನಾನು, ನಾನು ಮಾಡಿದ ಸಾಧನೆಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ. ಕೇವಲ ಪುನೀತ್ ಅವರ ಒಬ್ಬ ಗೆಳೆಯನಾಗಿ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆಸಿರುವುದಕ್ಕೆ ಧನ್ಯವಾದ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು. 
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more