ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್! ವಿಡಿಯೋ ವೈರಲ್ ಬಳಿಕ ಕ್ಷಮೆ ಕೇಳಿದ ನಟ!

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್! ವಿಡಿಯೋ ವೈರಲ್ ಬಳಿಕ ಕ್ಷಮೆ ಕೇಳಿದ ನಟ!

Published : Jun 25, 2024, 09:49 AM IST

ನಟ ನಾಗಾರ್ಜುನ  ಬಳಿ ಫೋಟೋ ತೆಗೆಸಿಕೊಳ್ಳಲು ಓಡೋಡಿ ಬಂದ ಅಭಿಮಾನಿಯನ್ನು ಅವರ ಬಾಡಿಗಾರ್ಡ್ ತಳ್ಳಿ ಬೀಳಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗುತ್ತಿದೆ.

ನಟ ನಾಗಾರ್ಜುನ (Nagarjuna) ಅವರ ಒಂದು ವಿಡಿಯೋ ವೈರಲ್ ಆಗಿದೆ. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ(Photo)ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್(Bodyguard) ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿದ ಬಳಿಕ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್ ನಟ ಧನುಷ್ ಕೂಡ ಇದ್ದರು. ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್‌ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಇದಕ್ಕೆ ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಸ್ಟಾರ್ ನಟರನ್ನು ಆರಾಧಿಸುವುದನ್ನು ಮೊದಲು ಬಿಡಿ’ ಎಂದು ಅಭಿಮಾನಿಗಳಿಗೆ ಕೆಲವು ನೆಟ್ಟಿಗರು ಕಿವಿಮಾತು ಕೇಳಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿ ನಾಗಾರ್ಜುನ ಅವರು ಪ್ರತಿಕ್ರಿಯಿಸಿದ್ದಾರೆ. ‘ಇದು ಈಗತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದು ನಾಗಾರ್ಜುನ ಅವರು ಭರವಸೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿಯಿಂದ ಮನೆಯಲ್ಲಿ ಪೂಜೆ! ರಶ್ಮಿಕಾ ಮಂದಣ್ಣ ಹಾದಿಯಲ್ಲೇ ನಿಶ್ವಿಕಾ ನಾಯ್ಡು!

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
Read more