ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?

ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?

Published : Nov 09, 2025, 09:11 AM IST

ಕಿರಿಕ್ ಬ್ಯೂಟಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಎಂಗೇಜ್​ಮೆಂಟ್ ವಿಷ್ಯ ಈಗಾಗ್ಲೇ ಜಗಜ್ಜಾಹೀರಾಗಿದೆ. ನಿಶ್ಚಿತಾರ್ಥದ ಬಳಿಕ ವಿಜಯ್, ರಶ್ಮಿಕಾ ಸಿನಿಮಾಗಳಲ್ಲಿ ಬ್ಯುಸಿಯಾದ್ರೆ , ಅವರ ಮನೆಮಂದಿ ಮದುವೆಗೆ ಡೇಟ್ ಫಿಕ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲ ಮದುವೆ ನಡೆಯೋ ಜಾಗ ಕೂಡ ಫಿಕ್ಸ್ ಆಗಿದೆ.

ಕಿರಿಕ್ ಬ್ಯೂಟಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಎಂಗೇಜ್​ಮೆಂಟ್ ವಿಷ್ಯ ಈಗಾಗ್ಲೇ ಜಗಜ್ಜಾಹೀರಾಗಿದೆ. ನಿಶ್ಚಿತಾರ್ಥದ ಬಳಿಕ ವಿಜಯ್, ರಶ್ಮಿಕಾ ಸಿನಿಮಾಗಳಲ್ಲಿ ಬ್ಯುಸಿಯಾದ್ರೆ , ಅವರ ಮನೆಮಂದಿ ಮದುವೆಗೆ ಡೇಟ್ ಫಿಕ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲ ಮದುವೆ ನಡೆಯೋ ಜಾಗ ಕೂಡ ಫಿಕ್ಸ್ ಆಗಿದೆ.

ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್..!
ಯೆಸ್ ಕಳೆದ ಅಕ್ಟೋಬರ್ ತಿಂಗಳಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಎಂಗೇಜ್​ಮೆಂಟ್ ಗುಟ್ಟಾಗಿ ನಡೆದಿತ್ತು. ಎಂಗೇಜ್​ಮೆಂಟ್ ಟೈಂನಲ್ಲಿ ಫೆಬ್ರುವರಿ ತಿಂಗಳಲ್ಲಿ ಮದುವೆ ಮಾಡ್ಲಿಕ್ಕೆ ಇಬ್ಬರ ಮನೆ ಮಂದಿ ನಿರ್ಧಾರ ಮಾಡಿದ್ರು. ಫೈನಲಿ ಈಗ ಈ ತಾರಾಜೋಡಿ ಕಲ್ಯಾಣಕ್ಕೆ ಡೇಟ್ ಫಿಕ್ಸ್ ಮಾಡಿದ್ದಾರೆ. ಫೆಬ್ರುವರಿ 26ನೇ ಈ ತಾರೀಖು ವಿಜಯ್-ರಶ್ಮಿಕಾ ಮದುವೆ ನಡೆಯಲಿದೆ.

ರಾಜಸ್ಥಾನ ಅರಮನೆಯಲ್ಲಿ ತಾರಾಜೋಡಿ ಮದುವೆ..!
ಹೌದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ರಾಜಸ್ಥಾನದ ಪ್ಯಾಲೇಸ್ ಹೊಟೇಲ್‌ನಲ್ಲಿ ಮದುವೆ ಆಗೋದಕ್ಕೆ ನಿರ್ಧಾರ ಮಾಡಿದ್ದಾರೆ. ಕೋಟೆ ನಗರಿ ರಾಜಸ್ಥಾನದಲ್ಲಿ ಅನೇಕ ಅರಮನೆಗಳಿವೆ. ಉದಯಪುರದ ಅರಮನೆಯನ್ನ ಹೊಟೇಲ್ ಆಗಿ ಬದಲಾಯಿಸಿದ್ದು ಅಲ್ಲಿ ಇವೆಂಟ್​ಗಳನ್ನ ನಡೆಸೋದಕ್ಕೆ ಬಾಡಿಗೆ ಕೊಡಲಾಗುತ್ತೆ. ಈ ಉದಯಪುರ ಪ್ಯಾಲೇಸ್ ಹೊಟೇಲ್​ನಲ್ಲೇ ರಶ್ಮಿಕಾ ವಿಜಯ್ ಮದುವೆ ನಡೆಯೋದು ಫಿಕ್ಸ್ ಆಗಿದೆ.

ಮಡಿಕೇರಿ, ಹೈದ್ರಾಬಾದ್ ಬಿಟ್ಟು ಉದಯಪುರ ಯಾಕೆ..?
ರಶ್ಮಿಕಾ ಮಂದಣ್ಣ ಮಡಿಕೇರಿ ಮೂಲದವರು. ಕೊಡವ ಕುಟುಂಬದವರಾದ ಅವರ ಮೂಲ ಮನೆ ಈಗಲೂ ವಿರಾಜಪೇಟೆಯಲ್ಲಿದೆ. ಇನ್ನೂ ದೇವರಕೊಂಡ ಫ್ಯಾಮಿಲಿ ಹೈದರಾಬಾದ್​ನವರು. ಸೋ ವಧು-ವರ ಇಬ್ಬರ ಜಾಗವನ್ನೂ ಬಿಟ್ಟು ರಾಜಸ್ಥಾನದ ಉದಯಪುರದಲ್ಲಿ ಮದುವೆ ನಡೆಸಲಾಗ್ತಾ ಇದೆ. ಇದಕ್ಕೆ ಕಾರಣ ಬೇರೆನೂ ಇಲ್ಲ.. ಖಾಸಗಿತನಕ್ಕೆ ಅಡ್ಡಿ ಬರಬಾರದು ಅಂತ.

ಫೆ.26ಕ್ಕೆ ಡೆಸ್ಟಿನೇಷನ್ ವೆಡ್ಡಿಂಗ್.. ಆಪ್ತರಿಗಷ್ಟೇ ಆಹ್ವಾನ..!
ಈ ಹಿಂದೆ ಇದೇ ಉದಯಪುರ ಪ್ಯಾಲೇಸ್ ಹೊಟೇಲ್​ನಲ್ಲಿ ಹಲವು ಸೆಲೆಬ್ರಿಟಿಗಳ ಮದುವೆ ನಡೆದಿದೆ. ಇಲ್ಲಿಯೇ ರಶ್ಮಿಕಾ- ವಿಜಯ್ ಕೂಡ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ತಾ ಇದ್ದು, ತೀರಾ ಆಪ್ತರಿಗೆ ಮಾತ್ರ ಆಹ್ವಾನ ಹೋಗಲಿದೆಯಂತೆ.

ವಿಜಯ್ ರಶ್ಮಿಕಾದೂ ಬರೊಬ್ಬರಿ 8 ವರ್ಷಗಳ ಲವ್​ ಸ್ಟೋರಿ. ಫೈನಲಿ ಅದಕ್ಕೀಗ ಅಧಿಕೃತ ಮುದ್ರೆ ಬೀಳ್ತಾ ಇದೆ. ಮುಂದಿನ ವರ್ಷ ಗೀತಾ ಗೋವಿಂದ ಸತಿಪತಿರಾಗ್ತಾ ಇದ್ದಾರೆ.
ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ..

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more