ಪುಷ್ಪ-2 ಕಾಲ್ತುಳಿತ, ಬದುಕುಳಿದ ಬಾಲಕನ ಆರ್ತನಾದ:‘ಅಮ್ಮ ಎಲ್ಲಿ..?’ ಅಲ್ಲು ಅಭಿಮಾನಿಯ ಪ್ರಶ್ನೆಗೆ ಉತ್ತರವೆಲ್ಲಿ?

ಪುಷ್ಪ-2 ಕಾಲ್ತುಳಿತ, ಬದುಕುಳಿದ ಬಾಲಕನ ಆರ್ತನಾದ:‘ಅಮ್ಮ ಎಲ್ಲಿ..?’ ಅಲ್ಲು ಅಭಿಮಾನಿಯ ಪ್ರಶ್ನೆಗೆ ಉತ್ತರವೆಲ್ಲಿ?

Published : May 01, 2025, 05:21 PM ISTUpdated : May 01, 2025, 05:37 PM IST

ಪುಷ್ಪ-2 ಸಿನಿಮಾ ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತ.. ಆ ಬಳಿಕ ನಡೆದ ಹೈಡ್ರಾಮಾ ಎಲ್ಲವೂ ಗೊತ್ತೇ ಇದೆ. ಆ ಕಾಲ್ತುಳಿತದಲ್ಲಿ ಸಿಲುಕಿ 5 ತಿಂಗಳ ಕಾಲ ಕೋಮಾದಲ್ಲಿದ್ದ ಬಾಲಕ ಕೊನೆಗೂ ಮೃತ್ಯು ಜಯಿಸಿದ್ದಾನೆ. 

ಪುಷ್ಪ-2 ಸಿನಿಮಾ ಪ್ರೀಮಿಯರ್ ಶೋ ಸಮಯದಲ್ಲಿ ನಡೆದ ಕಾಲ್ತುಳಿತ.. ಆ ಬಳಿಕ ನಡೆದ ಹೈಡ್ರಾಮಾ ಎಲ್ಲವೂ ಗೊತ್ತೇ ಇದೆ. ಆ ಕಾಲ್ತುಳಿತದಲ್ಲಿ ಸಿಲುಕಿ 5 ತಿಂಗಳ ಕಾಲ ಕೋಮಾದಲ್ಲಿದ್ದ ಬಾಲಕ ಕೊನೆಗೂ ಮೃತ್ಯು ಜಯಿಸಿದ್ದಾನೆ. ಆದ್ರೆ ಬದುಕುಳಿದ ಅಲ್ಲು ಅಭಿಮಾನಿಯ ಆರ್ತನಾದ ಕೇಳಿದ್ರೆ ಎಂಥವರಿಗೂ ಕಣ್ತುಂಬಿ ಬರುತ್ತೆ. ಪುಷ್ಪ-2.. ಭಾರತೀಯ ಸಿನಿರಂಗದಲ್ಲಿ ಹೊಸ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಆದ್ರೆ ಇಂಥಾ ಪುಷ್ಪ-2 ಬಿಡುಗಡೆ ಸಮಯದಲ್ಲಿ ಆದ ದುರಂತ, ಅದರ ಸಕ್ಸಸ್​ ಸಂಭ್ರಮವನ್ನೆಲ್ಲಾ ಮರೆಸುವಂತೆ ಮಾಡಿಬಿಟ್ಟಿತ್ತು. 

