ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!

ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!

Published : Nov 09, 2025, 09:24 AM IST

ಮದುವೆಯಾಗಿ 4 ವರ್ಷವಾದ್ರೂ ಈ ದಂಪತಿಗೆ ಸಂತಾನ ಭಾಗ್ಯ ಒಲಿದಿರಲಿಲ್ಲ. ಈ ಆಗ ಕತ್ರಿನಾಗೆ ಜ್ಯೋತಿಷಿಯೊಬ್ರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಬಗ್ಗೆ ಮಾಹಿತಿ ಕೊಟ್ಟಿದ್ರು. ಕಳೆದ ಮಾರ್ಚ್ ತಿಂಗಳಿನಲ್ಲಿ ಕತ್ರಿನಾ ಕರ್ನಾಟಕದ ಸುಪ್ರಸಿದ್ದ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ಕೊಟ್ಟಿದ್ರು. 

ಬಾಲಿವುಡ್‌ ತಾರಾ ದಂಪತಿ ವಿಕ್ಕಿ ಕೌಶಾಲ್ ಹಾಗೂ ಕತ್ರಿನಾ ಕೈಫ್ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಕತ್ರಿನಾ  ಮುದ್ದು ಗಂಡುಮಗುವಿಗೆ ಜನ್ಮಕೊಟ್ಟಿದ್ದು, ಈ ಖುಷಿ ಸಂಗತಿಯನ್ನ ತಾರಾಜೋಡಿ ಹಂಚಿಕೊಂಡಿದೆ.

ಅಪ್ಪ, ಅಮ್ಮನಾದ ಬಾಲಿವುಡ್ ತಾರಾದಂಪತಿ..!
ಯೆಸ್, ಬಾಲಿವುಡ್​ ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್​​ ಪೋಷಕರಾಗಿದ್ದಾರೆ. ಕತ್ರಿನಾ ಕೈಫ್  ಗಂಡು ಮಗುವಿಗೆ ಜನ್ಮ ನೀಡಿದ್ದು, ತಮ್ಮ ಮನೆಗೆ ಬಂದಿರೋ ಹೊಸ ಅತಿಥಿಯ ಬಗ್ಗೆ ಈ ತಾರಾಜೋಡಿ ಖುಷಿ ಸಮಾಚಾರ ಹಂಚಿಕೊಂಡಿದೆ.

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್  2021 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್​​ಗಿಂತಲೂ ಏಳು ವರ್ಷ ದೊಡ್ಡವರು. ವಯಸ್ಸಿನ ಅಂತರವನ್ನ ನಿರ್ಲಕ್ಷಿಸಿ ಕತ್ರಿನಾ & ವಿಕ್ಕಿ  ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು.

ಆದ್ರೆ ಮದುವೆಯಾಗಿ 4 ವರ್ಷವಾದ್ರೂ ಈ ದಂಪತಿಗೆ ಸಂತಾನ ಭಾಗ್ಯ ಒಲಿದಿರಲಿಲ್ಲ. ಈ ಆಗ ಕತ್ರಿನಾಗೆ ಜ್ಯೋತಿಷಿಯೊಬ್ರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಬಗ್ಗೆ ಮಾಹಿತಿ ಕೊಟ್ಟಿದ್ರು. ಕಳೆದ ಮಾರ್ಚ್ ತಿಂಗಳಿನಲ್ಲಿ ಕತ್ರಿನಾ ಕರ್ನಾಟಕದ ಸುಪ್ರಸಿದ್ದ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ಕೊಟ್ಟಿದ್ರು.

ಸುಬ್ರಮಣ್ಯ ಸನ್ನಿಧಾನದಲ್ಲಿ ಮೂರು ದಿನಗಳ ಕಾಲ ಇದ್ದು, ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ್ರು. ಸಾಮಾನ್ಯವಾಗಿ ಈ ಕ್ಷೇತ್ರದಲ್ಲಿ ಸಂತಾನ ಭಾಗ್ಯಕ್ಕಾಗಿ ಜನರು ಸರ್ಪ ಸಂಸ್ಕಾರ ಪೂಜೆ ಮಾಡಿಸ್ತಾರೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ವರೆಗೂ ಸಂತಾನ ಪ್ರಾಪ್ತಿಗಾಗಿ ಸುಬ್ರಮಣ್ಯನ ಮೊರೆ ಹೋಗ್ತಾರೆ.

ಕತ್ರಿನಾ ಕೂಡ ಭಕ್ತಿಭಾವದಿಂದ ಇಲ್ಲಿ ಪೂಜೆ ಸಲ್ಲಿಸಿದ್ರು. ಆ ಪೂಜೆಗೀಗ ಫಲ ಸಿಕ್ಕಿದೆ. ತಾರಾದಂಪತಿಗೆ ಪುತ್ರಭಾಗ್ಯ ಒಲಿದು ಬಂದಿದೆ. ಈ ಸಂತಸವನ್ನ ಈ ತಾರಾಜೋಡಿ ಹಂಚಿಕೊಂಡಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more