ಸಿನಿಮಾ ಬಿಡುಗಡೆಯ ಹಿಂದಿನ ದಿನ ಹೈದ್ರಾಬಾದ್​ನ ಸಂಧ್ಯಾ ಥಿಯೇಟರ್​ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ ಅನ್ನೋ ಮಹಿಳೆ ಸಾವನ್ನಪ್ಪಿದ್ರು. ಆಕೆಯ 9 ವರ್ಷದ ಮಗ ಶ್ರೀತೇಜ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ. ಈ ದುರ್ಘಟನೆಗೆ ಅಲ್ಲು ಅರ್ಜುನ್ ಬೇಜವಾಬ್ದಾರಿಯೇ ಕಾರಣ ಅಂತ ಆಕ್ರೋಶ ವ್ಯಕ್ತಪಡಿಸಿದ್ದ ತೆಲಂಗಾಣ ಸಿಎಂ, ಇಡೀ ತೆಲುಗು ಚಿತ್ರೋದ್ಯಮಕ್ಕೆ ವಾರ್ನ್ ಮಾಡಿದ್ರು. ಈ ಕೇಸ್​​ನಲ್ಲಿ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಒಂದು ದಿನ ಜೈಲು ಕೂಡ ನೋಡಿ ಬಂದ್ರು. ಈಗಲೂ ಈ ಕೇಸ್ ನಡೀತಾ ಇದೆ. ಇನ್ನೂ ಸಮಾಧಾನದ ವಿಚಾರ ಅಂದ್ರೆ ಗಂಭೀರವಾಗಿ ಗಾಯಗೊಂಡು ಕೋಮಾಗೆ ಜಾರಿದ್ದ ಬಾಲಕ ಶ್ರೀತೇಜ್​ ಕೊನೆಗೂ ಮೃತ್ಯವನ್ನ ಗೆದ್ದಿದ್ದಾರೆ. 4 ತಿಂಗಳು 25 ದಿನಗಳ ಬಳಿಕ ಬಾಲಕ ಶ್ರೀತೇಜ್​ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. 

ಆದ್ರೆ ಈ ಮೃತ್ಯ ಗೆದ್ದ ಬಾಲಕ ಕೇಳುತ್ತಿರೋ ಪ್ರಶ್ನೆಗಳಿಗೆ ಮಾತ್ರ ಉತ್ತರ ಸಿಕ್ತಾ ಇಲ್ಲ. ಹೌದು ಶ್ರೀತೇಜ್​ಗೆ ಆ ದಿನ ಸಿನಿಮಾ ನೋಡಲಿಕ್ಕೆ ತಾಯಿಯ ಜೊತೆಗೆ ಹೋಗಿದ್ದು, ನೂಕು ನುಗ್ಗಲು ಸಂಭವಿಸಿದ್ದು ಎಲ್ಲವೂ ನೆನಪಿದೆ. ಮುಂದೇನಾಯ್ತು ಅನ್ನೋದು ಗೊತ್ತಿಲ್ಲ. ಈ ಬಾಲಕ ತನ್ನ ತಾಯಿ ಎಲ್ಲಿ ಅನ್ನೋ ಪ್ರಶ್ನೆ ಕೇಳ್ತಾ ಇದ್ದಾನೆ. ಆದ್ರೆ ಈತನ ತಾಯಿ ಅದೇ ದಿನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ರು ಅನ್ನೋ ವಿಚಾರ ಈ ಮುಗ್ದ ಬಾಲಕನಿಗೆ ಗೊತ್ತಿಲ್ಲ. ಈಗಾಗ್ಲೇ ಪುಷ್ಪ-2 ತಂಡ ಮತ್ತು ಅಲ್ಲು ಅರ್ಜುನ್ ಬಾಲಕನ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಆಸ್ಪತ್ರೆಯ ವೆಚ್ಚಗಳನ್ನ ಕೂಡ ಸರ್ಕಾರ ಭರಿಸಿದೆ. ಅಂತೂ ಇಂತೂ ಬಾಲಕನ ಜೀವ ಉಳಿದಿದೆ. ಆದ್ರೆ ಈ ಅಭಿಮಾನಿಯ ಪ್ರಶ್ನೆಗಳಿಗೆ ಖುದ್ದು ಪುಷ್ಪನ ಬಳಿಯೂ ಉತ್ತರ ಇಲ್ಲ..!

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more